ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ…

ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ…

ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ…

ಮೈಸೂರು,ನ5,Tv10 ಕನ್ನಡ
ಪ್ರೀತಿಸಿ ಮದುವೆಯಾದ ಜೋಡಿ ಸಾವಿನಲ್ಲೂ ಒಂದಾದ ದುರಂತ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ನಾಲೆಯ ಬಳಿ ಬಟ್ಟೆ ಒಗೆಯುತ್ತಿರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದ ಪತ್ನಿಯನ್ನ ರಕ್ಷಿಸಲು ನಾಲೆಗೆ ಹಾರಿದ ಪತಿಯೂ ಸಹ ನೀರು ಪಾಲಾಗಿದ್ದಾನೆ.ಪ್ರೀತಿಸಿ ವಿವಾಹವಾದ ಜೋಡಿ ಸಾವಿನಲ್ಲೂ ಸಹ ಒಂದಾಗಿದ್ದಾರೆ.ಶಿವಕುಮಾರ್(29) ಹಾಗೂ ಕವಿತಾ(25) ಮೃತ ದಂಪತಿ.ಶಾದನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರೇಮಿಗಳು 5 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.ಶ್ರೀರಂಗಪಟ್ಟಣ ಮೊಗರಳ್ಳಿ ಗ್ರಾಮದಲ್ಲಿ ನೆಲೆಸಿದ್ದರು.ಕೆ.ಆರ್.ಎಸ್.ಬಳಿಯ ವರುಣಾ ಚಾನೆಲ್ ಕಟ್ಟೆ ಮೇಲೆ ಕುಳಿತು ಬಟ್ಟೆ ಒಗೆಯುತ್ತಿದ್ದ ಕವಿತಾ ಆಕಸ್ಮಿಕವಾಗಿ ನೀರಿಗೆ ಜಾರಿ ಬಿದ್ದಿದ್ದಾಳೆ.ಪತ್ನಿಯನ್ನ ರಕ್ಷಿಸಲು ಪತಿ ಶಿವಕುಮಾರ್ ಸಹ ನೀರಿಗೆ ಹಾರಿದ್ದಾನೆ.ಆದರೆ ಇಬ್ಬರೂ ಸಹ ನೀರಿನಿಂದ ಮೇಲೆ ಬಂದಿಲ್ಲ.ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕಾಮನಕೆರೆಹುಂಡಿ ಬಳಿಯ ವರುಣಾ ಚಾನೆಲ್ ನಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *