ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು…

ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು…

ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು…

ಬೆಂಗಳೂರು,ಅ15,Tv10 ಕನ್ನಡ ಕಬ್ಬುದರ ನಿಗದಿ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ.ಇಂದು ಬೆಂಗಳೂರಿನಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತಪ್ರತಿನಿಧಿಗಳ ಸಭೆಯಲ್ಲಿ ಅಂತಮ ತೀರ್ಮಾನ ಆಗಿಲ್ಲ. ರೈತ ಮುಖಂಡರು ಸರ್ಕಾರಕ್ಕೆ 20 ರ ವರೆಗೆ ಅಂದರೆ ಐದು ದಿನಗಳ ಅಂತಿಮ ಗಡುವು ನೀಡಿದ್ದಾರೆ.
ವಿಧಾನಸೌಧದಲ್ಲಿ ಸಕ್ಕರೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು, ಸುಮಾರು ಮೂರು ಗಂಟೆಗಳ ಕಾಲ ಚರ್ಚೆ ನಡೆದರು ಯಾವುದೇ ತೀರ್ಮಾನವಾಗಲಿಲ್ಲ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತನಾಡಿ ಸಭೆಯಲ್ಲಿ ರೈತ ಮುಖಂಡರು ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ಎರಡು ದಿನದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅವರ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ರೈತ ಪ್ರತಿನಿಧಿಗಳ ಸಭೆ ಕರೆದು ರೈತರಿಗೆ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿ ಸಭೆಯನ್ನು ಮುಕ್ತಾಯಗೊಳಿಸಿದರು.ಸಭೆಯಲ್ಲಿ ಭಾಗವಹಿಸಿದ್ದ ರೈತರು ಇವತ್ತೇ ಕಬ್ಬುದರ ನಿಗದಿಯಾಗಬೇಕು ಎಂದು ಪಟ್ಟು ಹಿಡಿದಾಗ ಮುಖ್ಯಮಂತ್ರಿಗಳು ಪ್ರವಾಸ ಹೋಗಿರುವ ಕಾರಣ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ರೈತರ ಮನವೊಲಿಸಿದರು.
ಪಂಜಾಬ್ ರಾಜ್ಯದಲ್ಲಿ 3800 ಉತ್ತರ ಪ್ರದೇಶದಲ್ಲಿ 3500 ಗುಜರಾತ್ ನಲ್ಲಿ 4400 ದರ ನಿಗದಿ ಮಾಡಿದ್ದಾರೆ. ರಾಜ್ಯ ಸರ್ಕಾರವು ಇದನ್ನು ಮನಗಂಡು ಬೆಲೆಯನ್ನ ನ್ಯಾಯಯುತವಾಗಿ ನಿಗದಿ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.ರೈತ ಸಂಘದ ಬಡಗಲಪುರ ನಾಗೇಂದ್ರ, ಚೂನಪ್ಪ ಪೂಜಾರಿ, ರಮೇಶ್ ಹೂಗಾರ್, ಜೋಶಿ, ನಾರಾಯಣರೆಡ್ಡಿ, ಸುನೀತಾ ಪುಟ್ಟಣ್ಣಯ್ಯ, ಸುರೇಶ್ ಪಾಟೀಲ್,
ಎಂ ವಿ ಗಾಡಿ, ತೇಜಸ್ವಿ ಪಟೇಲ್,
ಆತ್ತಹಳಿ ದೇವರಾಜ್ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಗೇರಿ, ದಕ್ಷಿಣ ಭಾರತ ಸಕ್ಕರೆ ಖಾಸಗಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಲ ಅಧ್ಯಕ್ಷ ಜಗದೀಶ್ ಗುಡುಗಂಟಿ ಇನ್ನೂ ಮುಂತಾದ 200 ಹೂ ಹೆಚ್ಚು ರೈತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು…

Spread the love

Related post

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…
BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

BTL ವಿಧ್ಯಾಸಂಸ್ಥೆಗೆ ದ್ರೋಹ…30 ಲಕ್ಷ ವಂಚನೆ…ಕಾರ್ಯದರ್ಶಿ ವಿರುದ್ದ FIR…

ಮೈಸೂರು,ಜು2,Tv10 ಕನ್ನಡ ವಿದ್ಯಾಸಂಸ್ಥೆಗೆ 30 ಲಕ್ಷ ವಂಚಿಸಿ ದ್ರೋಹಬಗೆದ ಕಾರ್ಯದರ್ಶಿ ವಿರುದ್ದ ಎನ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೈಸೂರಿನ ಕೆಸರೆ ಬಡಾವಣೆಯಲ್ಲಿರುವ ಬಿಟಿಎಲ್ ವಿದ್ಯಾವಾಹಿನಿ ಸ್ಕೂಲ್ ಮತ್ತು ಕಾಂಪೋಸಿಟ್ ಪಿಯು…

Leave a Reply

Your email address will not be published. Required fields are marked *