ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

  • Crime
  • October 21, 2022
  • No Comment
  • 218

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ಮೈಸೂರು,ಅ21,Tv10 ಕನ್ನಡ
ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಮೈಸೂರು-ನಂಜನಗೂಡು ರಸ್ತೆಯ ಆರ್.ಎಂ.ಪಿ.ಬಳಿ ನಡೆದಿದೆ.ಕ್ಯಾತಮಾರನಹಳ್ಳಿಯ ಮಹದೇವಮ್ಮ(55) ಮೃತ ದುರ್ದೈವಿ. ಮಗನ ಜೊತೆ ಸ್ಕೂಟರ್ ನಲ್ಲಿ ನಂಜನಗೂಡಿನಿಂದ ಮೈಸೂರಿಗೆ ಹಿಂದಿರುಗುವಾಗ ದುರ್ಘಟನೆ ನಡೆದಿದೆ.ಮಗ ಚಿರಂತನ್ ಗೆ ಸಣ್ಣಪುಟ್ಟ ಗಾಯಗಳಾಗಿದೆ.ಹೆಲ್ಮೆಟ್ ಧರಿಸದ ಹಿನ್ನಲೆ ತಲೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಮಹದೇವಮ್ಮ ಮೃತಪಟ್ಟಿದ್ದಾರೆ.ನಂಜನಗೂಡು ದೇವಸ್ಥಾನಕ್ಕೆ ತೆರಳಿ ಮೈಸೂರಿಗೆ ತಾಯಿ ಮಗ ಹಿಂದಿರುಗುತ್ತಿದ್ದಾಗ ಆರ್.ಎಂ.ಪಿ ಬಳಿ ಹಸು ಅಡ್ಡ ಬಂದಿದೆ.ಢಿಕ್ಕಿ ಹೊಡೆಯುವುದನ್ನ ತಪ್ಪಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.ಈ ವೇಳೆ ಹಿಂಬದಿ ಕುಳಿತಿದ್ದ ಮಹದೇವಮ್ಮ ಸ್ಕೂಟರ್ ನಿಂದ ಆಯತಪ್ಪಿ ಬಿದ್ದಿದ್ದಾರೆ.ತಲೆಗೆ ಗಂಭೀರ ಗಾಯವಾಗಿದೆ.ಕೆ.ಆರ್.ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಹದೇವಮ್ಮಮೃತಪಟ್ಟಿದ್ದಾರೆ.ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…
ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ ಬ್ರೇಕ್…400 ಕ್ಕೂ ಹೆಚ್ಚು ಪ್ರಕರಣ ದಾಖಲು…

ಮೈಸೂರು ಪೊಲೀಸ್ ಅಲರ್ಟ್…ರೌಡಿ ಪ್ರತಿಬಂಧಕ ದಳದಿಂದ ವಿಶೇಷ ಕಾರ್ಯಾಚರಣೆ…ಕಾನೂನು ಬಾಹಿರ ಚಟುವಟಿಕೆಗೆ…

ಮೈಸೂರು,ಅ12,Tv10 ಕನ್ನಡ ಇತ್ತೀಚೆಗೆ ನಡೆದ ಭೀಕರ ಕೊಲೆ ರೇಪ್ ಅಂಡ್ ಮರ್ಡರ್ ಮೈಸೂರು ಪೊಲೀಸರ ಕಾರ್ಯಚಟುವಟಿಕೆಯನ್ನ ಪ್ರಶ್ನಿಸುವಂತೆ ಮಾಡಿದೆ.ಕಾನೂನು ಬಾಹಿರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸ್ ಪಡೆ ಸನ್ನದ್ದಾಗಿ…

Leave a Reply

Your email address will not be published. Required fields are marked *