ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಬನ್ನೂರು,ಡಿ3,Tv10 ಕನ್ನಡ
ಚಿರತೆ ಹಾವಳಿಗೆ ಟಿ.ನರಸೀಪುರ ಹಾಗೂ ಬನ್ನೂರು ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತಿಗೆ ಒಳಗಾಗಿದ್ದಾರೆ. ಈಗಾಗಲೇ ಟಿ.ನರಸೀಪುರ ವ್ಯಾಪ್ತಿಯಲ್ಲಿ ಇಬ್ಬರನ್ನ ಬಲಿ ಪಡೆದಿವೆ.ಚಿರತೆ ಹಾವಳಿಯಿಂದ ಬೆಚ್ಚಿಬಿದ್ದಿರುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.ಸಂಜೆ 5 ಗಂಟೆ ನಂತರ ಮನೆಯಿಂದ ಹೊರಗೆ ಬಾರದಂತೆ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ.ಕೆಲವು ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡುತ್ತಿದ್ದರೆ ಕೆಲವು ಗ್ರಾಮಗಳಲ್ಲಿ ಪಾಂಪ್ಲೆಟ್ ಗಳನ್ನ ಹಂಚಲಾಗುತ್ತಿದೆ.ಮನೆಗಳ ಮೇಲೆ ನೋಟೀಸ್ ಗಳನ್ನೂ ಸಹ ಅಂಟಿಸಲಾಗುತ್ತಿದೆ.ಅಲ್ಲದೆ ಹೆಲ್ಪ್ ಲೈನ್ ಗಳನ್ನೂ ಸಹ ಬಳಸಿಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.ಮನೆ ಮನೆಗಳಿಗೆ ತೆರಳಿ ಪಾಂಪ್ಲೆಟ್ ಗಳನ್ನ ನೀಡಿ ಎಚ್ಚರಿಕೆ ನೀಡಲಾಗುತ್ತಿದೆ.ಟಿ.ನರಸೀಪುರದ ಮಲ್ಲಿಕಾರ್ಜುನ ಬೆಟ್ಟದಲ್ಲಿ ಓರ್ವ ಯುವಕ ಹಾಗೂ ಕೆಬ್ಬೆಹುಂಡಿ ಗ್ರಾಮದಲ್ಲಿ ಓರ್ವ ಯುವತಿಯನ್ನ ಬಲಿ ಪಡೆದಿರುವ ನರ ಭಕ್ಷಕ ಚಿರತೆಯಿಂದ ಮುಕ್ತಿ ಪಡೆಯಲು ಗ್ರಾಮ ಪಂಚಾಯ್ತಿಗಳು ಮೈಕ್ ಪ್ರಚಾರ ಹಾಗೂ ಭಿತ್ತಿಚಿತ್ರದ ಮೊರೆ ಹೋಗಿವೆ.ಕೇತುಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಲಾಗುತ್ತಿದೆ.ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವ ಹಿನ್ನಲೆ ಸಂಜೆ 5 ಗಂಟೆ ನಂತರ ಮನೆಯಿಂದ ಅನಾವಶ್ಯಕವಾಗಿ ಹೊರಗೆ ಬಾರದಂತೆ ಪ್ರಚಾರ ಮಾಡಲಾಗುತ್ತಿದೆ.ಅರಣ್ಯವಿಲಾಖೆ ಸಿಬ್ಬಂದಿಗಳ ಮೊಬೈಲ್ ನಂಬರ್ ಗಳನ್ನ ಮುದ್ರಿಸಿ ಚಿರತೆ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಲಾಗುತ್ತಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *