ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ಹುಣಸೂರು,ಅ17,Tv10 ಕನ್ನಡ
ಮೂರು ವರ್ಷಗಳ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬವೊಂದು ಅತಂತ್ರಕ್ಕೆ ಸಿಲುಕಿದೆ.ಮನೆ ಬೀಗ ಮುರಿದು ಚಿನ್ನಾಭರಣ ಲೂಟಿ ಮಾಡಿದ ಕಳ್ಳನನ್ನ ಹಿಡಿಯುವಲ್ಲಿ ವಿಫಲರಾದ ಪೊಲೀಸರ ವಿರುದ್ದ ಆಕ್ರೋಷ ಹೊರಹಾಕಿರುವ ಕುಟುಂಬ ನ್ಯಾಯ ದೊರೆಯದಿದ್ದಲ್ಲಿ ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿಯ ಈ ರೈತ ಕುಟುಂಬ ನೆರವಿಗೆ ಪೊಲೀಸ್ ಅಧಿಕಾರಿಗಳು ಬರುವರೇ ಎಂಬ ಪ್ರಶ್ನೆ ಉದ್ಭವಿಸಿದೆ..

ಮಾರ್ಚ್ 1,2019 ರಂದು ಹಿರಿಕ್ಯಾತನಹಳ್ಳಿಯ ವಿಜಯ್ ಕುಮಾರ್ ರವರ ಮನೆಗೆ ಕನ್ನ ಹಾಕಿದ ಖದೀಮರು 10 ಲಕ್ಷ ಮೌಲ್ಯದ 520 ಗ್ರಾಂ ಚಿನ್ನಾಭರಣ ಹಾಗೂ 16 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.ಈ ಬಗ್ಗೆ ವಿಜಯಕುಮಾರ್ ರವರು ಸಂಶಯಾಸ್ಪದ ವ್ಯಕ್ತಿಗಳ ಹೆಸರು ತಿಳಿಸಿ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡುವಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗಿ 3 ವರ್ಷ ಕಳೆದಿದೆ.ಇದುವರೆಗೆ ಆರೋಪಿಯೂ ಪತ್ತೆಯಾಗಿಲ್ಲ ಪದಾರ್ಥಗಳೂ ಸಿಕ್ಕಿಲ್ಲ.ಪೊಲೀಸ್ ಠಾಣೆಗೆ ಸುತ್ತಾಡಿ ಬಸವಳಿದಿರುವ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ.ಪೊಲೀಸರ ನಿರ್ಲಕ್ಷ್ಯತೆಗೆ ಬೇಸತ್ತಿರುವ ಕುಟುಂಬ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನೋವಿನಿಂದ ಹೇಳುತ್ತಿದೆ.ಇನ್ನಾದರೂ ಈ ಕುಟುಂಬದ ನೆರವಿಗೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬರಬೇಕಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *