ಸಾವಿನಲ್ಲೂ ಸಾರ್ಥಕತೆ ಮೆರೆದ ಮೊಗಣ್ಣೇಗೌಡ…ಅಂಗಾಂಗ ದಾನದಿಂದ 5 ಮಂದಿಗೆ ಹೊಸ ಜೀವನ…

ಸಾವಿನಲ್ಲೂ ಸಾರ್ಥಕತೆ ಮೆರೆದ ಮೊಗಣ್ಣೇಗೌಡ…ಅಂಗಾಂಗ ದಾನದಿಂದ 5 ಮಂದಿಗೆ ಹೊಸ ಜೀವನ…

ಸಾವಿನಲ್ಲೂ ಸಾರ್ಥಕತೆ ಮೆರೆದ ಮೊಗಣ್ಣೇಗೌಡ…ಅಂಗಾಂಗ ದಾನದಿಂದ 5 ಮಂದಿಗೆ ಹೊಸ ಜೀವನ…

ಮೈಸೂರು,ಅ27,Tv10 ಕನ್ನಡ
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಗಂಜಿಗೆರೆ ಗ್ರಾಮದ ಮೊಗಣ್ಣೇಗೌಡ(67) ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.ಅಂಗಾಂಗ ದಾನ ಮಾಡುವ ಮೂಲಕ 5 ಮಂದಿಗೆ ಹೊಸ ಜೀವನ ನೀಡಿದ್ದಾರೆ.ಮೆದುಳಿನ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮೊಗಣ್ಣೇಗೌಡ ರನ್ನ ಅಕ್ಟೋಬರ್ 23 ರಂದು ಮೈಸೂರಿನ ಜೆ.ಎಸ್.ಎಸ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳು ನಿಷ್ಕ್ರಯವಾಗುವುದನ್ನ ಖಚಿತ ಪಡಿಸಿಕೊಂಡ ವೈದ್ಯರು ಮೊಗಣ್ಣೇಗೌಡ ರವರ ಕುಟುಂಬಸ್ಥರಿಗೆ ಪರಿಸ್ಥಿತಿಯನ್ನ ವಿವರಿಸಿದ್ದರು.ಮೊಗಣ್ಣೇಗೌಡರ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಒಪ್ಪಿಗೆ ನೀಡಿದ್ದರು.ಅಕ್ಟೋಬರ್ 26 ರಂದು ಮೊಗಣ್ಣೇಗೌಡ ನಿಧನಹೊಂದಿದರು.ಮೊಗಣ್ಣೇಗೌಡರ ಎರಡು ಕಾರ್ನಿಯ(ಕಣ್ಣುಗಳು,ಎರಡು ಕಿಡ್ನಿ ಹಾಗೂ ಲಿವರ್ ಗಳನ್ನ ಪಡೆದ ವೈದ್ಯರ ತಂಡ ಜೆ.ಎಸ್.ಎಸ್.ಆಸ್ಪತ್ರೆಯ ರೋಗಿಯೊಬ್ಬರಿಗೆ ಒಂದು ಕಿಡ್ನಿ ಹಾಗೂ 2 ಕಾರ್ನಿಯಾಗಳನ್ನ ಕಸಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.ಉಳಿದ ಕಿಡ್ನಿ ಹಾಗೂ ಲಿವರ್ ಅನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ರವಾನಿಸಿದ್ದಾರೆ.ಮೊಗಣ್ಣೇಗೌಡರ ಅಂಗಾಂಗ ದಾನದಿಂದ 5 ಮಂದಿಗೆ ಹೊಸ ಜೀವನ ನೀಡಿದಂತಾಗಿದೆ..

Spread the love

Related post

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…
ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…

Leave a Reply

Your email address will not be published. Required fields are marked *