ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಬನ್ನೂರು,ಡಿ3,Tv10 ಕನ್ನಡ
ಚಿರತೆ ಹಾವಳಿಗೆ ಟಿ.ನರಸೀಪುರ ಹಾಗೂ ಬನ್ನೂರು ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತಿಗೆ ಒಳಗಾಗಿದ್ದಾರೆ. ಈಗಾಗಲೇ ಟಿ.ನರಸೀಪುರ ವ್ಯಾಪ್ತಿಯಲ್ಲಿ ಇಬ್ಬರನ್ನ ಬಲಿ ಪಡೆದಿವೆ.ಚಿರತೆ ಹಾವಳಿಯಿಂದ ಬೆಚ್ಚಿಬಿದ್ದಿರುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.ಸಂಜೆ 5 ಗಂಟೆ ನಂತರ ಮನೆಯಿಂದ ಹೊರಗೆ ಬಾರದಂತೆ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ.ಕೆಲವು ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡುತ್ತಿದ್ದರೆ ಕೆಲವು ಗ್ರಾಮಗಳಲ್ಲಿ ಪಾಂಪ್ಲೆಟ್ ಗಳನ್ನ ಹಂಚಲಾಗುತ್ತಿದೆ.ಮನೆಗಳ ಮೇಲೆ ನೋಟೀಸ್ ಗಳನ್ನೂ ಸಹ ಅಂಟಿಸಲಾಗುತ್ತಿದೆ.ಅಲ್ಲದೆ ಹೆಲ್ಪ್ ಲೈನ್ ಗಳನ್ನೂ ಸಹ ಬಳಸಿಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.ಮನೆ ಮನೆಗಳಿಗೆ ತೆರಳಿ ಪಾಂಪ್ಲೆಟ್ ಗಳನ್ನ ನೀಡಿ ಎಚ್ಚರಿಕೆ ನೀಡಲಾಗುತ್ತಿದೆ.ಟಿ.ನರಸೀಪುರದ ಮಲ್ಲಿಕಾರ್ಜುನ ಬೆಟ್ಟದಲ್ಲಿ ಓರ್ವ ಯುವಕ ಹಾಗೂ ಕೆಬ್ಬೆಹುಂಡಿ ಗ್ರಾಮದಲ್ಲಿ ಓರ್ವ ಯುವತಿಯನ್ನ ಬಲಿ ಪಡೆದಿರುವ ನರ ಭಕ್ಷಕ ಚಿರತೆಯಿಂದ ಮುಕ್ತಿ ಪಡೆಯಲು ಗ್ರಾಮ ಪಂಚಾಯ್ತಿಗಳು ಮೈಕ್ ಪ್ರಚಾರ ಹಾಗೂ ಭಿತ್ತಿಚಿತ್ರದ ಮೊರೆ ಹೋಗಿವೆ.ಕೇತುಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಲಾಗುತ್ತಿದೆ.ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವ ಹಿನ್ನಲೆ ಸಂಜೆ 5 ಗಂಟೆ ನಂತರ ಮನೆಯಿಂದ ಅನಾವಶ್ಯಕವಾಗಿ ಹೊರಗೆ ಬಾರದಂತೆ ಪ್ರಚಾರ ಮಾಡಲಾಗುತ್ತಿದೆ.ಅರಣ್ಯವಿಲಾಖೆ ಸಿಬ್ಬಂದಿಗಳ ಮೊಬೈಲ್ ನಂಬರ್ ಗಳನ್ನ ಮುದ್ರಿಸಿ ಚಿರತೆ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಲಾಗುತ್ತಿದೆ…

Spread the love

Related post

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ ಮಹಿಳೆ ಮೇಲೆ FIR…

ಮಹಿಳೆ ಬಗ್ಗೆ ಕಂಪನಿ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಪೋಸ್ಟ್…ಅಪ್ ಲೋಡ್ ಮಾಡಿದ…

ಮೈಸೂರು,ಜು6,Tv10 ಕನ್ನಡ ಖಾಸಗಿ ಕಂಪನಿ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕ್ರಾಪಿನ್ ಕಂಪನಿಗೆ ಸೇರಿದ…
ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ…

ಅಗಲಿದ ಬಸವನಿಗೆ ಶ್ರದ್ದಾಂಜಲಿ…ಸಮಾಧಿ ಬಳಿ ಕಂಬನಿ ಮಿಡಿದ ಶ್ವಾನ…ಮೇಟಗಳ್ಳಿಯಲ್ಲಿ ಹೃದಯಸ್ಪರ್ಶಿ ಘಟನೆ… ಮೈಸೂರು,ಜು6,Tv10 ಕನ್ನಡ ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ದಾಂಜಲಿ ಅರ್ಪಿಸಿದ್ದಾರೆ.ಕೆಲವು…
ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ ಕ್ಯಾಮರ ಕಣ್ಣಿಗೆ ಸೆರೆಯಾದ ವ್ಯಾಘ್ರ…

ಮೂರು ಹಸುಗಳ ಮೇಲೆ ಹುಲಿ ದಾಳಿ…ಒಂದು ಸಾವು ಎರಡಕ್ಕೆ ಗಾಯ…ಅರಣ್ಯ ಇಲಾಖೆ…

ನಂಜನಗೂಡು,ಜು4,Tv10 ಕನ್ನಡ ಒಂದೇ ದಿನ ಮೂರು ಹಸುಗಳ ಮೇಲೆ ದಾಳಿ ಮಾಡಿದ ವ್ಯಾಘ್ರ ಒಂದು ಸಾವನ್ನಪ್ಪಿದ್ದು ಎರಡು ಹಸುಗಳು ಗಾಯಗೊಂಡ ಘಟನೆ ನಂಜನಗೂಡು ತಾಲೂಕು ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ.ಘಟನೆಯಿಂದ…

Leave a Reply

Your email address will not be published. Required fields are marked *