ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಪ್ರಿಯಕರನೊಂದಿಗೆ ಮದುವೆ…ಪತಿ ನೇಣಿಗೆ…ಹುಣಸೂರಿನಲ್ಲಿ ಘಟನೆ…

ಹುಣಸೂರು,ಅ31,Tv10 ಕನ್ನಡ
ಪ್ರಿಯಕರನೊಂದಿಗೆ ಪತ್ನಿ ವಿವಾಹವಾದ ಹಿನ್ನಲೆ ಮನನೊಂದ ಪತಿ ನೇಣಿಗೆ ಶರಣಾದ ಘಟನೆ ಹುಣಸೂರಿನ ಕೊಯಮತ್ತೂರು ಕಾಲೋನಿಯಲ್ಲಿ ನಡೆದಿದೆ.ಸುರೇಶ್ ಕುಮಾರ್(37) ಮೃತ ದುರ್ದೈವಿ.7 ವರ್ಷದ ಹಿಂದೆ ನೇತ್ರಾ ಜೊತೆ ವಿವಾಹವಾಗಿದ್ದ ಸುರೇಶ್ ಕುಮಾರ್ ಇಬ್ಬರು ಹೆಣ್ಣುಮಕ್ಕಳೊಂದಿಗೆ ಅನ್ಯೋನ್ಯ ಸಂಸಾರ ತೂಗಿಸುತ್ತಿದ್ದ.ಮಾರಿಷಸ್ ಸ್ಪಿನ್ನಿಂಗ್ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗುತ್ತಿದ್ದ ನೇತ್ರಾ ಒಂದೂವರೆ ತಿಂಗಳ ಹಿಂದೆ ನಾಪತ್ತೆಯಾಗಿದ್ದಳು.ಹುಣಸೂರು ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ದೂರು ದಾಖಲಿಸಲಾಗಿತ್ತು.ತನಿಖೆ ನಡೆಸಿದ ಹುಣಸೂರು ಪೊಲೀಸರಿಗೆ ನೇತ್ರಾ ಶಿವಮೊಗ್ಗದಲ್ಲಿ ಪತ್ತೆಯಾದಳು.ವಿಚಾರಣೆ ನಡೆಸಿದಾಗ ಪತಿಯ ಜೊತೆ ಹೊಂದಾಣಿಕೆ ಆಗಿಲ್ಲವೆಂದು ತಿಳಿಸಿದ್ದಳು.ಜೊತೆಗೆ ಗಂಡನ ಮೊಬೈಲ್ ಗೆ ತಾನು ಮತ್ತೊಂದು ಮದುವೆ ಆಗಿರುವುದಾಗಿ ಮಾಹಿತಿ ನೀಡಿ ಫೋಟೋ ಹಾಗೂ ವಿಡಿಯೋ ಗಳನ್ನ ಗಂಡನ ಮೊಬೈಲ್ ಗೆ ರವಾನಿಸಿದ್ದಳು.ಇದರಿಂದಾಗಿ ಮನನೊಂದ ಸುರೇಶ್ ಕುಮಾರ್ ನೇಣಿಗೆ ಶರಣಾಗಿದ್ದಾರೆ.ಇಬ್ಬರು ಮಕ್ಕಳು ಇದೀಗ ತಾತನ ಮನೆ ಆಶ್ರಯ ಪಡೆದಿದ್ದಾರೆ.ಮಗನ ಸಾವಿಗೆ ಸೊಸೆ ಕಾರಣ ಆಕೆಯ ಮೇಲೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ಸುರೇಶ್ ಕುಮಾರ್ ತಂದೆ ಕೃಷ್ಣೇಗೌಡ ಹುಣಸೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ…

Spread the love

Related post

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಇಂದು ಕಾವೇರಿ ಮಾತೆಗೆಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಣೆ…ಶೃಂಗಾರಗೊಂಡ ಕೆ.ಆರ್.ಎಸ್…

ಮಂಡ್ಯ,ಜೂ30,Tv10 ಕನ್ನಡ ಕೆ.ಆರ್.ಎಸ್.ಡ್ಯಾಂ ಒಡಲನ್ನು ತುಂಬಿದ ಕಾವೇರಿ ಮಾತೆಗೆ ಇಂದು ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ.ಈ ಹಿನ್ನೆಲೆ ಕೆ ಆರ್.ಎಸ್.ನವವಧುವಿನಂತೆ ಶೃಂಗಾರಗೊಂಡಿದೆ.ಕನ್ನಡ ಬಾವುಟದಿಂದ ಕಂಗೊಳಿಸುತ್ತಿದೆ.ಹಸಿರು ತೋರಣ, ಹೂಗಳ ಮೂಲಕ…
ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ ಪುರೋಹಿತ ಹಲ್ಲೆ…

ಟ್ರಸ್ಟ್ ಗೆ ಪಾವತಿಸಿದ ಹಣ ವಾಪಸ್ ನೀಡುವಂತೆ ಕಿರೀಕ್…ಪುರೋಹಿತನ ಮೇಲೆ ಮತ್ತೊಬ್ಬ…

ಮೈಸೂರು,ಜೂ29,Tv10 ಕನ್ನಡ ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.ಗೀತಾಮೃತ…
ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…

Leave a Reply

Your email address will not be published. Required fields are marked *