ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಹುಣಸೂರು,ಅ31,Tv10 ಕನ್ನಡ
ಪ್ರಿಯಕರನೊಂದಿಗೆ ಪತ್ನಿ ವಿವಾಹವಾದ ಹಿನ್ನಲೆ ಮನನೊಂದ ಪತಿ ನೇಣಿಗೆ ಶರಣಾದ ಘಟನೆ ಹುಣಸೂರಿನ ಕೊಯಮತ್ತೂರು ಕಾಲೋನಿಯಲ್ಲಿ ನಡೆದಿದೆ.ಸುರೇಶ್ ಕುಮಾರ್(37) ಮೃತ ದುರ್ದೈವಿ.7 ವರ್ಷದ ಹಿಂದೆ ನೇತ್ರಾ ಜೊತೆ ವಿವಾಹವಾಗಿದ್ದ ಸುರೇಶ್ ಕುಮಾರ್ ಇಬ್ಬರು ಹೆಣ್ಣುಮಕ್ಕಳೊಂದಿಗೆ ಅನ್ಯೋನ್ಯ ಸಂಸಾರ ತೂಗಿಸುತ್ತಿದ್ದ.ಮಾರಿಷಸ್ ಸ್ಪಿನ್ನಿಂಗ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದ ನೇತ್ರಾ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದಳು.ಹುಣಸೂರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು.ತನಿಖೆ ನಡೆಸಿದ ಹುಣಸೂರು ಪೊಲೀಸರಿಗೆ ನೇತ್ರಾ ಶಿವಮೊಗ್ಗದಲ್ಲಿ ಪತ್ತೆಯಾದಳು.ವಿಚಾರಣೆ ನಡೆಸಿದಾಗ ಪತಿಯ ಜೊತೆ ಹೊಂದಾಣಿಕೆ ಆಗಿಲ್ಲವೆಂದು ತಿಳಿಸಿದ್ದಳು.ಜೊತೆಗೆ ಗಂಡನ ಮೊಬೈಲ್ ಗೆ ತಾನು ಮತ್ತೊಂದು ಮದುವೆ ಆಗಿರುವುದಾಗಿ ಮಾಹಿತಿ ನೀಡಿ ಫೋಟೋ ಹಾಗೂ ವಿಡಿಯೋ ಗಳನ್ನ ಗಂಡನ ಮೊಬೈಲ್ ಗೆ ರವಾನಿಸಿದ್ದಳು.ಇದರಿಂದಾಗಿ ಮನನೊಂದ ಸುರೇಶ್ ಕುಮಾರ್ ನೇಣಿಗೆ ಶರಣಾಗಿದ್ದಾರೆ.ಇಬ್ಬರು ಮಕ್ಕಳು ಇದೀಗ ತಾತನ ಮನೆ ಆಶ್ರಯ ಪಡೆದಿದ್ದಾರೆ.ಮಗನ ಸಾವಿಗೆ ಸೊಸೆ ಕಾರಣ ಆಕೆಯ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ಸುರೇಶ್ ಕುಮಾರ್ ತಂದೆ ಕೃಷ್ಣೇಗೌಡ ಹುಣಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *