ವಾರಸುದಾರರಿಲ್ಲದ ಆಸ್ತಿ ಕಬಳಿಕೆ ಸಂಚು ಪ್ರಕರಣ…ಮಾಜಿ ಎಂಎಲ್ ಎ ಕುಟುಂಬದ ಮೂವರ ಮೇಲೆ FIR ದಾಖಲು…Tv10 ಕನ್ನಡ ವರದಿ ಫಲಶೃತಿ…

ವಾರಸುದಾರರಿಲ್ಲದ ಆಸ್ತಿ ಕಬಳಿಕೆ ಸಂಚು ಪ್ರಕರಣ…ಮಾಜಿ ಎಂಎಲ್ ಎ ಕುಟುಂಬದ ಮೂವರ ಮೇಲೆ FIR ದಾಖಲು…Tv10 ಕನ್ನಡ ವರದಿ ಫಲಶೃತಿ…

ವಾರಸುದಾರರಿಲ್ಲದ ಆಸ್ತಿ ಕಬಳಿಕೆ ಸಂಚು ಪ್ರಕರಣ…ಮಾಜಿ ಎಂಎಲ್ ಎ ಕುಟುಂಬದ ಮೂವರ ಮೇಲೆ FIR ದಾಖಲು…Tv10 ಕನ್ನಡ ವರದಿ ಫಲಶೃತಿ…

ಮೈಸೂರು,ನ5,Tv10 ಕನ್ನಡ

  • 20 ಕೋಟಿ ಮೌಲ್ಯದ ಆಸ್ತಿ ಕಬಳಿಕೆ ಸಂಚು ವಿಫಲ
  • 3 ಎಕ್ರೆ 21 ಗುಂಟೆ ಎಕ್ರೆ ಜಮೀನು ಸೇಫ್
  • RTI ಮೂಲಕ ಬಹಿರಂಗವಾದ ಅಕ್ರಮ
  • ಮಾಜಿ ಎಂಎಲ್ ಎ ಕುಟುಂಬದ ಮೂವರ ವಿರುದ್ದ FIR
  • Tv10 ಕನ್ನಡ ವಾಹಿನಿ ಸುದ್ದಿ ಇಂಪ್ಯಾಕ್ಟ್

ವಾರಸುದಾರರಿಲ್ಲ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಎಂ.ಎಲ್.ಎ ಕುಟುಂಬದ ಮೂವರ ವಿರುದ್ದ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಟಿ.ನರಸೀಪುರ ಕ್ಷೇತ್ರದ ಮಾಜಿ ಎಂ.ಎಲ್.ಎ.ದಿ.ಶ್ರೀನಿವಾಸ ಅಯ್ಯಂಗಾರ್ ರವರ ಸೊಸೆ ಲಲಿತಾ ಜಯಗೋಪಾಲ್,ಮೊಮ್ಮಗ ಸುಧೀರ್ ಜಯಗೋಪಾಲ್,ಮೊಮ್ಮಗಳು ಸುಮನ್ ಜಯಗೋಪಾಲ್ ರವರ ಮೇಲೆ FIR ದಾಖಲಾಗಿದೆ.20 ಕೋಟಿ ಮೌಲ್ಯದ 3 ಎಕ್ರೆ 21 ಗುಂಟೆ ಜಮೀನು ಕಬಳಿಸಲು ನಡೆಸಿದ ಸಂಚು ವಿಫಲವಾಗಿದೆ.RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ ರವರು ದಾಖಲೆ ಸಮೇತ ಅಕ್ರಮ ಬಯಲು ಮಾಡಿದ್ದು Tv10 ಕನ್ನಡ ವಾಹಿನಿಯಲ್ಲಿ ಸುದ್ದಿ ಪ್ರಸಾರವಾಗಿತ್ತು.ಇದು Tv10 ಕನ್ನಡ ವಾಹಿನಿಯ ಇಂಪ್ಯಾಕ್ಟ್ ಆಗಿದೆ.

ಮೈಸೂರು ತಾಲೂಕು ವರುಣ ಹೋಬಳಿ ಲಲಿತಾದ್ರಿಪುರ ಗ್ರಾಮದ ಸರ್ವೆ ನಂ206 ರ 3 ಎಕ್ರೆ 21 ಗುಂಟೆ ಜಮೀನು ಸರ್ಕಾರಿ ಬೀಳು.ನಂತರದ ದಿನಗಳಲ್ಲಿ ಮೇಲುಕೋಟೆ ವಜ್ರಂಶಿಂಗಯ್ಯಂಗಾರ್ ರವರಿಗೆ ಖಾತೆ ಆಗಿದೆ.ಸಧ್ಯ RTC ಮೇಲುಕೋಟೆ ವಜ್ರಂಅಯ್ಯಂಗಾರ್ ಹೆಸರಿನಲ್ಲಿದೆ.ಸದರಿ ಆಸ್ತಿಗೆ ವಾರಸುದಾರರು ಇಲ್ಲದಿರುವುದನ್ನ ಪತ್ಯೆ ಹಚ್ಚಿದ ಮಾಜಿ ಎಂ.ಎಲ್.ಎ.ದಿ ಶ್ರೀನಿವಾಸ ಅಯ್ಯಂಗಾರ್ ಸೊಸೆ ಲಲಿತಾ ಜಯಗೋಪಾಲ್,ಮೊಮ್ಮಗ ಸುದೀರ್ ಜಯಗೋಪಾಲ್,ಮೊಮ್ಮಗಳು ಸುಮನ್ ಜಯಗೋಪಾಲ್ ರವರು ನಕಲಿ ವಂಶವೃಕ್ಷ ಸೃಷ್ಟಿಸಿ ಪೌತಿಖಾತೆ ಮಾಡಿಸಿಕೊಳ್ಳಲು ಮೈಸೂರು ತಾಲೂಕು ಕಚೇರಿಗೆ ದಾಖಲೆಗಳನ್ನ ಸಲ್ಲಿಸಿದ್ದಾರೆ.ಇದರ ಮಾಹಿತಿ ಅರಿತ RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ ರವರು ಸಂಪೂರ್ಣ ದಾಖಲೆಗಳನ್ನ ಪಡೆದು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಹೆಚ್ಚುವರಿ ತಹಸೀಲ್ದಾರ್ ಎನ್. ವಿಶ್ವನಾಥ್ ರವರಿಗೆ ಸೂಚನೆ ನೀಡಿದ್ದರು.ದಾಖಲೆಗಳನ್ನ ಪರಿಶೀಲಿಸಿದ ವಿಶ್ವನಾಥ್ ಅಕ್ರಮವನ್ನ ಖಚಿತಪಡಿಸಿಕೊಂಡು ಸಂಭಂಧಪಟ್ಟ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ವರುಣಾ ರೆವಿನ್ಯೂ ಇನ್ಸ್ಪೆಕ್ಟರ್ ಶಂಕರ್ ಗೆ ಆದೇಶಿಸಿದ್ದರು.ಈ ಅಕ್ರಮವನ್ನ Tv10 ಕನ್ನಡ ವಾಹಿನಿ ಇತ್ತೀಚೆಗೆ ಸುದ್ದಿ ಪ್ರಸಾರ ಮಾಡಿತ್ತು.ಇದೀಗ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ದ FIR ದಾಖಲಾಗಿದೆ.20 ಕೋಟಿ ಮೌಲ್ಯದ ಆಸ್ತಿ ಸೇಫ್ ಆಗಿದೆ.ಇದು Tv10 ವರದಿ ಫಲಶೃತಿಯೂ ಆಗಿದೆ.ನಕಲಿ ದಾಖಲೆ ಸೃಷ್ಟಿಸಿ ಅಕ್ರಮಕ್ಕೆ ಸಾಥ್ ನೀಡಿದ ಮೈಸೂರು ತಾಲೂಕು ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು RTI ಕಾರ್ಯಕರ್ತ ಬಿ.ಎನ್.ನಾಗೇಂದ್ರ ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿ ಲಿಖಿತ ದೂರು ನೀಡಿದ್ದಾರೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *