ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಸೂರಿಲ್ಲದ ವ್ಯಕ್ತಿಗೆ ಮನೆಯಾದ ಅಂಗನವಾಡಿ ಕಟ್ಟಡ…ನನ್ನದೇ ಮನೆ ಎಂದು ಪಟ್ಟು ಹಿಡಿದು ಕುಳಿತ…

ಹುಣಸೂರು,ನ27,Tv10 ಕನ್ನಡ
ಸೂರಿಲ್ಲದ ವ್ಯಕ್ತಿಯೊಬ್ಬ ಅಂಗನವಾಡಿ ಕಟ್ಟಡವನ್ನ ಆಶ್ರಯಿಸಿಕೊಂಡ ಘಟನೆ ಹುಣಸೂರು ತಾಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ ಶಿವ ಎಂಬುವವರು ಅಂಗನವಾಡಿ ಕೇಂದ್ರವನ್ನ ತಮ್ಮ ಮನೆಯಾಗಿ ಮಾಡಿಕೊಂಡಿದ್ದಾರೆ.ಹೀಗಾಗಿ ಅಂಗನವಾಡಿಗೆ ಬರಬೇಕಿದ್ದ ಮಕ್ಕಳು ಚಟುವಟಿಕೆಯಿಂದ ದೂರ ಉಳಿಯುವಂತಾಗಿದೆ. ಅಂಗನವಾಡಿ ಜಾಗ ನಮ್ಮ ತಾಯಿ ಹೆಸರಿನಲ್ಲಿ ಇದ್ದು ನಾನು ಕಂದಾಯ ಕಟ್ಟುತ್ತಿದ್ದೇನೆ. ನನ್ನ ಜಾಗವನ್ನು ನನಗೆ ಬಿಟ್ಟುಕೊಡಿ ಎಂದು ಪಟ್ಟು ಹಿಡಿದಿದ್ದಾರೆ.2015 ರಲ್ಲಿ ಅಂಗನವಾಡಿಗೆ ಜಾಗ ಬಿಟ್ಟುಕೊಟ್ಟಾಗ ಬದಲಿ ನಿವೇಶನ ಮನೆ ಮಂಜೂರು ಮಾಡಿಕೊಡುವುದಾಗಿ ಬೀಜಗನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಭರವಸೆ ನೀಡಿತ್ತು.ಲಿಖಿತ ರೂಪದಲ್ಲಿ ಬರೆದು ಕೊಟ್ಟಿದರು. ಆದರೆ ಇಲ್ಲಿವರೆಗೂ ಯಾವುದೇ ನಿವೇಶನವಾಗಲಿ, ಮನೆಯಾಗಲಿ ಮಂಜೂರು ಮಾಡಿಲ್ಲ.ಹೀಗಾಗಿ ನನಗೆ ವಾಸ ಮಾಡಲು ಮನೆ ಇಲ್ಲ. ಪಂಚಾಯಿತಿ ಯವರು ನನಗೆ ಮೋಸ ಮಾಡುತ್ತಿದ್ದಾರೆ. ನಿವೇಶನ ಕೊಡಲಿ ಇಲ್ಲ ಅಂದರೆ ನನ್ನ ಜಾಗವನ್ನು ನನಗೆ ಬಿಟ್ಟುಕೊಡಲಿ ಎಂದು ಪಟ್ಟು ಹಿಡಿದು ಅಂಗನವಾಡಿಯಲ್ಲಿ ಗಂಟು ಮೂಟೆ ಕಟ್ಟಿಕೊಂಡು ಬೀಡುಬಿಟ್ಟಿದ್ದಾರೆ.ಈ ಬೆಳವಣಿಗೆಯಿಂದ ಅಂಗನವಾಡಿಯಲ್ಲಿ ಚಟುವಟಿಕೆ ಸ್ಥಗಿತವಾಗಿದೆ. ಅಂಗನವಾಡಿ ಮಕ್ಕಳು ಮನೆಯಲ್ಲೇ ಉಳಿದುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಸರ್ಕಾರ ತಾಲ್ಲೂಕು ಆಡಳಿತ ಬೀಜಗನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕಿದೆ…

Spread the love

Related post

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಆರ್.ಟಿ.ಐ.ಮಾಹಿತಿ ಪತ್ರಿಕೆ ಅಸ್ತಿತ್ವಕ್ಕೆ…ಭಾಷ್ಯಂ ಸ್ವಾಮೀಜಿ ರವರಿಂದ ಬಿಡುಗಡೆ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ಯೋಗನರಸಿಂಹ ಸ್ವಾಮಿ ದೇವಾಲಯದಲ್ಲಿ ಇಂದು ಆರ್.ಟಿ.ಐ.ಮಾಹಿತಿ ಪತ್ರಿಕೆ ಬಿಡುಗಡೆ ಮಾಡಲಾಯಿತು.ದೇವಾಲಯದ ಸಂಸ್ಥಾಪಕರಾದ ಪ್ರೊ.ಭಾಷ್ಯಂ ಸ್ವಾಮೀಜಿ ರವರು ಬಿಡುಗಡೆ ಮಾಡಿದರು.ಈ ವೇಳೆ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್…
ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…

Leave a Reply

Your email address will not be published. Required fields are marked *