ಕುವೆಂಪುನಗರ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…11.75 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಕುವೆಂಪುನಗರ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…11.75 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಕುವೆಂಪುನಗರ ಪೊಲೀಸರ ಕಾರ್ಯಾಚರಣೆ…ಇಬ್ಬರು ಸರಗಳ್ಳರ ಬಂಧನ…11.75 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ನ19,Tv10 ಕನ್ನಡ
ಮೋಜು ಮಸ್ತಿಗಾಗಿ ಸರಗಳ್ಳತನಕ್ಕೆ ಇಳಿದ ಇಬ್ಬರು ಚೋರರು ಕುವೆಂಪುನಗರ ಠಾಣೆ ಪೊಲೀಸರ ಅತಿಥಿಯಾಗಿದ್ದಾರೆ.ಕುವೆಂಪುನಗರ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದ್ದಾರೆ.ಬಂಧಿತ ಆರೋಪಿಗಳಿಂದ 11.75. ಲಕ್ಷ ಮೌಲ್ಯದ 235 ಗ್ರಾಂ ತೂಕದ 5 ಚಿನ್ನದ ಸರಗಳನ್ನ ವಶಪಡಿಸಿಕೊಳ್ಳಲಾಗಿದೆ.ಮೈಸೂರಿನ ಯುವಕರಾದ ಸಂತೋಷ್(23) ಹಾಗೂ ದರ್ಶನ್(20) ಬಂಧಿತ ಸರಗಳ್ಳರು.ಬಂಧಿತರಿಂದ 3 ಲಕ್ಷ ಮೌಲ್ಯದ ಮೂರು ಬೈಕ್ ಗಳು ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಗಳನ್ನೂ ಸಹ ವಶಪಡಿಸಿಕೊಳ್ಳಲಾಗಿದೆ.

ಫಾರ್ಮೆಸಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕರು ಮೋಜುಮಸ್ತಿಗಾಗಿ ಸಾಕಷ್ಟು ಸಾಲ ಮಾಡಿದ್ದರು.ಸಾಲ ತೀರಿಸಲು ಅಡ್ಡದಾರಿ ಹಿಡಿದ ಯುವಕರು ಸರಗಳ್ಳತನಕ್ಕೆ ಇಳಿದಿದ್ದರು.ಅಕ್ಟೋಬರ್ ನಲ್ಲಿ ನಡೆದ ಸರಗಳುವು ಪ್ರಕರಣಕ್ಕೆ ಸಂಭಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಕುವೆಂಪುನಗರ ಠಾಣೆ ಇನ್ಸ್ಪೆಕ್ಟರ್ ಷಣ್ಮುಗವರ್ಮ ಅಂಡ್ ಟೀಂ ಇಬ್ಬರು ಖದೀಮರನ್ನ ಸೆದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ಕುವೆಂಪುನಗರ ಠಾಣೆಯ ನಾಲ್ಕು ಹಾಗೂ ಕೆ.ಆರ್.ಪೊಲೀಸ್ ಠಾಣೆಯ 1 ಸರಗಳುವು ಪ್ರಕರಣ ಪತ್ತೆಯಾಗಿದೆ.

ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಗೀತಾ.ಎಂ.ಎಸ್ ರವರ ಮಾರ್ಗದರ್ಶನದಲ್ಲಿ ಕೆ.ಆರ್.ಉಪವಿಭಾಗದ ಎಸಿಪಿ ಗಂಗಾಧರಸ್ವಾಮಿ ಉಸ್ತುವಾರಿಯಲ್ಲಿ,ಕುವೆಂಪುನಗರ ಠಾಣೆಯ ಇನ್ಸ್ಪೆಕ್ಟರ್ ಷಣ್ಮುಗವರ್ಮ ನೇತೃತ್ವದಲ್ಲಿ ಪಿಎಸ್ಸೈ ಗಳಾದ ಕು.ರಾಧ,ಗೋಪಾಲ್,ಎಎಸ್ಸೈ ಮಹದೇವ ಹಾಗೂ ಸಿಬ್ಬಂದಿಗಳಾದ ಮಂಜುನಾಥ್,ಪುಟ್ಟಪ್ಪ,ನಾಗೇಶ್,ಯೋಗೇಶ್,ಮನುಕುಮಾರ್,ಶ್ರೀನಿವಾಸ್,ಮಾದೇಶ್ ರವರು ಕಾರ್ಯಾಚರಣೆಯನ್ನ ಯಶಸ್ವಿಗೊಳಿಸಿದ್ದಾರೆ

ಯಶಸ್ವಿ ಕಾರ್ಯಾಚರಣೆಯನ್ನ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಡಿಸಿಪಿ ಪ್ರದೀಪ್ ಘಂಟಿ ಪ್ರಶಂಸಿಸಿದ್ದಾರೆ…

Spread the love

Related post

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ…

ಕಾಡುಹಂದಿ ಬೇಟೆ… ಓರ್ವನ ಬಂಧನ… ಮೂವರು ಪರಾರಿ… ಚಾಮರಾಜನಗರ,ಜು28,Tv10 ಕನ್ನಡ ಕಾಡುಹಂದಿ ಬೇಟೆ ಮಾಡಿದ ಆರೋಪದ ಹಿನ್ನಲೆ ಓರ್ವ ಆರೋಪಿಯನ್ನ ಬಂಧಿಸಲಾಗಿದೆ.ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಘಟನೆ ನಡೆದಿದೆ.ಕೊಡಗು ಜಿಲ್ಲೆ…
ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…

Leave a Reply

Your email address will not be published. Required fields are marked *