ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ…

ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ…

ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ…

ಮೈಸೂರು,ನ5,Tv10 ಕನ್ನಡ
ಪ್ರೀತಿಸಿ ಮದುವೆಯಾದ ಜೋಡಿ ಸಾವಿನಲ್ಲೂ ಒಂದಾದ ದುರಂತ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ನಾಲೆಯ ಬಳಿ ಬಟ್ಟೆ ಒಗೆಯುತ್ತಿರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದ ಪತ್ನಿಯನ್ನ ರಕ್ಷಿಸಲು ನಾಲೆಗೆ ಹಾರಿದ ಪತಿಯೂ ಸಹ ನೀರು ಪಾಲಾಗಿದ್ದಾನೆ.ಪ್ರೀತಿಸಿ ವಿವಾಹವಾದ ಜೋಡಿ ಸಾವಿನಲ್ಲೂ ಸಹ ಒಂದಾಗಿದ್ದಾರೆ.ಶಿವಕುಮಾರ್(29) ಹಾಗೂ ಕವಿತಾ(25) ಮೃತ ದಂಪತಿ.ಶಾದನಹಳ್ಳಿ ಗ್ರಾಮದ ನಿವಾಸಿಗಳಾದ ಪ್ರೇಮಿಗಳು 5 ತಿಂಗಳ ಹಿಂದೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು.ಶ್ರೀರಂಗಪಟ್ಟಣ ಮೊಗರಳ್ಳಿ ಗ್ರಾಮದಲ್ಲಿ ನೆಲೆಸಿದ್ದರು.ಕೆ.ಆರ್.ಎಸ್.ಬಳಿಯ ವರುಣಾ ಚಾನೆಲ್ ಕಟ್ಟೆ ಮೇಲೆ ಕುಳಿತು ಬಟ್ಟೆ ಒಗೆಯುತ್ತಿದ್ದ ಕವಿತಾ ಆಕಸ್ಮಿಕವಾಗಿ ನೀರಿಗೆ ಜಾರಿ ಬಿದ್ದಿದ್ದಾಳೆ.ಪತ್ನಿಯನ್ನ ರಕ್ಷಿಸಲು ಪತಿ ಶಿವಕುಮಾರ್ ಸಹ ನೀರಿಗೆ ಹಾರಿದ್ದಾನೆ.ಆದರೆ ಇಬ್ಬರೂ ಸಹ ನೀರಿನಿಂದ ಮೇಲೆ ಬಂದಿಲ್ಲ.ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಕಾಮನಕೆರೆಹುಂಡಿ ಬಳಿಯ ವರುಣಾ ಚಾನೆಲ್ ನಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *