ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಮೈಸೂರು,ಅ3,Tv10 ಕನ್ನಡ
ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಜಂಗಲ್ ಅಂಡ್ ರೆಸಾರ್ಟ್ಸ ನ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ಮೇಲೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿ ಅಶೋಕಾ ಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪಿಎಸ್ಸೈ ಸ್ಮಿತಾ(30) ಎಂಬುವರು ಪ್ರಕರಣ ದಾಖಲಿಸಿದ್ದಾರೆ.ನಿನ್ನೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದ ಭದ್ರತೆ ಕರ್ತವ್ಯದಲ್ಲಿ ಸ್ಮಿತಾ ನಿಯೋಜನೆಗೊಂಡಿದ್ದರು.ಈ ವೇಳೆ ಜಿಲ್ಲಾ ಉಸ್ತುವಾರಿ ಜೊತೆ ಬಂದ ಬಿಜೆಪಿ ಮುಖಂಡ ಅಪ್ಪಣ್ಣ ರವರನ್ನ ಸೂಚಿಸಿದ ಸ್ಥಳದಲ್ಲಿ ಕುಳಿತುಕೊಳ್ಳುವಂತೆ ಸ್ಮಿತಾ ತಿಳಿಸಿದ್ದಾರೆ.ಈ ವೇಳೆ ಸಹನೆ ಕಳೆದುಕೊಂಡ ಅಪ್ಪಣ್ಣ ಅವ್ಯಾಚ ಶಬ್ದಗಳನ್ನ ಬಳಸಿ ಧಂಕಿ ಹಾಕಿದ್ದಾರೆ.ಅಲ್ಲದೆ ಇವರಜೊತೆ ಬಂದ ಸಹಚರರು ಕೈ ಹಿಡಿದು ಎಳೆದಾಡಿದ್ದಾರೆ.ಈ ವೇಳೆ ಸ್ಮಿತಾ ಅವರ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ನೆರವಿಗೆ ಬಂದು ರಕ್ಷಿಸಿದ್ದಾರೆ.ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಅಪ್ಪಣ್ಣ ಹಾಗೂ ಸಹಚರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಮಿತಾ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *