ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ.ಸೋಮಶೇಖರ್

ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ.ಸೋಮಶೇಖರ್

ಜಂಬೂಸವಾರಿಗೆ ಸಕಲ ಸಿದ್ಧತೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಅ4,Tv10 ಕನ್ನಡ
ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು.
ಮಾವುತ ಮತ್ತು ಕಾವಾಡಿಗರು ಮತ್ತವರ ಕುಟುಂಬದವರಿಗೆ ಅರಮನೆ ಆವರಣದಲ್ಲಿ ಉಪಹಾರ ಬಡಿಸಿ ಯೋಗಕ್ಷೇಮ ವಿಚಾರಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ಜಂಬೂಸವಾರಿ ಸಾಗುವ ರಸ್ತೆಯಲ್ಲಿ ಸಾರ್ವಜನಿಕರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಆನೆಗಳಿಗೆ ಒಂದು ತಿಂಗಳಿಂದ ತರಬೇತಿ ನೀಡಲಾಗಿದೆ. ನಾಳೆ ಸಂಜೆ ಜಂಬೂಸವಾರಿ ಸಾಗಲಿದೆ, ಇದರ ಜೊತೆಗೆ 40 ಸ್ತಬ್ಧಚಿತ್ರಗಳು, ಕಲಾತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ ಎಂದು ಹೇಳಿದರು.ಬಂದೋಬಸ್ತ್ ಗಾಗಿ ಸುಮಾರು 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಹೈಕೋರ್ಟ್ ನ್ಯಾಯಾಧೀಶರು ಸೇರಿದಂತೆ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.
ಪಾಸ್ ವಿತರಣೆ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಎಷ್ಟು ಸ್ಥಳಾವಕಾಶ ಇದೆಯೋ ಅಷ್ಟು ವ್ಯವಸ್ಥೆ ಮಾಡಲಾಗಿದೆ. ದಸರಾ ಎಂದರೆ ಕೇವಲ ಪಾಸ್ ಅಲ್ಲ. ಒಂದು ವಾರಗಳ ನಡೆದ ಯುವ ದಸರಾ, ಯುವ ಸಂಭ್ರಮ, ರೈತ ದಸರಾ, ಕುಸ್ತಿ ಇದ್ಯಾವುದಕ್ಕೂ ಪಾಸ್ ಇರಲಿಲ್ಲ. 15-20 ಲಕ್ಷ ಜನ ಸೇರುವ ನಿರೀಕ್ಷೆಯಿದೆ ಎಂದು ಹೇಳಿದರು.ದಸರಾ ಉಪಸಮಿತಿ ವ್ಯವಸ್ಥಿತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಿತ್ತು. ಅಪ್ಪು ನಮನ, ಯುವ ದಸರಾ, ರೈತ ದಸರಾ, ಕವಿಗೋಷ್ಠಿ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದವು. ಮಹಾರಾಣಿ ಅವರು ಕೂಡ ಎಲ್ಲಾ ರೀತಿಯ ಸಹಕಾರ ನೀಡಿದರು. ಅಧಿಕಾರಿಗಳು, ಮೈಸೂರು ಜನತೆಯ ಸಂಪೂರ್ಣ ಸಹಕಾರದಿಂದ ಎಲ್ಲವೂ ಸುಸೂತ್ರವಾಗಿ ಸಾಗಿದೆ ಎಂದು ಹೇಳಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *