ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ನ್ಯಾಯ ಸಿಗದಿದ್ದಲ್ಲಿ ಪೊಲೀಸ್ ಸ್ಟೇಷನ್ ಮುಂದೆ ಆತ್ಮಹತ್ಯೆ ಮಾಡ್ಕೋತೀವಿ…3 ವರ್ಷದ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬದ ಅಳಲು…

ಹುಣಸೂರು,ಅ17,Tv10 ಕನ್ನಡ
ಮೂರು ವರ್ಷಗಳ ಹಿಂದೆ ಚಿನ್ನಾಭರಣ ಕಳೆದುಕೊಂಡ ರೈತ ಕುಟುಂಬವೊಂದು ಅತಂತ್ರಕ್ಕೆ ಸಿಲುಕಿದೆ.ಮನೆ ಬೀಗ ಮುರಿದು ಚಿನ್ನಾಭರಣ ಲೂಟಿ ಮಾಡಿದ ಕಳ್ಳನನ್ನ ಹಿಡಿಯುವಲ್ಲಿ ವಿಫಲರಾದ ಪೊಲೀಸರ ವಿರುದ್ದ ಆಕ್ರೋಷ ಹೊರಹಾಕಿರುವ ಕುಟುಂಬ ನ್ಯಾಯ ದೊರೆಯದಿದ್ದಲ್ಲಿ ಪೊಲೀಸ್ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ.ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿಯ ಈ ರೈತ ಕುಟುಂಬ ನೆರವಿಗೆ ಪೊಲೀಸ್ ಅಧಿಕಾರಿಗಳು ಬರುವರೇ ಎಂಬ ಪ್ರಶ್ನೆ ಉದ್ಭವಿಸಿದೆ..

ಮಾರ್ಚ್ 1,2019 ರಂದು ಹಿರಿಕ್ಯಾತನಹಳ್ಳಿಯ ವಿಜಯ್ ಕುಮಾರ್ ರವರ ಮನೆಗೆ ಕನ್ನ ಹಾಕಿದ ಖದೀಮರು 10 ಲಕ್ಷ ಮೌಲ್ಯದ 520 ಗ್ರಾಂ ಚಿನ್ನಾಭರಣ ಹಾಗೂ 16 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ.ಈ ಬಗ್ಗೆ ವಿಜಯಕುಮಾರ್ ರವರು ಸಂಶಯಾಸ್ಪದ ವ್ಯಕ್ತಿಗಳ ಹೆಸರು ತಿಳಿಸಿ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡುವಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.FIR ದಾಖಲಾಗಿ 3 ವರ್ಷ ಕಳೆದಿದೆ.ಇದುವರೆಗೆ ಆರೋಪಿಯೂ ಪತ್ತೆಯಾಗಿಲ್ಲ ಪದಾರ್ಥಗಳೂ ಸಿಕ್ಕಿಲ್ಲ.ಪೊಲೀಸ್ ಠಾಣೆಗೆ ಸುತ್ತಾಡಿ ಬಸವಳಿದಿರುವ ಕುಟುಂಬ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ.ಪೊಲೀಸರ ನಿರ್ಲಕ್ಷ್ಯತೆಗೆ ಬೇಸತ್ತಿರುವ ಕುಟುಂಬ ಠಾಣೆ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನೋವಿನಿಂದ ಹೇಳುತ್ತಿದೆ.ಇನ್ನಾದರೂ ಈ ಕುಟುಂಬದ ನೆರವಿಗೆ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಬರಬೇಕಿದೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *