ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಹುಣಸೂರು,ನ27,Tv10 ಕನ್ನಡ
ಸೂರಿಲ್ಲದ ವ್ಯಕ್ತಿಯೊಬ್ಬ ಅಂಗನವಾಡಿ ಕಟ್ಟಡವನ್ನ ಆಶ್ರಯಿಸಿಕೊಂಡ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಶಿವ ಎಂಬುವವರು ಅಂಗನವಾಡಿ ಕೇಂದ್ರವನ್ನ ತಮ್ಮ ಮನೆಯಾಗಿ ಮಾಡಿಕೊಂಡಿದ್ದಾರೆ.ಹೀಗಾಗಿ ಅಂಗನವಾಡಿಗೆ ಬರಬೇಕಿದ್ದ ಮಕ್ಕಳು ಚಟುವಟಿಕೆಯಿಂದ ದೂರ ಉಳಿಯುವಂತಾಗಿದೆ. ಅಂಗನವಾಡಿ ಜಾಗ ನಮ್ಮ ತಾಯಿ ಹೆಸರಿನಲ್ಲಿ ಇದ್ದು ನಾನು ಕಂದಾಯ ಕಟ್ಟುತ್ತಿದ್ದೇನೆ. ನನ್ನ ಜಾಗವನ್ನು ನನಗೆ ಬಿಟ್ಟುಕೊಡಿ ಎಂದು ಪಟ್ಟು ಹಿಡಿದಿದ್ದಾರೆ.2015 ರಲ್ಲಿ ಅಂಗನವಾಡಿಗೆ ಜಾಗ ಬಿಟ್ಟುಕೊಟ್ಟಾಗ ಬದಲಿ ನಿವೇಶನ ಮನೆ ಮಂಜೂರು ಮಾಡಿಕೊಡುವುದಾಗಿ ಬೀಜಗನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಭರವಸೆ ನೀಡಿತ್ತು.ಲಿಖಿತ ರೂಪದಲ್ಲಿ ಬರೆದು ಕೊಟ್ಟಿದರು. ಆದರೆ ಇಲ್ಲಿವರೆಗೂ ಯಾವುದೇ ನಿವೇಶನವಾಗಲಿ, ಮನೆಯಾಗಲಿ ಮಂಜೂರು ಮಾಡಿಲ್ಲ.ಹೀಗಾಗಿ ನನಗೆ ವಾಸ ಮಾಡಲು ಮನೆ ಇಲ್ಲ. ಪಂಚಾಯಿತಿ ಯವರು ನನಗೆ ಮೋಸ ಮಾಡುತ್ತಿದ್ದಾರೆ. ನಿವೇಶನ ಕೊಡಲಿ ಇಲ್ಲ ಅಂದರೆ ನನ್ನ ಜಾಗವನ್ನು ನನಗೆ ಬಿಟ್ಟುಕೊಡಲಿ ಎಂದು ಪಟ್ಟು ಹಿಡಿದು ಅಂಗನವಾಡಿಯಲ್ಲಿ ಗಂಟು ಮೂಟೆ ಕಟ್ಟಿಕೊಂಡು ಬೀಡುಬಿಟ್ಟಿದ್ದಾರೆ.ಈ ಬೆಳವಣಿಗೆಯಿಂದ ಅಂಗನವಾಡಿಯಲ್ಲಿ ಚಟುವಟಿಕೆ ಸ್ಥಗಿತವಾಗಿದೆ. ಅಂಗನವಾಡಿ ಮಕ್ಕಳು ಮನೆಯಲ್ಲೇ ಉಳಿದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಸರ್ಕಾರ ತಾಲ್ಲೂಕು ಆಡಳಿತ ಬೀಜಗನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *