ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಧಂಕಿ…ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ವಿರುದ್ದ FIR ದಾಖಲು…

ಮೈಸೂರು,ಅ3,Tv10 ಕನ್ನಡ
ಕರ್ತವ್ಯ ನಿರತ ಮಹಿಳಾ ಪಿಎಸ್ಸೈಗೆ ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಜಂಗಲ್ ಅಂಡ್ ರೆಸಾರ್ಟ್ಸ ನ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಅಪ್ಪಣ್ಣ ಮತ್ತು ಸಹಚರರ ಮೇಲೆ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿ ಅಶೋಕಾ ಪುರಂ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಪಿಎಸ್ಸೈ ಸ್ಮಿತಾ(30) ಎಂಬುವರು ಪ್ರಕರಣ ದಾಖಲಿಸಿದ್ದಾರೆ.ನಿನ್ನೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವ ದಸರಾ ಕಾರ್ಯಕ್ರಮದ ಭದ್ರತೆ ಕರ್ತವ್ಯದಲ್ಲಿ ಸ್ಮಿತಾ ನಿಯೋಜನೆಗೊಂಡಿದ್ದರು.ಈ ವೇಳೆ ಜಿಲ್ಲಾ ಉಸ್ತುವಾರಿ ಜೊತೆ ಬಂದ ಬಿಜೆಪಿ ಮುಖಂಡ ಅಪ್ಪಣ್ಣ ರವರನ್ನ ಸೂಚಿಸಿದ ಸ್ಥಳದಲ್ಲಿ ಕುಳಿತುಕೊಳ್ಳುವಂತೆ ಸ್ಮಿತಾ ತಿಳಿಸಿದ್ದಾರೆ.ಈ ವೇಳೆ ಸಹನೆ ಕಳೆದುಕೊಂಡ ಅಪ್ಪಣ್ಣ ಅವ್ಯಾಚ ಶಬ್ದಗಳನ್ನ ಬಳಸಿ ಧಂಕಿ ಹಾಕಿದ್ದಾರೆ.ಅಲ್ಲದೆ ಇವರಜೊತೆ ಬಂದ ಸಹಚರರು ಕೈ ಹಿಡಿದು ಎಳೆದಾಡಿದ್ದಾರೆ.ಈ ವೇಳೆ ಸ್ಮಿತಾ ಅವರ ಜೊತೆ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗಳು ನೆರವಿಗೆ ಬಂದು ರಕ್ಷಿಸಿದ್ದಾರೆ.ಅವ್ಯಾಚ ಶಬ್ದಗಳಿಂದ ನಿಂದಿಸಿ ಧಂಕಿ ಹಾಕಿದ ಅಪ್ಪಣ್ಣ ಹಾಗೂ ಸಹಚರರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಮಿತಾ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *