ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಪಾಂಪ್ಲೇಟ್…ಸಿಡಿದೆದ್ದ ದಲಿತ ಮುಖಂಡರು…

Hunsur#Tv10kannada#ambedkar#hanumajayanthi#

ಹುಣಸೂರು,ಡಿ5, ಕನ್ನಡ
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರದ ಮೇಲೆ ಹನುಮ ಜಯಂತಿ ಉತ್ಸವದ ಪಾಂಪ್ಲೇಟ್ ಅಂಟಿಸಿದ ಹಿನ್ನಲೆ ಹುಣಸೂರಿನಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಪಾಂಪ್ಲೆಟ್ ಅಂಟಿಸಿ ಅಂಬೇಡ್ಕರ್ ರವರಿಗೆ ಅಪಮಾನ ಎಸಗಿದ್ದಾರೆಂದು ಆರೋಪಿಸಿ ದಲಿತ ಮುಖಂಡರು ಬೀದಿಗಿಳಿದು ಪ್ರತಿಭಟನೆ ನಡೆಸಿದರು.ಕಿಡಿಗೇಡಿಗಳನ್ನ ಬಂಧಿಸುವಂತೆ ಒತ್ತಾಯಿಸಿ ಆಕ್ರೋಷ ವ್ಯಕ್ತಪಡಿಸಿದರು.ದಲಿತ ಸಂಘಟನೆಗಳ ವತಿಯಿಂದ ನಾಳೆ ಬೆಂಗಳೂರಿನಲ್ಲಿ ಐಕ್ಯತಾ ಸಮಾವೇಶ ಹಮ್ಮಿಕೊಳ್ಳಲಾಗಿದೆ.ಈ ಬಗ್ಗೆ ಹುಣಸೂರಿನಾದ್ಯಂತ ಭಿತ್ತಿಚಿತ್ರಗಳನ್ನ ಅಳವಡಿಸಲಾಗಿದೆ.ಇದೇ ವೇಳೆ ಡಿ.7 ರಂದು ಹುಣಸೂರಿನಲ್ಲಿ ಹನುಮಜಯಂತಿ ಉತ್ಸವವನ್ನೂ ಸಹ ನಡೆಸಲಾಗುತ್ತಿದೆ.ಭಿತ್ತಿಚಿತ್ರದಲ್ಲಿರುವ ಬೇಡ್ಕರ್ ಭಾವಚಿತ್ರದ ಮೇಲೆ ಹನುಮಜಯಂತಿ ಉತ್ಸವ್ ಪಾಂಪ್ಲೆಟ್ ಅಂಟಿಸಲಾಗಿದೆ.ಈ ಬೆಳವಣಿಗೆಯನ್ನ ಖಂಡಿಸಿ ದಲಿತ ಮುಖಂಡರು ಇಂದು ಸಿಡಿದೆದ್ದರು.ಪಾಂಪ್ಲೆಟ್ ಅಂಟಿಸಿದ ಕ್ರಮವನ್ನ ಖಂಡಿಸಿ ಪ್ರತಿಭಟನೆ ನಡೆಸಿದರು.ಶಾಂತಿ ಕದಡುವ ಯತ್ನ ನಡೆಸುತ್ತಿರುವ ಕಿಡಿಗೇಡಿಗಳನ್ನ ಬಂಧಿಸುವಂತೆ ಆಗ್ರಹಿಸಿದರು.ಕಿಡಿಗೇಡಿಗಳನ್ನ ಬಂಧಿಸದಿದ್ದಲ್ಲಿ ಡಿ7 ರಂದು ನಡೆಯುವ ಹನುಮಜಯಂತಿ ಉತ್ಸವವನ್ನ ಬಹಿಷ್ಕರಿಸುವುದಾಗಿ ಎಚ್ಚರಿಸಿದರು.ಅಲ್ಲದೆ ಉತ್ಸವದಲ್ಲಿ ಹಿಂದುಳಿದ ವರ್ಗದ ಯುವಕರು ಭಾಗವಹಿಸದಂತೆ ಕರೆ ನೀಡಿದರು…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *