ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬ್ರಾಹ್ಮಣ ಸಮುದಾಯದ ಆಕ್ರೋಷ…ಮೀಸಲಾತಿ ಬಗ್ಗೆ ಮಾತನಾಡಿದ ಶಾಸಕನ ವಿರುದ್ದ ಪ್ರತಿಭಟನೆ…

ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬ್ರಾಹ್ಮಣ ಸಮುದಾಯದ ಆಕ್ರೋಷ…ಮೀಸಲಾತಿ ಬಗ್ಗೆ ಮಾತನಾಡಿದ ಶಾಸಕನ ವಿರುದ್ದ ಪ್ರತಿಭಟನೆ…

  • Mysore
  • December 3, 2022
  • No Comment
  • 207

ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬ್ರಾಹ್ಮಣ ಸಮುದಾಯದ ಆಕ್ರೋಷ…ಮೀಸಲಾತಿ ಬಗ್ಗೆ ಮಾತನಾಡಿದ ಶಾಸಕನ ವಿರುದ್ದ ಪ್ರತಿಭಟನೆ…

ಮೈಸೂರು,ಡಿ3,Tv10 ಕನ್ನಡ
ಬ್ರಾಹ್ಮಣ ಜನಾಂಗದ ವಿರುದ್ಧವಾಗಿ ದೆಹಲಿಯ ಜೆ.ಎನ್.ಯು ವಿಶ್ವವಿದ್ಯಾನಿಲಯದ ಗೋಡೆಗಳ ಮೇಲೆ ಅವಹೇಳನಕಾರಿಯಾಗಿ ಬರೆದ ಕಿಡಿಗೇಡಿಗಳನ್ನ ಬಂಧಿಸಿ ಕಠಿಣಕ್ರಮ ಕೈಗೊಳ್ಳುವಂತೆ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆರ್ಥಿಕವಾಗಿ ಹಿಂದುಳಿದ 144 ಮೇಲ್ಜಾತಿಯ ಪಂಗಡಗಳಿಗೆ 10% ಮೀಸಲಾತಿ ಸುಪ್ರಿಂ ಕೋರ್ಟ್ ತೀರ್ಪನ್ನ ಸಾರ್ವಜನಿಕವಾಗಿ ಮಾತನಾಡುವಾಗ ಬ್ರಾಹ್ಮಣರಿಗೆ 10% ಮೀಸಲಾತಿ ತಲುಪತ್ತದೆ ಎಂದು ತಪ್ಪಾಗಿ ಮಾಹಿತಿ ನೀಡಿದ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬ್ರಾಹ್ಮಣ ಸಮುದಾಯ ಇಂದು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿತು.ಇಂತಹವರ ವಿರುದ್ದ ಸೂಕ್ತಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮೈಸೂರು ನಗರ ಹಾಗೂ ಜಿಲ್ಲಾ ಬ್ರಾಹ್ಮಣ ಸಂಘದ ಹಾಗೂ ಮೈಸೂರು ಬ್ರಾಹ್ಮಣ ಸಂಘಟನೆಗಳ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.
ಬ್ರಾಹ್ಮಣ ಜನಾಂಗದ ಮೇಲೆ ಕೆಲವು ಕಿಡಿಗೇಡಿಗಳು ಪದೇಪದೇ ಅವಹೇಳನ ಮಾಡಿ ಸಮಾಜದಲ್ಲಿ ಶಾಂತಿ ಕೆದಡುವ ವಾತವರಣಕ್ಕೆ ಮುಂದಾಗುತ್ತಿದ್ದು ಇವರ ಮೇಲೆ ಸರ್ಕಾರ ಸೂಕ್ತ ಕಠಿಣ ಕಾನೂನುಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು. ಈಹಿಂದೆ ಪಾ.ಮಲ್ಲೇಶ್ ನಂತರ ಇದೀಗ ವರುಣಾ ವಿಧಾನಸಭಾ ಶಾಸಕ ಯತೀಂದ್ರ ಸಿದ್ಧರಾಮಯ್ಯ ಸರದಿಯಾಗಿದೆ. ಬ್ರಾಹ್ಮಣ ಜನಾಂಗ ಶೇಕಡ 3% ಮಂದಿಯಿದ್ದು ಅವರಿಗೆ 10% ಮೀಸಲಾತಿ ಕಲ್ಪಿಸಲಾಗಿದೆ ಎಂದು ಸಾರ್ವಜನಿಕ ವೇದಿಕೆಯಲ್ಲಿ ತಪ್ಪಾಗಿ ಹೇಳಿ ಜಾತಿಜಾತಿಗಳ ವಿರುದ್ಧ ಜಗಳ ಬಿತ್ತುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿ ಧಿಕ್ಕಾರ ಕೂಗಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಕರ್ನಾಟಕ ಸರ್ಕಾರದ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ರಾಜ್ಯ ನಿರ್ದೇಶಕರಾದ ಎಂ ಆರ್ ಬಾಲಕೃಷ್ಣ, ಪರಮಪೂಜ್ಯ ಇಳೈಆಳ್ವಾರ್ ಸ್ವಾಮೀಜಿ, ಲೇಖಕರು ಹಾಗೂ ನಿವೃತ್ತಿ ತಾಸಿಲ್ದಾರರದ ರಂಗನಾಥ್, ಮಾಜಿನಗರ ಪಾಲಿಕೆ ಸದಸ್ಯರಾದ ಸೌಭಾಗ್ಯ ಮೂರ್ತಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರಾಕೇಶ್ ಭಟ್, ಮುಳ್ಳೂರು ಗುರುಪ್ರಸಾದ್, ಕಡಕೋಳ ಜಗದೀಶ್,
ಜಯಸಿಂಹಾ ಶ್ರೀಧರ್, ರಂಗನಾಥ್, ವಿಕಾಸ್ ಶಾಸ್ತ್ರಿ, ವಿಪ್ರ ಪ್ರೊಫೆಷನಲ್ ಸುಧೀಂದ್ರ, ಓಂ ಶ್ರೀನಿವಾಸ್, ಅಪೂರ್ವ ಸುರೇಶ್ ,ಮಿರ್ಲೆ ಪನೀಶ್, ವಾಸುದೇವ್ ಮೂರ್ತಿ, ಮಂಜುನಾಥ್, ಸುಚೇಂದ್ರ, ಪ್ರಶಾಂತ್,ವಿಘ್ನೇಶ್ವರ ಭಟ್, ಸುದರ್ಶನ್, ಶ್ರೀನಿವಾಸ್,
ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *