ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಮೈಸೂರು,ಅ3,Tv10 ಕನ್ನಡ
ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಜಂಗಲ್ ಅಂಡ್ ರೆಸಾರ್ಟ್ಸ ನ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ಮೇಲೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿ ಅಶೋಕಾ ಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪಿಎಸ್ಸೈ ಸ್ಮಿತಾ(30) ಎಂಬುವರು ಪ್ರಕರಣ ದಾಖಲಿಸಿದ್ದಾರೆ.ನಿನ್ನೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದ ಭದ್ರತೆ ಕರ್ತವ್ಯದಲ್ಲಿ ಸ್ಮಿತಾ ನಿಯೋಜನೆಗೊಂಡಿದ್ದರು.ಈ ವೇಳೆ ಜಿಲ್ಲಾ ಉಸ್ತುವಾರಿ ಜೊತೆ ಬಂದ ಬಿಜೆಪಿ ಮುಖಂಡ ಅಪ್ಪಣ್ಣ ರವರನ್ನ ಸೂಚಿಸಿದ ಸ್ಥಳದಲ್ಲಿ ಕುಳಿತುಕೊಳ್ಳುವಂತೆ ಸ್ಮಿತಾ ತಿಳಿಸಿದ್ದಾರೆ.ಈ ವೇಳೆ ಸಹನೆ ಕಳೆದುಕೊಂಡ ಅಪ್ಪಣ್ಣ ಅವ್ಯಾಚ ಶಬ್ದಗಳನ್ನ ಬಳಸಿ ಧಂಕಿ ಹಾಕಿದ್ದಾರೆ.ಅಲ್ಲದೆ ಇವರಜೊತೆ ಬಂದ ಸಹಚರರು ಕೈ ಹಿಡಿದು ಎಳೆದಾಡಿದ್ದಾರೆ.ಈ ವೇಳೆ ಸ್ಮಿತಾ ಅವರ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ನೆರವಿಗೆ ಬಂದು ರಕ್ಷಿಸಿದ್ದಾರೆ.ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಅಪ್ಪಣ್ಣ ಹಾಗೂ ಸಹಚರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಮಿತಾ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *