ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಮೈಸೂರು,ನ7,Tv10 ಕನ್ನಡ
ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದೀರಾ…? ಹಾಗಿದ್ರೆ ಹುಷಾರ್ ಚೆಸ್ಕಾಂ ಜಾಗೃತ ದಳ ದಾಳಿ ನಡೆಸೋದು ಗ್ಯಾರೆಂಟಿ.ಇತ್ತೀಚೆಗೆ ಚೆಸ್ಕಾಂ ಜಾಗೃತ ದಳ ಯಶಸ್ವಿ ಕಾರ್ಯಾಚರಣೆ ನಡೆಸಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದ 15 ಮಂದಿ ಮೇಲೆ ಪ್ರಕರಣ ದಾಖಲಿಸಿದೆ.ಸೆಸ್ಕ್ ಜಾಗೃತ ದಳದ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಡಿವೈಎಸ್ಪಿ ಅನ್ಸರ್ ಆಲಿ ಮತ್ತು ಇ.ಇ.ತಬಸ್ಸಮ್ ರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.ಹುಣಸೂರಿನಲ್ಲಿ 3 ಪ್ರಕರಣಗಳು,ನಂಜನಗೂಡಿನಲ್ಲಿ 3 ಪ್ರಕರಣಗಳು,ಕೆ.ಆರ್.ನಗರದಲ್ಲಿ 2 ಹಾಗೂ ಮೈಸೂರು ತಾಲೂಕಿನಲ್ಲಿ 7 ಪ್ರಕರಣಗಳು ಪತ್ತೆಯಾಗಿದೆ.ವಿದ್ಯುತ್ ಕಂಬದಿಂದ ನೇರವಾಗಿ ಮನೆಗೆ ಸಂಪರ್ಕ ಪಡೆದಿರುವುದು,ವಿದ್ಯುತ್ ಶುಲ್ಕ ಪಾವತಿಸದೆ ಸಂಪರ್ಕ ಕಡಿತವಾಗಿದ್ದರೂ ಅಕ್ರಮವಾಗಿ ಸಂಪರ್ಕ ಪಡೆದಿರುವುದು,ಸಾರ್ವಜನಿಕ ಕುಡಿಯುವ ನೀರಿನ ಘಟಕದಿಂದ ಅಕ್ರಮವಾಗಿ ಸಂಪರ್ಕ ಪಡೆದಿರುವುದು ಹೀಗೆ ಹಲವಾರು ರೀತಿಯಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಸರ್ಕಾರಕ್ಕೆ ವಂಚಿಸುತ್ತಿರುವ ಪ್ರಕರಣಗಳು ಪತ್ತೆಯಾಗಿದೆ.ಅಕ್ರಮಕ್ಕೆ ಸಾಥ್ ನೀಡಿದ ಆಲನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಹಾಗೂ ಬಿಳಿಕೆರೆ ಹೋಬಳಿಯ ಬೋಳನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಮೇಲೂ ಪ್ರಕರಣ ದಾಖಲಿಸಲಾಗಿದೆ.

ಸೆಸ್ಕ್ ಜಾಗೃತ ದಳದ ನಿರೀಕ್ಷಕರಾದ ವಿನಯ್,ಎ.ಇ.ಇ.ಮನೀಷ್ ಪಾಠಕ್ ರವರ ಉಸ್ತುವಾರಿಯಲ್ಲಿ ಎ.ಇ.ಮಣಿಕಂಠಸ್ವಾಮಿ,ವಿಶ್ವನಾಥ್,ಕೌಸರ್,ತೋಂಟದಾರ್ಯ,ಜಗದೀಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.ಅಕ್ರಮ ಸಂಪರ್ಕ ಪಡೆಯಲು ಬಳಸಿದ ವಿದ್ಯುತ್ ಉಪಕರಣಗಳನ್ನ ಜಾಗೃತ ತಂಡ ವಶಪಡಿಸಿಕೊಂಡಿದೆ.ಚೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *