ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬ್ರಾಹ್ಮಣ ಸಮುದಾಯದ ಆಕ್ರೋಷ…ಮೀಸಲಾತಿ ಬಗ್ಗೆ ಮಾತನಾಡಿದ ಶಾಸಕನ ವಿರುದ್ದ ಪ್ರತಿಭಟನೆ…

ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬ್ರಾಹ್ಮಣ ಸಮುದಾಯದ ಆಕ್ರೋಷ…ಮೀಸಲಾತಿ ಬಗ್ಗೆ ಮಾತನಾಡಿದ ಶಾಸಕನ ವಿರುದ್ದ ಪ್ರತಿಭಟನೆ…

  • Mysore
  • December 3, 2022
  • No Comment
  • 190

ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬ್ರಾಹ್ಮಣ ಸಮುದಾಯದ ಆಕ್ರೋಷ…ಮೀಸಲಾತಿ ಬಗ್ಗೆ ಮಾತನಾಡಿದ ಶಾಸಕನ ವಿರುದ್ದ ಪ್ರತಿಭಟನೆ…

ಮೈಸೂರು,ಡಿ3,Tv10 ಕನ್ನಡ
ಬ್ರಾಹ್ಮಣ ಜನಾಂಗದ ವಿರುದ್ಧವಾಗಿ ದೆಹಲಿಯ ಜೆ.ಎನ್.ಯು ವಿಶ್ವವಿದ್ಯಾನಿಲಯದ ಗೋಡೆಗಳ ಮೇಲೆ ಅವಹೇಳನಕಾರಿಯಾಗಿ ಬರೆದ ಕಿಡಿಗೇಡಿಗಳನ್ನ ಬಂಧಿಸಿ ಕಠಿಣಕ್ರಮ ಕೈಗೊಳ್ಳುವಂತೆ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆರ್ಥಿಕವಾಗಿ ಹಿಂದುಳಿದ 144 ಮೇಲ್ಜಾತಿಯ ಪಂಗಡಗಳಿಗೆ 10% ಮೀಸಲಾತಿ ಸುಪ್ರಿಂ ಕೋರ್ಟ್ ತೀರ್ಪನ್ನ ಸಾರ್ವಜನಿಕವಾಗಿ ಮಾತನಾಡುವಾಗ ಬ್ರಾಹ್ಮಣರಿಗೆ 10% ಮೀಸಲಾತಿ ತಲುಪತ್ತದೆ ಎಂದು ತಪ್ಪಾಗಿ ಮಾಹಿತಿ ನೀಡಿದ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬ್ರಾಹ್ಮಣ ಸಮುದಾಯ ಇಂದು ಜಿಲ್ಲಾಧಿಕಾರಿಗಳ ಕಚೇರಿ ಬಳಿ ಪ್ರತಿಭಟನೆ ನಡೆಸಿತು.ಇಂತಹವರ ವಿರುದ್ದ ಸೂಕ್ತಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮೈಸೂರು ನಗರ ಹಾಗೂ ಜಿಲ್ಲಾ ಬ್ರಾಹ್ಮಣ ಸಂಘದ ಹಾಗೂ ಮೈಸೂರು ಬ್ರಾಹ್ಮಣ ಸಂಘಟನೆಗಳ ಒಕ್ಕೂಟ ವತಿಯಿಂದ ಪ್ರತಿಭಟನೆ ನಡೆಯಿತು.
ಬ್ರಾಹ್ಮಣ ಜನಾಂಗದ ಮೇಲೆ ಕೆಲವು ಕಿಡಿಗೇಡಿಗಳು ಪದೇಪದೇ ಅವಹೇಳನ ಮಾಡಿ ಸಮಾಜದಲ್ಲಿ ಶಾಂತಿ ಕೆದಡುವ ವಾತವರಣಕ್ಕೆ ಮುಂದಾಗುತ್ತಿದ್ದು ಇವರ ಮೇಲೆ ಸರ್ಕಾರ ಸೂಕ್ತ ಕಠಿಣ ಕಾನೂನುಕ್ರಮ ಕೈಗೊಳ್ಳಬೇಕಿದೆ ಎಂದು ಆಗ್ರಹಿಸಿದರು. ಈಹಿಂದೆ ಪಾ.ಮಲ್ಲೇಶ್ ನಂತರ ಇದೀಗ ವರುಣಾ ವಿಧಾನಸಭಾ ಶಾಸಕ ಯತೀಂದ್ರ ಸಿದ್ಧರಾಮಯ್ಯ ಸರದಿಯಾಗಿದೆ. ಬ್ರಾಹ್ಮಣ ಜನಾಂಗ ಶೇಕಡ 3% ಮಂದಿಯಿದ್ದು ಅವರಿಗೆ 10% ಮೀಸಲಾತಿ ಕಲ್ಪಿಸಲಾಗಿದೆ ಎಂದು ಸಾರ್ವಜನಿಕ ವೇದಿಕೆಯಲ್ಲಿ ತಪ್ಪಾಗಿ ಹೇಳಿ ಜಾತಿಜಾತಿಗಳ ವಿರುದ್ಧ ಜಗಳ ಬಿತ್ತುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿ ಧಿಕ್ಕಾರ ಕೂಗಿದರು.

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘ ಅಧ್ಯಕ್ಷರಾದ ಡಿ ಟಿ ಪ್ರಕಾಶ್, ಕರ್ನಾಟಕ ಸರ್ಕಾರದ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ರಾಜ್ಯ ನಿರ್ದೇಶಕರಾದ ಎಂ ಆರ್ ಬಾಲಕೃಷ್ಣ, ಪರಮಪೂಜ್ಯ ಇಳೈಆಳ್ವಾರ್ ಸ್ವಾಮೀಜಿ, ಲೇಖಕರು ಹಾಗೂ ನಿವೃತ್ತಿ ತಾಸಿಲ್ದಾರರದ ರಂಗನಾಥ್, ಮಾಜಿನಗರ ಪಾಲಿಕೆ ಸದಸ್ಯರಾದ ಸೌಭಾಗ್ಯ ಮೂರ್ತಿ, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ, ರಾಕೇಶ್ ಭಟ್, ಮುಳ್ಳೂರು ಗುರುಪ್ರಸಾದ್, ಕಡಕೋಳ ಜಗದೀಶ್,
ಜಯಸಿಂಹಾ ಶ್ರೀಧರ್, ರಂಗನಾಥ್, ವಿಕಾಸ್ ಶಾಸ್ತ್ರಿ, ವಿಪ್ರ ಪ್ರೊಫೆಷನಲ್ ಸುಧೀಂದ್ರ, ಓಂ ಶ್ರೀನಿವಾಸ್, ಅಪೂರ್ವ ಸುರೇಶ್ ,ಮಿರ್ಲೆ ಪನೀಶ್, ವಾಸುದೇವ್ ಮೂರ್ತಿ, ಮಂಜುನಾಥ್, ಸುಚೇಂದ್ರ, ಪ್ರಶಾಂತ್,ವಿಘ್ನೇಶ್ವರ ಭಟ್, ಸುದರ್ಶನ್, ಶ್ರೀನಿವಾಸ್,
ಹಾಗೂ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *