ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಬನ್ನೂರು,ಡಿ3,Tv10 ಕನ್ನಡ
ಚಿರತೆ ಹಾವಳಿಗೆ ಟಿ.ನರಸೀಪುರ ಹಾಗೂ ಬನ್ನೂರು ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತಿಗೆ ಒಳಗಾಗಿದ್ದಾರೆ. ಈಗಾಗಲೇ ಟಿ.ನರಸೀಪುರ ವ್ಯಾಪ್ತಿಯಲ್ಲಿ ಇಬ್ಬರನ್ನ ಬಲಿ ಪಡೆದಿವೆ.ಚಿರತೆ ಹಾವಳಿಯಿಂದ ಬೆಚ್ಚಿಬಿದ್ದಿರುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.ಸಂಜೆ 5 ಗಂಟೆ ನಂತರ ಮನೆಯಿಂದ ಹೊರಗೆ ಬಾರದಂತೆ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ.ಕೆಲವು ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡುತ್ತಿದ್ದರೆ ಕೆಲವು ಗ್ರಾಮಗಳಲ್ಲಿ ಪಾಂಪ್ಲೆಟ್ ಗಳನ್ನ ಹಂಚಲಾಗುತ್ತಿದೆ.ಮನೆಗಳ ಮೇಲೆ ನೋಟೀಸ್ ಗಳನ್ನೂ ಸಹ ಅಂಟಿಸಲಾಗುತ್ತಿದೆ.ಅಲ್ಲದೆ ಹೆಲ್ಪ್ ಲೈನ್ ಗಳನ್ನೂ ಸಹ ಬಳಸಿಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.ಮನೆ ಮನೆಗಳಿಗೆ ತೆರಳಿ ಪಾಂಪ್ಲೆಟ್ ಗಳನ್ನ ನೀಡಿ ಎಚ್ಚರಿಕೆ ನೀಡಲಾಗುತ್ತಿದೆ.ಟಿ.ನರಸೀಪುರದ ಮಲ್ಲಿಕಾರ್ಜುನ ಬೆಟ್ಟದಲ್ಲಿ ಓರ್ವ ಯುವಕ ಹಾಗೂ ಕೆಬ್ಬೆಹುಂಡಿ ಗ್ರಾಮದಲ್ಲಿ ಓರ್ವ ಯುವತಿಯನ್ನ ಬಲಿ ಪಡೆದಿರುವ ನರ ಭಕ್ಷಕ ಚಿರತೆಯಿಂದ ಮುಕ್ತಿ ಪಡೆಯಲು ಗ್ರಾಮ ಪಂಚಾಯ್ತಿಗಳು ಮೈಕ್ ಪ್ರಚಾರ ಹಾಗೂ ಭಿತ್ತಿಚಿತ್ರದ ಮೊರೆ ಹೋಗಿವೆ.ಕೇತುಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಲಾಗುತ್ತಿದೆ.ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವ ಹಿನ್ನಲೆ ಸಂಜೆ 5 ಗಂಟೆ ನಂತರ ಮನೆಯಿಂದ ಅನಾವಶ್ಯಕವಾಗಿ ಹೊರಗೆ ಬಾರದಂತೆ ಪ್ರಚಾರ ಮಾಡಲಾಗುತ್ತಿದೆ.ಅರಣ್ಯವಿಲಾಖೆ ಸಿಬ್ಬಂದಿಗಳ ಮೊಬೈಲ್ ನಂಬರ್ ಗಳನ್ನ ಮುದ್ರಿಸಿ ಚಿರತೆ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಲಾಗುತ್ತಿದೆ…

Spread the love

Related post

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್…

ಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ‘ಡಿಕನ್ಸ್ಟ್‌ರಕ್ಟ್’ ರಾಯಭಾರಿಯಾಗಿ ಸಂಗೀತ ಮಾಂತ್ರಿಕ ಅನಿರುದ್ಧ್ ರವಿಚಂದರ್ ಆಯ್ಕೆ ಬೆಂಗಳೂರು: ತನ್ನ ವಿಭಿನ್ನ ಹಾಗೂ ಪರಿಣಾಮಕಾರಿ ಉತ್ಪನ್ನಗಳ ಮೂಲಕ ಗಮನ ಸೆಳೆದಿರುವ ಪ್ರಸಿದ್ಧ…
ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…

Leave a Reply

Your email address will not be published. Required fields are marked *