ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು…

ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು…

ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು…

ಬೆಂಗಳೂರು,ಅ15,Tv10 ಕನ್ನಡ ಕಬ್ಬುದರ ನಿಗದಿ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ.ಇಂದು ಬೆಂಗಳೂರಿನಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತಪ್ರತಿನಿಧಿಗಳ ಸಭೆಯಲ್ಲಿ ಅಂತಮ ತೀರ್ಮಾನ ಆಗಿಲ್ಲ. ರೈತ ಮುಖಂಡರು ಸರ್ಕಾರಕ್ಕೆ 20 ರ ವರೆಗೆ ಅಂದರೆ ಐದು ದಿನಗಳ ಅಂತಿಮ ಗಡುವು ನೀಡಿದ್ದಾರೆ.
ವಿಧಾನಸೌಧದಲ್ಲಿ ಸಕ್ಕರೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು, ಸುಮಾರು ಮೂರು ಗಂಟೆಗಳ ಕಾಲ ಚರ್ಚೆ ನಡೆದರು ಯಾವುದೇ ತೀರ್ಮಾನವಾಗಲಿಲ್ಲ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತನಾಡಿ ಸಭೆಯಲ್ಲಿ ರೈತ ಮುಖಂಡರು ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ಎರಡು ದಿನದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅವರ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ರೈತ ಪ್ರತಿನಿಧಿಗಳ ಸಭೆ ಕರೆದು ರೈತರಿಗೆ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿ ಸಭೆಯನ್ನು ಮುಕ್ತಾಯಗೊಳಿಸಿದರು.ಸಭೆಯಲ್ಲಿ ಭಾಗವಹಿಸಿದ್ದ ರೈತರು ಇವತ್ತೇ ಕಬ್ಬುದರ ನಿಗದಿಯಾಗಬೇಕು ಎಂದು ಪಟ್ಟು ಹಿಡಿದಾಗ ಮುಖ್ಯಮಂತ್ರಿಗಳು ಪ್ರವಾಸ ಹೋಗಿರುವ ಕಾರಣ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ರೈತರ ಮನವೊಲಿಸಿದರು.
ಪಂಜಾಬ್ ರಾಜ್ಯದಲ್ಲಿ 3800 ಉತ್ತರ ಪ್ರದೇಶದಲ್ಲಿ 3500 ಗುಜರಾತ್ ನಲ್ಲಿ 4400 ದರ ನಿಗದಿ ಮಾಡಿದ್ದಾರೆ. ರಾಜ್ಯ ಸರ್ಕಾರವು ಇದನ್ನು ಮನಗಂಡು ಬೆಲೆಯನ್ನ ನ್ಯಾಯಯುತವಾಗಿ ನಿಗದಿ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.ರೈತ ಸಂಘದ ಬಡಗಲಪುರ ನಾಗೇಂದ್ರ, ಚೂನಪ್ಪ ಪೂಜಾರಿ, ರಮೇಶ್ ಹೂಗಾರ್, ಜೋಶಿ, ನಾರಾಯಣರೆಡ್ಡಿ, ಸುನೀತಾ ಪುಟ್ಟಣ್ಣಯ್ಯ, ಸುರೇಶ್ ಪಾಟೀಲ್,
ಎಂ ವಿ ಗಾಡಿ, ತೇಜಸ್ವಿ ಪಟೇಲ್,
ಆತ್ತಹಳಿ ದೇವರಾಜ್ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಗೇರಿ, ದಕ್ಷಿಣ ಭಾರತ ಸಕ್ಕರೆ ಖಾಸಗಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಲ ಅಧ್ಯಕ್ಷ ಜಗದೀಶ್ ಗುಡುಗಂಟಿ ಇನ್ನೂ ಮುಂತಾದ 200 ಹೂ ಹೆಚ್ಚು ರೈತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *