ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಚಿರತೆ ಹಾವಳಿ:ಸಂಜೆ 5 ಗಂಟೆ ನಂತರ ಮನೆಯಿಂದ ಹೊರಬರಬೇಡಿ…ಕೇತುಪುರ ಗ್ರಾ.ಪಂ.ಯಿಂದ ಮೈಕ್ ಪ್ರಚಾರ…

ಬನ್ನೂರು,ಡಿ3,Tv10 ಕನ್ನಡ
ಚಿರತೆ ಹಾವಳಿಗೆ ಟಿ.ನರಸೀಪುರ ಹಾಗೂ ಬನ್ನೂರು ತಾಲೂಕಿನ ಸುತ್ತಮುತ್ತಲಿನ ಗ್ರಾಮಸ್ಥರು ಭಯಭೀತಿಗೆ ಒಳಗಾಗಿದ್ದಾರೆ. ಈಗಾಗಲೇ ಟಿ.ನರಸೀಪುರ ವ್ಯಾಪ್ತಿಯಲ್ಲಿ ಇಬ್ಬರನ್ನ ಬಲಿ ಪಡೆದಿವೆ.ಚಿರತೆ ಹಾವಳಿಯಿಂದ ಬೆಚ್ಚಿಬಿದ್ದಿರುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.ಸಂಜೆ 5 ಗಂಟೆ ನಂತರ ಮನೆಯಿಂದ ಹೊರಗೆ ಬಾರದಂತೆ ಗ್ರಾಮಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ.ಕೆಲವು ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡುತ್ತಿದ್ದರೆ ಕೆಲವು ಗ್ರಾಮಗಳಲ್ಲಿ ಪಾಂಪ್ಲೆಟ್ ಗಳನ್ನ ಹಂಚಲಾಗುತ್ತಿದೆ.ಮನೆಗಳ ಮೇಲೆ ನೋಟೀಸ್ ಗಳನ್ನೂ ಸಹ ಅಂಟಿಸಲಾಗುತ್ತಿದೆ.ಅಲ್ಲದೆ ಹೆಲ್ಪ್ ಲೈನ್ ಗಳನ್ನೂ ಸಹ ಬಳಸಿಕೊಂಡು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.ಮನೆ ಮನೆಗಳಿಗೆ ತೆರಳಿ ಪಾಂಪ್ಲೆಟ್ ಗಳನ್ನ ನೀಡಿ ಎಚ್ಚರಿಕೆ ನೀಡಲಾಗುತ್ತಿದೆ.ಟಿ.ನರಸೀಪುರದ ಮಲ್ಲಿಕಾರ್ಜುನ ಬೆಟ್ಟದಲ್ಲಿ ಓರ್ವ ಯುವಕ ಹಾಗೂ ಕೆಬ್ಬೆಹುಂಡಿ ಗ್ರಾಮದಲ್ಲಿ ಓರ್ವ ಯುವತಿಯನ್ನ ಬಲಿ ಪಡೆದಿರುವ ನರ ಭಕ್ಷಕ ಚಿರತೆಯಿಂದ ಮುಕ್ತಿ ಪಡೆಯಲು ಗ್ರಾಮ ಪಂಚಾಯ್ತಿಗಳು ಮೈಕ್ ಪ್ರಚಾರ ಹಾಗೂ ಭಿತ್ತಿಚಿತ್ರದ ಮೊರೆ ಹೋಗಿವೆ.ಕೇತುಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮೈಕ್ ಮೂಲಕ ಪ್ರಚಾರ ಮಾಡಲಾಗುತ್ತಿದೆ.ಚಿರತೆ ಸೆರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿರುವ ಹಿನ್ನಲೆ ಸಂಜೆ 5 ಗಂಟೆ ನಂತರ ಮನೆಯಿಂದ ಅನಾವಶ್ಯಕವಾಗಿ ಹೊರಗೆ ಬಾರದಂತೆ ಪ್ರಚಾರ ಮಾಡಲಾಗುತ್ತಿದೆ.ಅರಣ್ಯವಿಲಾಖೆ ಸಿಬ್ಬಂದಿಗಳ ಮೊಬೈಲ್ ನಂಬರ್ ಗಳನ್ನ ಮುದ್ರಿಸಿ ಚಿರತೆ ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಲಾಗುತ್ತಿದೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *