ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಅಕ್ರಮ ವಿದ್ಯುತ್ ಸಂಪರ್ಕ ಪಡೆದವರಿಗೆ ಬಿಸಿ ಮುಟ್ಟಿಸಿದ ಚೆಸ್ಕಾಂ ಜಾಗೃತ ದಳ…15 ಪ್ರಕರಣಗಳು ದಾಖಲು…

ಮೈಸೂರು,ನ7,Tv10 ಕನ್ನಡ
ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದೀರಾ…? ಹಾಗಿದ್ರೆ ಹುಷಾರ್ ಚೆಸ್ಕಾಂ ಜಾಗೃತ ದಳ ದಾಳಿ ನಡೆಸೋದು ಗ್ಯಾರೆಂಟಿ.ಇತ್ತೀಚೆಗೆ ಚೆಸ್ಕಾಂ ಜಾಗೃತ ದಳ ಯಶಸ್ವಿ ಕಾರ್ಯಾಚರಣೆ ನಡೆಸಿ ಅಕ್ರಮ ವಿದ್ಯುತ್ ಸಂಪರ್ಕ ಪಡೆದ 15 ಮಂದಿ ಮೇಲೆ ಪ್ರಕರಣ ದಾಖಲಿಸಿದೆ.ಸೆಸ್ಕ್ ಜಾಗೃತ ದಳದ ಪೊಲೀಸ್ ಅಧೀಕ್ಷಕರ ನೇತೃತ್ವದಲ್ಲಿ ಡಿವೈಎಸ್ಪಿ ಅನ್ಸರ್ ಆಲಿ ಮತ್ತು ಇ.ಇ.ತಬಸ್ಸಮ್ ರವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.ಹುಣಸೂರಿನಲ್ಲಿ 3 ಪ್ರಕರಣಗಳು,ನಂಜನಗೂಡಿನಲ್ಲಿ 3 ಪ್ರಕರಣಗಳು,ಕೆ.ಆರ್.ನಗರದಲ್ಲಿ 2 ಹಾಗೂ ಮೈಸೂರು ತಾಲೂಕಿನಲ್ಲಿ 7 ಪ್ರಕರಣಗಳು ಪತ್ತೆಯಾಗಿದೆ.ವಿದ್ಯುತ್ ಕಂಬದಿಂದ ನೇರವಾಗಿ ಮನೆಗೆ ಸಂಪರ್ಕ ಪಡೆದಿರುವುದು,ವಿದ್ಯುತ್ ಶುಲ್ಕ ಪಾವತಿಸದೆ ಸಂಪರ್ಕ ಕಡಿತವಾಗಿದ್ದರೂ ಅಕ್ರಮವಾಗಿ ಸಂಪರ್ಕ ಪಡೆದಿರುವುದು,ಸಾರ್ವಜನಿಕ ಕುಡಿಯುವ ನೀರಿನ ಘಟಕದಿಂದ ಅಕ್ರಮವಾಗಿ ಸಂಪರ್ಕ ಪಡೆದಿರುವುದು ಹೀಗೆ ಹಲವಾರು ರೀತಿಯಲ್ಲಿ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದು ಸರ್ಕಾರಕ್ಕೆ ವಂಚಿಸುತ್ತಿರುವ ಪ್ರಕರಣಗಳು ಪತ್ತೆಯಾಗಿದೆ.ಅಕ್ರಮಕ್ಕೆ ಸಾಥ್ ನೀಡಿದ ಆಲನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಹಾಗೂ ಬಿಳಿಕೆರೆ ಹೋಬಳಿಯ ಬೋಳನಹಳ್ಳಿ ಗ್ರಾಮ ಪಂಚಾಯ್ತಿ ಪಿಡಿಓ ಮೇಲೂ ಪ್ರಕರಣ ದಾಖಲಿಸಲಾಗಿದೆ.

ಸೆಸ್ಕ್ ಜಾಗೃತ ದಳದ ನಿರೀಕ್ಷಕರಾದ ವಿನಯ್,ಎ.ಇ.ಇ.ಮನೀಷ್ ಪಾಠಕ್ ರವರ ಉಸ್ತುವಾರಿಯಲ್ಲಿ ಎ.ಇ.ಮಣಿಕಂಠಸ್ವಾಮಿ,ವಿಶ್ವನಾಥ್,ಕೌಸರ್,ತೋಂಟದಾರ್ಯ,ಜಗದೀಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ.ಅಕ್ರಮ ಸಂಪರ್ಕ ಪಡೆಯಲು ಬಳಸಿದ ವಿದ್ಯುತ್ ಉಪಕರಣಗಳನ್ನ ಜಾಗೃತ ತಂಡ ವಶಪಡಿಸಿಕೊಂಡಿದೆ.ಚೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *