ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

  • Crime
  • October 21, 2022
  • No Comment
  • 253

ರಸ್ತೆ ದಾಟುತ್ತಿದ್ದ ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವು…ಮಗನಿಗೆ ಗಾಯ…

ಮೈಸೂರು,ಅ21,Tv10 ಕನ್ನಡ
ಹಸುವಿಗೆ ಢಿಕ್ಕಿ ಹೊಡೆದು ಆಯತಪ್ಪಿ ಸ್ಕೂಟರ್ ನಿಂದ ಬಿದ್ದ ಮಹಿಳೆ ಸಾವನ್ನಪ್ಪಿದ ಘಟನೆ ಮೈಸೂರು-ನಂಜನಗೂಡು ರಸ್ತೆಯ ಆರ್.ಎಂ.ಪಿ.ಬಳಿ ನಡೆದಿದೆ.ಕ್ಯಾತಮಾರನಹಳ್ಳಿಯ ಮಹದೇವಮ್ಮ(55) ಮೃತ ದುರ್ದೈವಿ. ಮಗನ ಜೊತೆ ಸ್ಕೂಟರ್ ನಲ್ಲಿ ನಂಜನಗೂಡಿನಿಂದ ಮೈಸೂರಿಗೆ ಹಿಂದಿರುಗುವಾಗ ದುರ್ಘಟನೆ ನಡೆದಿದೆ.ಮಗ ಚಿರಂತನ್ ಗೆ ಸಣ್ಣಪುಟ್ಟ ಗಾಯಗಳಾಗಿದೆ.ಹೆಲ್ಮೆಟ್ ಧರಿಸದ ಹಿನ್ನಲೆ ತಲೆಗೆ ಗಂಭೀರ ಪೆಟ್ಟು ಬಿದ್ದ ಪರಿಣಾಮ ಮಹದೇವಮ್ಮ ಮೃತಪಟ್ಟಿದ್ದಾರೆ.ನಂಜನಗೂಡು ದೇವಸ್ಥಾನಕ್ಕೆ ತೆರಳಿ ಮೈಸೂರಿಗೆ ತಾಯಿ ಮಗ ಹಿಂದಿರುಗುತ್ತಿದ್ದಾಗ ಆರ್.ಎಂ.ಪಿ ಬಳಿ ಹಸು ಅಡ್ಡ ಬಂದಿದೆ.ಢಿಕ್ಕಿ ಹೊಡೆಯುವುದನ್ನ ತಪ್ಪಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.ಈ ವೇಳೆ ಹಿಂಬದಿ ಕುಳಿತಿದ್ದ ಮಹದೇವಮ್ಮ ಸ್ಕೂಟರ್ ನಿಂದ ಆಯತಪ್ಪಿ ಬಿದ್ದಿದ್ದಾರೆ.ತಲೆಗೆ ಗಂಭೀರ ಗಾಯವಾಗಿದೆ.ಕೆ.ಆರ್.ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮಹದೇವಮ್ಮಮೃತಪಟ್ಟಿದ್ದಾರೆ.ಕೆ.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *