ತ್ರಿಪುರ ಭೈರವಿ ಮಠದಲ್ಲಿ ಅಖಂಡ ಭಾರತಕ್ಕಾಗಿ ಒಂದು ದೀಪ ಕಾರ್ಯಕ್ರಮ… ವೀರಸಾವರ್ಕರ್ ಯುವ ಬಳಗದಿಂದ ಆಚರಣೆ…

ತ್ರಿಪುರ ಭೈರವಿ ಮಠದಲ್ಲಿ ಅಖಂಡ ಭಾರತಕ್ಕಾಗಿ ಒಂದು ದೀಪ ಕಾರ್ಯಕ್ರಮ… ವೀರಸಾವರ್ಕರ್ ಯುವ ಬಳಗದಿಂದ ಆಚರಣೆ…

ತ್ರಿಪುರ ಭೈರವಿ ಮಠದಲ್ಲಿ ಅಖಂಡ ಭಾರತಕ್ಕಾಗಿ ಒಂದು ದೀಪ ಕಾರ್ಯಕ್ರಮ… ವೀರಸಾವರ್ಕರ್ ಯುವ ಬಳಗದಿಂದ ಆಚರಣೆ…

ಮೈಸೂರು,ಅ25,Tv10 ಕನ್ನಡ
ಡಿ.ದೇವರಾಜ ಅರಸು ರಸ್ತೆಯ ತ್ರಿಪುರಭೈರವಿ ಮಠದ ಆವರಣದಲ್ಲಿ ವೀರಸಾವರ್ಕರ್ ಯುವ ಬಳಗದ ವತಿಯಿಂದ ಅಖಂಡ ಭಾರತಕ್ಕೆ ಒಂದು ದೀಪ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ಮಯನ್ಮಾರ್, ಥಾಯ್ಲಾಂಡ್, ಕಾಂಬೋಡಿಯಾ, ವಿಯೆಟ್ನಾಂ, ಇಂಡೋನೇಷಿಯಾ, ಶ್ರೀಲಂಕಾ, ಮಾಲ್ಡೀವ್ಸ್ ಸೇರಿದಂತೆ ಅನೇಕ ದೇಶಗಳಲ್ಲಿ ಹಿಂದೂಸ್ಥಾನದ ಸಂಸ್ಕೃತಿಯು ನೆಲೆಸಿತ್ತು.ಕಾಲಾಂತರದಲ್ಲಿ ಬದಲಾವಣೆಗಳಾಗಿ ವಿವಿಧ ದೇಶಗಳಾಗಿ ಗಡಿ ಹಾಕಿಕೊಂಡಿವೆ. ಎಲ್ಲವನ್ನೂ ಮತ್ತೆ ಒಟ್ಟುಗೂಡಿಸಿ ಅಖಂಡ ಭಾರತವನ್ನಾಗಿಸುವ ಸಂಕಲ್ಪಕ್ಕಾಗಿ ದೀಪಾವಳಿಯಂದು ಅಖಂಡ ಭಾರತಕ್ಕಾಗಿ ಒಂದು ದೀಪ ಎಂಬ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಆಚರಿಸಲಾಗುತ್ತಿದೆ. ಅಖಂಡ ಭಾರತದ ಭೂಪಟದ ಮುಂದೆ ಹಣತೆಯನ್ನು ಹಚ್ಚಿ ಆರತಿ ಮಾಡಲಾಯಿತು. ಭಾರತ ಮಾತೆಗೆ ಜಯಘೋಷ ಕೂಗಿ ಅಖಂಡ ಭಾರತಕ್ಕಾಗಿ ಸಂಕಲ್ಪಿಸಲಾಯಿತು.
ನಂತರ ಮಾತನಾಡಿದ ಬಳಗದ ಅಧ್ಯಕ್ಷ ರಾಕೇಶ್ ಭಟ್ “ಹಿಂದೂಸ್ತಾನದ ಸುತ್ತಮುತ್ತಲಿನ ದೇಶಗಳಲ್ಲಿ ಭಾರತೀಯ ಹೆಸರುಗಳು, ಸಂಸ್ಕೃತಿ ಜೀವಂತವಾಗಿರುವುದನ್ನು ಈಗಲೂ ಕಾಣಬಹುದು.ಇತ್ತೀಚಿನ ದಿನಗಳಲ್ಲಿ ಹಿಂದುತ್ವ ಎಂದರೆ ಕೋಮುವಾದ, ಮೂಲಭೂತವಾದ ಮತ್ತು ಬ್ರಾಹ್ಮಣವಾದ ಎಂಬ ಸುಳ್ಳನ್ನು ಜನರ ಮನಸ್ಸಿನಲ್ಲಿ ತುಂಬಲು ಯತ್ನಿಸಲಾಗುತ್ತಿದೆ. ಆದರೆ ಸಾವರ್ಕರ್ ಅವರು ಯಾರೆಲ್ಲಾ ಭಾರತೀಯ ನೆಲದ ಸಂಸ್ಕೃತಿಯನ್ನು ಒಪ್ಪಿ ಅನುಸರಿಸಿ ಬದುಕುತ್ತಿದ್ದಾರೋ ಅವರೆಲ್ಲರೂ ಹಿಂದೂಗಳು ಎಂಬುದನ್ನು ಪ್ರತಿಪಾದಿಸಿದ್ದರು. ಸರ್ವೋಚ್ಚ ನ್ಯಾಯಾಲಯವು ಸಹ ಹಿಂದೂ ಎಂದರೆ ಬದುಕುವ ವಿಧಾನ ಎಂಬುದಾಗಿ ತಿಳಿಸಿದೆ. ಈ ಸಿದ್ಧಾಂತದ ಅಡಿಯಲ್ಲಿ ಸರ್ವ ಧರ್ಮಗಳು, ಮತಗಳು, ಜಾತಿಗಳು ಸಹಿಷ್ಣುತೆಯಿಂದ ಪರಸ್ಪರರ ಸಂಸ್ಕೃತಿಯನ್ನು ಗೌರವಿಸುತ್ತಾ ಬದುಕುವುದೇ ಆಗಿದೆ. ಹಾಗಾಗಿ ಅಖಂಡ ಭಾರತದ ನಿರ್ಮಾಣದಿಂದ ಪ್ರಪಂಚದಲ್ಲಿಯೇ ಭಾರತೀಯ ಸಂಸ್ಕೃತಿ ಮೇಳೈಸಲಿದೆ” ಎಂದರು. ಸಂದೇಶ್ ಪವಾರ್, ಟಿ.ಎಸ್. ಅರುಣ್, ಸುರೇಂದ್ರ, ಬಿ.ಸಿ.ಶಶಿಕಾಂತ್, ಅಂಬಾರಿ ಪ್ರಹ್ಲಾದರಾವ್, ಅನೂಜ್ ಸಾರಸ್ವತ್, ಶ್ರೀನಿವಾಸಪ್ರಸಾದ್, ಸುಚೇಂದ್ರ, ಉಮೇಶ್, ಸಂತೋಷ್, ಕುಮಾರ್, ಮುರಳಿ ಭಾಗವಹಿಸಿದ್ದರು…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *