ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಮೈಸೂರು,ನ7,Tv10 ಕನ್ನಡ
ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದೀರಾ…? ಹಾಗಿದ್ರೆ ಹುಷಾರ್ ಚೆಸ್ಕಾಂ ಜಾಗೃತ ದಳ ದಾಳಿ ನಡೆಸೋದು ಗ್ಯಾರೆಂಟಿ.ಇತ್ತೀಚೆಗೆ ಚೆಸ್ಕಾಂ ಜಾಗೃತ ದಳ ಯಶಸ್ವಿ ಕಾರ್ಯಾಚರಣೆ ನಡೆಸಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದ 15 ಮಂದಿ ಮೇಲೆ ಪ್ರಕರಣ ದಾಖಲಿಸಿದೆ.ಸೆಸ್ಕ್ ಜಾಗೃತ ದಳದ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಡಿವೈಎಸ್ಪಿ ಅನ್ಸರ್ ಆಲಿ ಮತ್ತು ಇ.ಇ.ತಬಸ್ಸಮ್ ರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.ಹುಣಸೂರಿನಲ್ಲಿ 3 ಪ್ರಕರಣಗಳು,ನಂಜನಗೂಡಿನಲ್ಲಿ 3 ಪ್ರಕರಣಗಳು,ಕೆ.ಆರ್.ನಗರದಲ್ಲಿ 2 ಹಾಗೂ ಮೈಸೂರು ತಾಲೂಕಿನಲ್ಲಿ 7 ಪ್ರಕರಣಗಳು ಪತ್ತೆಯಾಗಿದೆ.ವಿದ್ಯುತ್ ಕಂಬದಿಂದ ನೇರವಾಗಿ ಮನೆಗೆ ಸಂಪರ್ಕ ಪಡೆದಿರುವುದು,ವಿದ್ಯುತ್ ಶುಲ್ಕ ಪಾವತಿಸದೆ ಸಂಪರ್ಕ ಕಡಿತವಾಗಿದ್ದರೂ ಅಕ್ರಮವಾಗಿ ಸಂಪರ್ಕ ಪಡೆದಿರುವುದು,ಸಾರ್ವಜನಿಕ ಕುಡಿಯುವ ನೀರಿನ ಘಟಕದಿಂದ ಅಕ್ರಮವಾಗಿ ಸಂಪರ್ಕ ಪಡೆದಿರುವುದು ಹೀಗೆ ಹಲವಾರು ರೀತಿಯಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಸರ್ಕಾರಕ್ಕೆ ವಂಚಿಸುತ್ತಿರುವ ಪ್ರಕರಣಗಳು ಪತ್ತೆಯಾಗಿದೆ.ಅಕ್ರಮಕ್ಕೆ ಸಾಥ್ ನೀಡಿದ ಆಲನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಹಾಗೂ ಬಿಳಿಕೆರೆ ಹೋಬಳಿಯ ಬೋಳನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಮೇಲೂ ಪ್ರಕರಣ ದಾಖಲಿಸಲಾಗಿದೆ.

ಸೆಸ್ಕ್ ಜಾಗೃತ ದಳದ ನಿರೀಕ್ಷಕರಾದ ವಿನಯ್,ಎ.ಇ.ಇ.ಮನೀಷ್ ಪಾಠಕ್ ರವರ ಉಸ್ತುವಾರಿಯಲ್ಲಿ ಎ.ಇ.ಮಣಿಕಂಠಸ್ವಾಮಿ,ವಿಶ್ವನಾಥ್,ಕೌಸರ್,ತೋಂಟದಾರ್ಯ,ಜಗದೀಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.ಅಕ್ರಮ ಸಂಪರ್ಕ ಪಡೆಯಲು ಬಳಸಿದ ವಿದ್ಯುತ್ ಉಪಕರಣಗಳನ್ನ ಜಾಗೃತ ತಂಡ ವಶಪಡಿಸಿಕೊಂಡಿದೆ.ಚೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *