ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಹುಣಸೂರು,ನ27,Tv10 ಕನ್ನಡ
ಸೂರಿಲ್ಲದ ವ್ಯಕ್ತಿಯೊಬ್ಬ ಅಂಗನವಾಡಿ ಕಟ್ಟಡವನ್ನ ಆಶ್ರಯಿಸಿಕೊಂಡ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಶಿವ ಎಂಬುವವರು ಅಂಗನವಾಡಿ ಕೇಂದ್ರವನ್ನ ತಮ್ಮ ಮನೆಯಾಗಿ ಮಾಡಿಕೊಂಡಿದ್ದಾರೆ.ಹೀಗಾಗಿ ಅಂಗನವಾಡಿಗೆ ಬರಬೇಕಿದ್ದ ಮಕ್ಕಳು ಚಟುವಟಿಕೆಯಿಂದ ದೂರ ಉಳಿಯುವಂತಾಗಿದೆ. ಅಂಗನವಾಡಿ ಜಾಗ ನಮ್ಮ ತಾಯಿ ಹೆಸರಿನಲ್ಲಿ ಇದ್ದು ನಾನು ಕಂದಾಯ ಕಟ್ಟುತ್ತಿದ್ದೇನೆ. ನನ್ನ ಜಾಗವನ್ನು ನನಗೆ ಬಿಟ್ಟುಕೊಡಿ ಎಂದು ಪಟ್ಟು ಹಿಡಿದಿದ್ದಾರೆ.2015 ರಲ್ಲಿ ಅಂಗನವಾಡಿಗೆ ಜಾಗ ಬಿಟ್ಟುಕೊಟ್ಟಾಗ ಬದಲಿ ನಿವೇಶನ ಮನೆ ಮಂಜೂರು ಮಾಡಿಕೊಡುವುದಾಗಿ ಬೀಜಗನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಭರವಸೆ ನೀಡಿತ್ತು.ಲಿಖಿತ ರೂಪದಲ್ಲಿ ಬರೆದು ಕೊಟ್ಟಿದರು. ಆದರೆ ಇಲ್ಲಿವರೆಗೂ ಯಾವುದೇ ನಿವೇಶನವಾಗಲಿ, ಮನೆಯಾಗಲಿ ಮಂಜೂರು ಮಾಡಿಲ್ಲ.ಹೀಗಾಗಿ ನನಗೆ ವಾಸ ಮಾಡಲು ಮನೆ ಇಲ್ಲ. ಪಂಚಾಯಿತಿ ಯವರು ನನಗೆ ಮೋಸ ಮಾಡುತ್ತಿದ್ದಾರೆ. ನಿವೇಶನ ಕೊಡಲಿ ಇಲ್ಲ ಅಂದರೆ ನನ್ನ ಜಾಗವನ್ನು ನನಗೆ ಬಿಟ್ಟುಕೊಡಲಿ ಎಂದು ಪಟ್ಟು ಹಿಡಿದು ಅಂಗನವಾಡಿಯಲ್ಲಿ ಗಂಟು ಮೂಟೆ ಕಟ್ಟಿಕೊಂಡು ಬೀಡುಬಿಟ್ಟಿದ್ದಾರೆ.ಈ ಬೆಳವಣಿಗೆಯಿಂದ ಅಂಗನವಾಡಿಯಲ್ಲಿ ಚಟುವಟಿಕೆ ಸ್ಥಗಿತವಾಗಿದೆ. ಅಂಗನವಾಡಿ ಮಕ್ಕಳು ಮನೆಯಲ್ಲೇ ಉಳಿದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಸರ್ಕಾರ ತಾಲ್ಲೂಕು ಆಡಳಿತ ಬೀಜಗನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *