ಕೊನೆಗೂ ಸಿಕ್ಕಿಬಿದ್ದ ಮೊಸಳೆ…ಸ್ಥಳೀಯರಲ್ಲಿ ನಿವಾರಣೆಯಾದ ಆತಂಕ…

ಕೊನೆಗೂ ಸಿಕ್ಕಿಬಿದ್ದ ಮೊಸಳೆ…ಸ್ಥಳೀಯರಲ್ಲಿ ನಿವಾರಣೆಯಾದ ಆತಂಕ…

  • Mysore
  • November 17, 2022
  • No Comment
  • 291

ಕೊನೆಗೂ ಸಿಕ್ಕಿಬಿದ್ದ ಮೊಸಳೆ…ಸ್ಥಳೀಯರಲ್ಲಿ ನಿವಾರಣೆಯಾದ ಆತಂಕ…

ಮೈಸೂರು,ನ17,Tv10 ಕನ್ನಡ
ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಮೊಸಳೆ ಕೊನೆಗೂ ಸಿಕ್ಕಿಬಿದ್ದಿದೆ.ಅರಣ್ಯ ಇಲಾಖೆ,ಮೈಸೂರು ಮೃಗಾಲಯ ಹಾಗೂ ಮೈಸೂರು ಮಹಾನಗರ ಪಾಲಿಕೆಯು ಸ್ಥಳೀಯರ ನೆರವಿನಿಂದ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ.ಇಂದು ನಡೆದ ಇಡೀ ದಿನದ ಕಾರ್ಯಾಚರಣೆಯಲ್ಲಿ ಕಣ್ಣಾಮುಚ್ಚಾಲೆ ಆಡಿಸುತ್ತಿದ್ದ ಮೊಸಳೆ ಸೆರೆ ಸಿಕ್ಕಿದೆ.

ರಾಮಾನುಜಾ ರಸ್ತೆಯ 9 ನೇ ಕ್ರಾಸ್ ಬಳಿ ಚರಂಡಿ ನೀರಿನಲ್ಲಿ ಕಳೆದ ಒಂದು ತಿಂಗಳಿಂದ ಹತ್ತಾರು ಬಾರಿ ಕಾಣಿಸಿಕೊಂಡಿದ್ದ ಮೊಸಳೆ ಸ್ಥಳೀಯರಿಗೆ ಆತಂಕ ಸೃಷ್ಟಿಸಿತ್ತು.ಕೆಲವು ದಿನಗಳ ಹಿಂದೆ ಕರುವೊಂದನ್ನ ಬಲಿ ಪಡೆದಿತ್ತು.ಮೊಸಳೆಯನ್ನ ಸೆರೆ ಹಿಡಿಯುವಂತೆ ಸ್ಥಳೀಯ ನಿವಾಸಿಗಳು ತೀವ್ರ ಒತ್ತಡ ಹೇರಿದ್ದರು.ಅರಣ್ಯಾಧಿಕಾರಿಗಳು ನಡೆಸಿದ ಕೆಲವು ಪ್ರಯತ್ನಗಳು ವಿಫಲವಾಗಿದ್ದವು.ಚೆಳ್ಳೆಹಣ್ಣು ತಿನ್ನಿಸುತ್ತಾ ಕಣ್ಣಾಮುಚ್ಚಾಲೆ ಆಟವಾಡಿಸುತ್ತಿತ್ತು.ಇಂದು ಕಾರ್ಯಾಚರಣೆಯನ್ನ ತೀವ್ರಗೊಳಿಸಿದ ಸಿಬ್ಬಂದಿಗಳು ಮೊಸಳೆಯನ್ನ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಸ್ಥಳೀಯ ಕಾರ್ಪೊರೇಟರ್ ಹಾಗೂ ಶಾಸಕ ರಾಮದಾಸ್ ಸಹ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆಗೆ ಸಹಕರಿಸಿದ್ದರು.ಇದೀಗ ಮೊಸಳೆ ಸೆರೆಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ನಿವಾರಣೆಯಾದಂತಾಗಿದೆ.ಸೆರೆ ಸಿಕ್ಕ ಮೊಸಳೆಯನ್ನ ಕಬಿನಿ ಜಲಾಶಯದಲ್ಲಿ ಬಿಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ…

Spread the love

Related post

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್…

ಲೋಕಾ ಬಲೆಗೆ RI…10 ಸಾವಿರ ಲಂಚಕ್ಕೆ ಬೇಡಿಕೆ…ರೆಡ್ ಹ್ಯಾಂಡ್ ಲಾಕ್… ಮಂಡ್ಯ,ಜೂ13,Tv10 ಕನ್ನಡ ಜಮೀನು ಖಾತೆಗೆ ರೂ.2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು 10 ಸಾವಿರ ಹಣ ಸ್ವೀಕರಿಸುವಾಗಲೋಕಾಯುಕ್ತ…
ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ…

ಸಾರ್ವಜನಿಕರ ವಿಶ್ರಾಂತಿ ಸ್ಥಳವಾದ ಕಸದ ರಾಶಿ ಜಾಗ…ನಗರಪಾಲಿಕೆಯ ಉಪಾಯ…ಕಸದ ಹಾವಳಿ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್… ಮೈಸೂರು,ಜೂ12,Tv10 ಕನ್ನಡ ಕಸದರಾಶಿ ಹಾವಳಿ ತಪ್ಪಿಸಲು ಮೈಸೂರು ಮಹಾನಗರ ಪಾಲಿಕೆ ಮಾಸ್ಟರ್ ಪ್ಲಾನ್…
ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ…

ಮುಖ್ಯಮಂತ್ರಿಗಳ ಸಚಿವಾಲಯ ಅಧಿಕಾರಿಗಳ ಕರ್ತವ್ಯದಲ್ಲಿ ಪರಿಷ್ಕರಣೆ…ನೇಮಕ ಅಧಿಕಾರಿಗಳ ಪಟ್ಟಿ ಇಲ್ಲಿದೆ… ಮೈಸೂರು,ಜೂ10,Tv10 ಕನ್ನಡ ನಿರೀಕ್ಷೆಯಂತೆ ಮುಖ್ಯಮಂತ್ರಿಗಳ ಸಚಿವಾಲಯದ ಅಧಿಕಾರಿಗಳ ಕರ್ತವ್ಯದಲ್ಲಿ ಭಾರಿ ಬದಲಾವಣೆ ಆಗಿದೆ.ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕರ್ತವ್ಯ…

Leave a Reply

Your email address will not be published. Required fields are marked *