
ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ…
- CrimeMysore
- November 5, 2022
- No Comment
- 203
ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ…
ಮೈಸೂರು,ನ5,Tv10 ಕನ್ನಡ
ಪ್ರೀತಿಸಿ ಮದುವೆಯಾದ ಜೋಡಿ ಸಾವಿನಲ್ಲೂ ಒಂದಾದ ದುರಂತ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ನಾಲೆಯ ಬಳಿ ಬಟ್ಟೆ ಒಗೆಯುತ್ತಿರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದ ಪತ್ನಿಯನ್ನ ರಕ್ಷಿಸಲು ನಾಲೆಗೆ ಹಾರಿದ ಪತಿಯೂ ಸಹ ನೀರು ಪಾಲಾಗಿದ್ದಾನೆ.ಪ್ರೀತಿಸಿ ವಿವಾಹವಾದ ಜೋಡಿ ಸಾವಿನಲ್ಲೂ ಸಹ ಒಂದಾಗಿದ್ದಾರೆ.ಶಿವಕುಮಾರ್(29) ಹಾಗೂ ಕವಿತಾ(25) ಮೃತ ದಂಪತಿ.ಶಾದನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರೇಮಿಗಳು 5 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.ಶ್ರೀರಂಗಪಟ್ಟಣ ಮೊಗರಳ್ಳಿ ಗ್ರಾಮದಲ್ಲಿ ನೆಲೆಸಿದ್ದರು.ಕೆ.ಆರ್.ಎಸ್.ಬಳಿಯ ವರುಣಾ ಚಾನೆಲ್ ಕಟ್ಟೆ ಮೇಲೆ ಕುಳಿತು ಬಟ್ಟೆ ಒಗೆಯುತ್ತಿದ್ದ ಕವಿತಾ ಆಕಸ್ಮಿಕವಾಗಿ ನೀರಿಗೆ ಜಾರಿ ಬಿದ್ದಿದ್ದಾಳೆ.ಪತ್ನಿಯನ್ನ ರಕ್ಷಿಸಲು ಪತಿ ಶಿವಕುಮಾರ್ ಸಹ ನೀರಿಗೆ ಹಾರಿದ್ದಾನೆ.ಆದರೆ ಇಬ್ಬರೂ ಸಹ ನೀರಿನಿಂದ ಮೇಲೆ ಬಂದಿಲ್ಲ.ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕಾಮನಕೆರೆಹುಂಡಿ ಬಳಿಯ ವರುಣಾ ಚಾನೆಲ್ ನಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ…