ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು…

ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು…

ಬಗೆಹರಿಯದ ಕಬ್ಬು ಬೆಲೆ ದರ ನಿಗದಿ…ಸರ್ಕಾರಕ್ಕೆ 5 ದಿನಗಳ ಗಡುವು…

ಬೆಂಗಳೂರು,ಅ15,Tv10 ಕನ್ನಡ ಕಬ್ಬುದರ ನಿಗದಿ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣುತ್ತಿಲ್ಲ.ಇಂದು ಬೆಂಗಳೂರಿನಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತಪ್ರತಿನಿಧಿಗಳ ಸಭೆಯಲ್ಲಿ ಅಂತಮ ತೀರ್ಮಾನ ಆಗಿಲ್ಲ. ರೈತ ಮುಖಂಡರು ಸರ್ಕಾರಕ್ಕೆ 20 ರ ವರೆಗೆ ಅಂದರೆ ಐದು ದಿನಗಳ ಅಂತಿಮ ಗಡುವು ನೀಡಿದ್ದಾರೆ.
ವಿಧಾನಸೌಧದಲ್ಲಿ ಸಕ್ಕರೆ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು, ಸುಮಾರು ಮೂರು ಗಂಟೆಗಳ ಕಾಲ ಚರ್ಚೆ ನಡೆದರು ಯಾವುದೇ ತೀರ್ಮಾನವಾಗಲಿಲ್ಲ ಸಕ್ಕರೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಮಾತನಾಡಿ ಸಭೆಯಲ್ಲಿ ರೈತ ಮುಖಂಡರು ಪ್ರಸ್ತಾಪಿಸಿರುವ ವಿಷಯಗಳ ಬಗ್ಗೆ ಎರಡು ದಿನದಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅವರ ಅಧ್ಯಕ್ಷತೆಯಲ್ಲಿ ಮತ್ತೊಮ್ಮೆ ರೈತ ಪ್ರತಿನಿಧಿಗಳ ಸಭೆ ಕರೆದು ರೈತರಿಗೆ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿ ಸಭೆಯನ್ನು ಮುಕ್ತಾಯಗೊಳಿಸಿದರು.ಸಭೆಯಲ್ಲಿ ಭಾಗವಹಿಸಿದ್ದ ರೈತರು ಇವತ್ತೇ ಕಬ್ಬುದರ ನಿಗದಿಯಾಗಬೇಕು ಎಂದು ಪಟ್ಟು ಹಿಡಿದಾಗ ಮುಖ್ಯಮಂತ್ರಿಗಳು ಪ್ರವಾಸ ಹೋಗಿರುವ ಕಾರಣ ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ರೈತರ ಮನವೊಲಿಸಿದರು.
ಪಂಜಾಬ್ ರಾಜ್ಯದಲ್ಲಿ 3800 ಉತ್ತರ ಪ್ರದೇಶದಲ್ಲಿ 3500 ಗುಜರಾತ್ ನಲ್ಲಿ 4400 ದರ ನಿಗದಿ ಮಾಡಿದ್ದಾರೆ. ರಾಜ್ಯ ಸರ್ಕಾರವು ಇದನ್ನು ಮನಗಂಡು ಬೆಲೆಯನ್ನ ನ್ಯಾಯಯುತವಾಗಿ ನಿಗದಿ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಒತ್ತಾಯಿಸಿದರು.ರೈತ ಸಂಘದ ಬಡಗಲಪುರ ನಾಗೇಂದ್ರ, ಚೂನಪ್ಪ ಪೂಜಾರಿ, ರಮೇಶ್ ಹೂಗಾರ್, ಜೋಶಿ, ನಾರಾಯಣರೆಡ್ಡಿ, ಸುನೀತಾ ಪುಟ್ಟಣ್ಣಯ್ಯ, ಸುರೇಶ್ ಪಾಟೀಲ್,
ಎಂ ವಿ ಗಾಡಿ, ತೇಜಸ್ವಿ ಪಟೇಲ್,
ಆತ್ತಹಳಿ ದೇವರಾಜ್ ಕಬ್ಬು ಅಭಿವೃದ್ಧಿ ಆಯುಕ್ತ ಶಿವಾನಂದ ಕೆಲಗೇರಿ, ದಕ್ಷಿಣ ಭಾರತ ಸಕ್ಕರೆ ಖಾಸಗಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಲ ಅಧ್ಯಕ್ಷ ಜಗದೀಶ್ ಗುಡುಗಂಟಿ ಇನ್ನೂ ಮುಂತಾದ 200 ಹೂ ಹೆಚ್ಚು ರೈತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *