ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಬನ್ನೂರು,ಡಿ3,Tv10 ಕನ್ನಡ
ಚಿರತೆ ಹಾವಳಿಗೆ ಟಿ.ನರಸೀಪುರ ಹಾಗೂ ಬನ್ನೂರು ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತಿಗೆ ಒಳಗಾಗಿದ್ದಾರೆ. ಈಗಾಗಲೇ ಟಿ.ನರಸೀಪುರ ವ್ಯಾಪ್ತಿಯಲ್ಲಿ ಇಬ್ಬರನ್ನ ಬಲಿ ಪಡೆದಿವೆ.ಚಿರತೆ ಹಾವಳಿಯಿಂದ ಬೆಚ್ಚಿಬಿದ್ದಿರುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.ಸಂಜೆ 5 ಗಂಟೆ ನಂತರ ಮನೆಯಿಂದ ಹೊರಗೆ ಬಾರದಂತೆ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ.ಕೆಲವು ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡುತ್ತಿದ್ದರೆ ಕೆಲವು ಗ್ರಾಮಗಳಲ್ಲಿ ಪಾಂಪ್ಲೆಟ್ ಗಳನ್ನ ಹಂಚಲಾಗುತ್ತಿದೆ.ಮನೆಗಳ ಮೇಲೆ ನೋಟೀಸ್ ಗಳನ್ನೂ ಸಹ ಅಂಟಿಸಲಾಗುತ್ತಿದೆ.ಅಲ್ಲದೆ ಹೆಲ್ಪ್ ಲೈನ್ ಗಳನ್ನೂ ಸಹ ಬಳಸಿಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.ಮನೆ ಮನೆಗಳಿಗೆ ತೆರಳಿ ಪಾಂಪ್ಲೆಟ್ ಗಳನ್ನ ನೀಡಿ ಎಚ್ಚರಿಕೆ ನೀಡಲಾಗುತ್ತಿದೆ.ಟಿ.ನರಸೀಪುರದ ಮಲ್ಲಿಕಾರ್ಜುನ ಬೆಟ್ಟದಲ್ಲಿ ಓರ್ವ ಯುವಕ ಹಾಗೂ ಕೆಬ್ಬೆಹುಂಡಿ ಗ್ರಾಮದಲ್ಲಿ ಓರ್ವ ಯುವತಿಯನ್ನ ಬಲಿ ಪಡೆದಿರುವ ನರ ಭಕ್ಷಕ ಚಿರತೆಯಿಂದ ಮುಕ್ತಿ ಪಡೆಯಲು ಗ್ರಾಮ ಪಂಚಾಯ್ತಿಗಳು ಮೈಕ್ ಪ್ರಚಾರ ಹಾಗೂ ಭಿತ್ತಿಚಿತ್ರದ ಮೊರೆ ಹೋಗಿವೆ.ಕೇತುಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಲಾಗುತ್ತಿದೆ.ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವ ಹಿನ್ನಲೆ ಸಂಜೆ 5 ಗಂಟೆ ನಂತರ ಮನೆಯಿಂದ ಅನಾವಶ್ಯಕವಾಗಿ ಹೊರಗೆ ಬಾರದಂತೆ ಪ್ರಚಾರ ಮಾಡಲಾಗುತ್ತಿದೆ.ಅರಣ್ಯವಿಲಾಖೆ ಸಿಬ್ಬಂದಿಗಳ ಮೊಬೈಲ್ ನಂಬರ್ ಗಳನ್ನ ಮುದ್ರಿಸಿ ಚಿರತೆ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಲಾಗುತ್ತಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *