ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರಿನಲ್ಲಿ 10 ನೇ ದಿನಕ್ಕೆ ಕಾಲಿರಿಸಿದ ರೈತರ ಪ್ರತಿಭಟನೆ…ಭಿಕ್ಷಾಪಾತ್ರೆ ಪ್ರದರ್ಶಿಸಿ ಆಕ್ರೋಷ…

ಬೆಂಗಳೂರು,ಡಿ1,Tv10 ಕನ್ನಡ
ರಾಜ್ಯ ಕಬ್ಬು ಬೆಳೆಗಾರ ಸಂಘದ ವತಿಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ 10 ನೇ ದಿನಕ್ಕೆ ಕಾಲಿರಿಸಿದೆ.ಭಿಕ್ಷಾಪಾತ್ರೆ ಪ್ರದರ್ಶಿಸಿ ನಾವು ಭಿಕ್ಷುಕರಲ್ಲ ಅನಗನದಾತರು ಎಂಬ ಸಂದೇಶ ಸರ್ಕಾರಕ್ಕೆ ರವಾನಿಸಿದರು.

ಕಬ್ಬು ಎಫ್ ಆರ್ ಪಿ ದರ ಎರಿಕೆ, ಕಬ್ಬಿನಿಂದ ಬರುವ ಉಪ ಉತ್ಪನ್ನಗಳ ಲಾಭ ಹಂಚಿಕೆ ಮಾಡುವುದು ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಕೆಗಾಗಿ ಅಹೋರಾತ್ರಿ ಪ್ರತಿಭಟನೆ ನಡೆಯುತ್ತಿದೆ.ಕಬ್ಬು ಹೆಚ್ಚುವರಿ ದರ ನಿಗದಿ ಬಗ್ಗೆ ರಾಜ್ಯ ಸರ್ಕಾರ ನಾಲ್ಕಾರು ಸಭೆಗಳನ್ನು ನಡೆಸಿ, ತಜ್ಞರ ಸಮಿತಿ ರಚಿಸಿ ಐದು ದಿನದಲ್ಲಿ ವರದಿ ಪಡೆದು ಯಾವುದೇ ನಿರ್ಧಾರ ಪ್ರಕಟಿಸಿದಿರುವುದನ್ನ ಕಬ್ಬು ಬೆಳೆಗಾರರ ಸಂಘ ಖಂಡಿಸಿದೆ.
ರಾಜ್ಯದಲ್ಲಿ 30 ಲಕ್ಷ ಕಬ್ಬು ಬೆಳೆಗಾರರು 7-50 ಕೋಟಿ ಟನ್ ಕಬ್ಬು ಬೆಳೆದು 78 ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ನೀಡಿ, ಕಬ್ಬು ಬೆಳೆದ ರೈತ ಬಿಕ್ಷುಕರಾಗುತ್ತಿದ್ದಾನೆ, ರೈತರ ಮತ ಭಿಕ್ಷೆ ಬೇಡುವ ಸರ್ಕಾರ ರೈತರ ಮೂಗಿಗೆ ತುಪ್ಪ ಸವರೋ ಕೆಲಸ ಮಾಡುತ್ತಿದ್ದಾರೆ , ವರ್ಷದಲ್ಲಿ 30000 ಕೋಟಿ ವೈಹಿವಾಟು ನಡೆಸುವ ರಾಜ್ಯ ಸರ್ಕಾರಕ್ಕೆ 5000 ಕೋಟಿ ತೆರಿಗೆ ಬರುತ್ತಿದೆ ಆದರೂ ನಿರ್ಲಕ್ಷತನ ತೋರುತ್ತಿದೆ ಎಂದು ಆರೋಪಿಸಿ ಭಿಕ್ಷಾಟನೆ ಮಾಡುವಂತೆ ಅಣಕು ಪ್ರದರ್ಶನ ಮಾಡಿ ಸರ್ಕಾರವನ್ನ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ರಾಜ್ಯಾಧ್ಯಕ್ಷರಾದ
ರೈತರತ್ನ ಕುರುಬೂರು ಶಾಂತಕುಮಾರ್, ಸುರೇಶ್ ಮ ಪಾಟೀಲ್,
ಅತ್ತಹಳ್ಳಿ ದೇವರಾಜ್,
ಆಶೂಕಮೇಟಿ, ಗಜೇಂದ್ರ ಸಿಂಗ್, ದೇವರಾಜ್ ಬರಡನಪುರ ನಾಗರಾಜ್, ವೆಂಕಟಲಕ್ಷ್ಮಿ, ದೇವಮಣ್ಣಿ,
ಕೆಂಡಗಣಸ್ವಾಮಿ
ಮತ್ತಿತರರು ಭಾಗವಹಿಸಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *