ರಾತ್ರೋ ರಾತ್ರಿ ಬಸ್ ತಂಗುದಾಣ ಡೆಮಾಲಿಷ್…ಸಾರ್ವಜನಿಕರ ಆಕ್ರೋಷ…

ರಾತ್ರೋ ರಾತ್ರಿ ಬಸ್ ತಂಗುದಾಣ ಡೆಮಾಲಿಷ್…ಸಾರ್ವಜನಿಕರ ಆಕ್ರೋಷ…

ರಾತ್ರೋ ರಾತ್ರಿ ಬಸ್ ತಂಗುದಾಣ ಡೆಮಾಲಿಷ್…ಸಾರ್ವಜನಿಕರ ಆಕ್ರೋಷ…

ಶ್ರೀರಂಗಪಟ್ಟಣ, ನ30,Tv10 ಕನ್ನಡ
ಗುಂಬಸ್ ಮಾದರಿ ಗೋಪುರ ನಿರ್ಮಿಸಿ ಭಾರಿ ವಿವಾದಕ್ಕೆ ಕಾರಣವಾಗಿ ರಾತ್ರೋರಾತ್ರಿ ಗೋಪುರ ತೆರುವಾದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಸ್ ನಿಲ್ದಾಣ ತೆರುವಾಗಿ ಸಾರ್ವಜನಿಕರ ಆಕ್ರೋಷಕ್ಕೆ ಕಾರಣವಾಗಿದೆ. ಶ್ರೀರಂಗಪಟ್ಟಣ ತಾಲೂಕಿನ ಮೊಗರಹಳ್ಳಿ(ಮಂಟಿ) ಗ್ರಾಮದ ಬಳಿ‌ಯ ಆಂಜನೇಯಸ್ವಾಮಿ ದೇವಸ್ಥಾನದ ಪಕ್ಕದಲ್ಲಿರುವ ಸಾರ್ವಜನಿಕ ಬಸ್ ನಿಲ್ದಾಣ ರಾತ್ರೋ ರಾತ್ರಿ ತೆರುವಾಗಿದೆ.ಯಾವುದೇ ಅನುಮತಿ ಇಲ್ಲದೆ ಏಕಾಏಕಿ ತೆರುವಾದ ಕಾರಣ ಗುತ್ತಿಗೆದಾರನ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು ನಿಂದ‌ ಕೆ.ಆರ್.ಎಸ್ ಗೆ ಸಂಪರ್ಕ ಕಲ್ಪಿಸುವ PWD ರಸ್ತೆಯ ಪಕ್ಕದಲ್ಲಿ ತಾಲೂಕು ಪಂಚಾಯ್ತಿ ಅನುದಾನದಲ್ಲಿ‌ ಬಸ್ ನಿಲ್ದಾಣ ನಿರ್ಮಾಣ ಮಾಡಲಾಗಿತ್ತು.ಇದರ ಪಕ್ಕದಲ್ಲೇ ಮೂಡಾ ಅನುದಾನದಲ್ಲಿ ರಸ್ತೆ ನಿರ್ಮಾಣ ಮಾಡುತ್ತಿದ್ದ ಗುತ್ತಿಗೆದಾರ ಎಂ.ಎಸ್ ರೇವಣ್ಣ ಅವರು ಜೆಸಿಬಿ ಯಂತ್ರ ಬಳಸಿ ತೆರುವುಗೊಳಿಸಿದ್ದಾರೆ. ರಾತ್ರೋ ರಾತ್ರಿ ಬಸ್ ತಂಗುದಾಣ ಮಾಯವಾಗಿರುವುದು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿದೆ. ಸ್ಥಳೀಯರು ಗ್ರಾ.ಪಂ ಪಿಡಿಓ ಅವರನ್ನು‌ ಪ್ರಶ್ನಿಸಿದಾಗ ಪಂಚಾಯತಿ ವತಿಯಿಂದ ತೆರುವು ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ಅನುಮತಿ ಇಲ್ಲದೆ ಏಕಾಏಕಿ ಸಾರ್ವಜನಿಕ ಬಸ್ ನಿಲ್ದಾಣವನ್ನು ತೆರುವು ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸ ಬೇಕು ಹಾಗೂ ಇದೇ ಸ್ಥಳದಲ್ಲಿ ಗುತ್ತಿಗೆದಾರನ ಸ್ವಂತ ಹಣದಲ್ಲಿ ಪುನರ್ ನಿರ್ಮಿಸ ಬೇಕು ಎಂದು ಸ್ಥಳೀಯರು ತಾಕೀತು ಮಾಡಿದ್ದಾರೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ರಸ್ತೆಗಿಳಿದು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್ ಅವರ ಸೂಚನೆಯಂತೆ ಸ್ಥಳಕ್ಕೆ ದಾವಿಸಿದ ಪ್ರಾಧಿಕಾರದ ಸೂಪರ್ ಡೆಂಟ್ ಇಂಜಿನಿಯರ್ ಚನ್ನಕೇಶವ ಹಾಗೂ ಸಿಬ್ಬಂದಿಗಳು ಸ್ಥಳ ಪರಿಶೀಲನೆ ಮಾಡಿ ಅನುಮತಿ ಇಲ್ಲದೆ ಬಸ್ ನಿಲ್ದಾಣ ತೆರುವು ಮಾಡಿದ್ದಾರೆ ಇದು ಕಾನೂನು ಬಾಹಿರ ಎಂದು ಸ್ಪಷ್ಟಪಡಿಸಿದ್ದಾರೆ. ತಪ್ಪಿತಸ್ಥ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *