ಆದಿವಾಸಿ ವೇಷ ಧರಿಸಿ ಪ್ರತಿಭಟಿಸಿದ ರೈತರು…ಕಬ್ಬಿನ ಬೆಲೆ ದರ ನಿಗದಿಗಾಗಿ ಅನ್ನದಾತರ ಹೋರಾಟ…

ಆದಿವಾಸಿ ವೇಷ ಧರಿಸಿ ಪ್ರತಿಭಟಿಸಿದ ರೈತರು…ಕಬ್ಬಿನ ಬೆಲೆ ದರ ನಿಗದಿಗಾಗಿ ಅನ್ನದಾತರ ಹೋರಾಟ…

ಆದಿವಾಸಿ ವೇಷ ಧರಿಸಿ ಪ್ರತಿಭಟಿಸಿದ ರೈತರು…ಕಬ್ಬಿನ ಬೆಲೆ ದರ ನಿಗದಿಗಾಗಿ ಅನ್ನದಾತರ ಹೋರಾಟ…

ಮೈಸೂರು,ನ4,Tv10 ಕನ್ನಡ
ಕಬ್ಬಿನ ಬೆಲೆ ನಿಗದಿಗಾಗಿ ರೈತರು ಇಂದು ವಿನೂತನ ಪ್ರತಿಭಟನೆ ನಡೆಸಿದರು.ಜಿಲ್ಲಾಧಿಕಾರಿ ಕಚೇರಿ ಮುಂದೆ ಐದನೇ ದಿನಕ್ಕೆ ಮುಂದುವರಿದ ಧರಣಿಯಲ್ಲಿ ಆದುವಾದಿ ವೇಷ ಧರಿಸಿ ಸರ್ಕಾರದ ವಿರುದ್ದ ಆಕ್ರೋಷ ವ್ಯಕ್ತಪಡಿಸಿದರು.ನಾವು ಕಾಡು ಮನುಷ್ಯರಲ್ಲ ಎಂಬ ಸಂದೇಶ ರವಾನಿಸಿದರು.ಕಬ್ಬಿನ ಎಫ್ ಆರ್ ಪಿ ಪುನರ್ ಪರಿಶೀಲನೆ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಳೆದ ಐದು ದಿನಗಳಿಂದ ಜಿಲ್ಕಾಧಿಕಾರಿಗಳ ಕಚೇರಿ ಮುಂದೆ ಕಬ್ಬು ಬೆಳೆಗಾರರು ಧರಣಿ ನಡೆಸುತ್ತಿದ್ದಾರೆ.ರೈತರ ಮನವಿಗೆ ಸ್ಪಂದಿಸದ ಹಿನ್ನಲೆ ಕಾಡು ಜನರ ವೇಷ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆ ಹಿಡಿದರು. ಟನ್ ಕಬ್ಬಿಗೆ ಎಫ್ ಆರ್ ಪಿ ದರ 3050 ಕ್ಕೆ ನಿಗದಿಗೊಳಿಸಲಾಗಿದೆ ಆದರೆ ಇತರೆ ರಾಜ್ಯಗಳು 3500 ರಿಂದ 3800ಕ್ಕೂ ಹೆಚ್ಚು ದರ ನೀಡುತ್ತಿರುವಾಗ ರಾಜ್ಯ ಸರ್ಕಾರ ಮಾತ್ರ ಕಬ್ಬು ಬೆಳೆಗಾರರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದರು. ಪ್ರತಿಭಟನೆಯಲ್ಲಿ
ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್,ಜಿಲ್ಲಾಧ್ಯಕ್ಷ ಪಿ ಸೋಮಶೇಖರ್,ಜಿಲ್ಲಾ ಪ್ರದಾನ ಕಾರ್ಯದರ್ಶಿ ಬರಡನಪುರ ನಾಗರಾಜ್,ಸಂಚಾಲಕ ಕೆ ಆರ್ ಎಸ್ ರಾಮೇಗೌಡ, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ತಾಲೂಕು ಪ್ರಧಾನ ಕಾರ್ಯದರ್ಶಿ ಡಿ ಕಾಟೂರು ಮಹದೇವಸ್ವಾಮಿ, ಚುಂಚುರಾಯನಹುಂಡಿ ಮಂಜು, ನಂಜುಂಡಸ್ವಾಮಿ, ಸಿದ್ದರಾಮ, ಬಸವರಾಜಪ್ಪ, ವರಕೂಡು ನಾಗೇಶ್, ತೆರಣಿಮುಂಟಿ ಸುರೇಶ್ ಶೆಟ್ಟಿ, ಸಾತಗಳ್ಳಿ ಬಸವರಾಜ್, ಪಿ ರಾಜು, ವಾಜಮಂಗಲ ಮಹದೇವು, ಸಾಕಮ್ಮ ಮಹಾ ಲಿಂಗನಾಯಕ ಸ್ವಾಮಿ,ರಾಜು, ಮಹಾದೇವಪ್ಪ ಹೊಸವಳಲು ರಮೇಶ್, ಬೈರೇಗೌಡ, ಷಡಕ್ಷರಿ. ಹೆಗ್ಗೂರು ರಂಗರಾಜು, ಶಿವರಾಮು, ಸಿ ಜವರಪ್ಪ, ನಾಗರಾಜು, ಇನ್ನು ಮುಂತಾದವರು ಇದ್ದರು..

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *