ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಮೈಸೂರು,ನ7,Tv10 ಕನ್ನಡ
ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದೀರಾ…? ಹಾಗಿದ್ರೆ ಹುಷಾರ್ ಚೆಸ್ಕಾಂ ಜಾಗೃತ ದಳ ದಾಳಿ ನಡೆಸೋದು ಗ್ಯಾರೆಂಟಿ.ಇತ್ತೀಚೆಗೆ ಚೆಸ್ಕಾಂ ಜಾಗೃತ ದಳ ಯಶಸ್ವಿ ಕಾರ್ಯಾಚರಣೆ ನಡೆಸಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದ 15 ಮಂದಿ ಮೇಲೆ ಪ್ರಕರಣ ದಾಖಲಿಸಿದೆ.ಸೆಸ್ಕ್ ಜಾಗೃತ ದಳದ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಡಿವೈಎಸ್ಪಿ ಅನ್ಸರ್ ಆಲಿ ಮತ್ತು ಇ.ಇ.ತಬಸ್ಸಮ್ ರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.ಹುಣಸೂರಿನಲ್ಲಿ 3 ಪ್ರಕರಣಗಳು,ನಂಜನಗೂಡಿನಲ್ಲಿ 3 ಪ್ರಕರಣಗಳು,ಕೆ.ಆರ್.ನಗರದಲ್ಲಿ 2 ಹಾಗೂ ಮೈಸೂರು ತಾಲೂಕಿನಲ್ಲಿ 7 ಪ್ರಕರಣಗಳು ಪತ್ತೆಯಾಗಿದೆ.ವಿದ್ಯುತ್ ಕಂಬದಿಂದ ನೇರವಾಗಿ ಮನೆಗೆ ಸಂಪರ್ಕ ಪಡೆದಿರುವುದು,ವಿದ್ಯುತ್ ಶುಲ್ಕ ಪಾವತಿಸದೆ ಸಂಪರ್ಕ ಕಡಿತವಾಗಿದ್ದರೂ ಅಕ್ರಮವಾಗಿ ಸಂಪರ್ಕ ಪಡೆದಿರುವುದು,ಸಾರ್ವಜನಿಕ ಕುಡಿಯುವ ನೀರಿನ ಘಟಕದಿಂದ ಅಕ್ರಮವಾಗಿ ಸಂಪರ್ಕ ಪಡೆದಿರುವುದು ಹೀಗೆ ಹಲವಾರು ರೀತಿಯಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಸರ್ಕಾರಕ್ಕೆ ವಂಚಿಸುತ್ತಿರುವ ಪ್ರಕರಣಗಳು ಪತ್ತೆಯಾಗಿದೆ.ಅಕ್ರಮಕ್ಕೆ ಸಾಥ್ ನೀಡಿದ ಆಲನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಹಾಗೂ ಬಿಳಿಕೆರೆ ಹೋಬಳಿಯ ಬೋಳನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಮೇಲೂ ಪ್ರಕರಣ ದಾಖಲಿಸಲಾಗಿದೆ.

ಸೆಸ್ಕ್ ಜಾಗೃತ ದಳದ ನಿರೀಕ್ಷಕರಾದ ವಿನಯ್,ಎ.ಇ.ಇ.ಮನೀಷ್ ಪಾಠಕ್ ರವರ ಉಸ್ತುವಾರಿಯಲ್ಲಿ ಎ.ಇ.ಮಣಿಕಂಠಸ್ವಾಮಿ,ವಿಶ್ವನಾಥ್,ಕೌಸರ್,ತೋಂಟದಾರ್ಯ,ಜಗದೀಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.ಅಕ್ರಮ ಸಂಪರ್ಕ ಪಡೆಯಲು ಬಳಸಿದ ವಿದ್ಯುತ್ ಉಪಕರಣಗಳನ್ನ ಜಾಗೃತ ತಂಡ ವಶಪಡಿಸಿಕೊಂಡಿದೆ.ಚೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ…

ಮುಡಾ ಹಗರಣ ಪ್ರಕರಣ…ಸಿಎಂ ಸಿದ್ದರಾಮಯ್ಯ ಆಪ್ತ ಮುಡಾ ಮಾಜಿ ಅಧ್ಯಕ್ಷ ಕೆ.ಮರೀಗೌಡ ಆಸ್ತಿ ಮುಟ್ಟುಗೋಲು…ಬಣ್ಣ ಬಯಲು ಮಾಡಿದ ಇಡಿ… ಬೆಂಗಳೂರು,ಜ22,Tv10 ಕನ್ನಡ ಮುಡಾ ಮಾಜಿ ಆಯುಕ್ತ GT ದಿನೇಶ್…
ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ…

ಅಯೋಧ್ಯಾ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ…ಎರಡನೇ ವರ್ಷದ ಸಂಭ್ರಮಾಚರಣೆ… ಮೈಸೂರು,ಜ22,Tv10 ಕನ್ನಡ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠಾಪನೆಯಾಗಿ ಎರಡು ವರ್ಷಗಳು ಪೂರೈಸಿದ ಐತಿಹಾಸಿಕ…
ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…

Leave a Reply

Your email address will not be published. Required fields are marked *