ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಪಿರಿಯಾಪಟ್ಟಣ,ಡಿ6,Tv10 ಕನ್ನಡ
ರೈತರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವ ಯೂರಿಯಾವನ್ನ ಉತ್ತಮ ಗುಣಮಟ್ಟದ ಬ್ರಾಂಡ್ ಚೀಲಕ್ಕೆ ಬದಲಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಖದೀಮರನ್ನ ಬಂಧಿಸುವಲ್ಲಿ ಪಿರಿಯಾಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.ಕೃಷಿ ಇಲಾಖೆ ಅಧಿಕಾರಿಗಳ ಜೊತೆಗೆ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಉತ್ತಮ ಗುಣಮಟ್ಟದ ಚೀಲದಲ್ಲಿ ತುಂಬಲಾದ 290 ಮೂಟೆ ರಿಯಾಯಿತಿ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಯೂರಿಯಾ ಸಾಗಣಿಕೆ ಬಳಸಿದ ಲಾರಿ ಸಹ ವಶಪಡಿಸಿಕೊಳ್ಳಲಾಗಿದೆ.ಡ್ರೈವರ್ ಸೇರಿದಂತೆ ಐವರನ್ನ ಬಂಧಿಸಲಾಗಿದೆ.ನಿಖಿಲ್,ಮಹಮದ್ ಬಷೀರ್,ಜಸೀರ್,ರಜೀಬ್ ಹಾಗೂ ಸಚಿನ್ ಬಂಧಿತರು.ಪಿರಿಯಾಪಟ್ಟಣ ತಾಲೂಕು ತೆಲಗನಕುಪ್ಪೆ ಗ್ರಾಮದ ರಾಜಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ರಿಯಾಯಿತಿ ದರದಲ್ಲಿ ನೀಡಲಾಗುವ ಯೂರಿಯಾವನ್ನ ಸಂಗ್ರಹಿಸಿ TECHNICAL GRADE UREA ಎಂಬ ಬ್ರಾಂಡ್ ನಮೂದಿಸಿರುವ ಚೀಲಗಳಿಗೆ ಬದಲಾಯಿಸಿ ಕೇರಳಾ ರಾಜ್ಯಕ್ಕೆ ಸಾಗಿಸಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿ ಯೂರಿಯಾ ಮೂಟೆಗಳನ್ನ ವಶಪಡಿಸಿಕೊಂಡು ಆರೋಪಿಗಳನ್ನ ಬಂಧಿಸಲಾಗಿದೆ.ಅನಾಮಧೇಯ ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿ ಪ್ರಸಾದ್ ರವರು ಪಿರಿಯಾಪಟ್ಟಣ ಠಾಣೆ ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಪಿರಿಯಾಪಟ್ಟಣ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಸರ್ವೆ ಸೂಪರ್‌ವೈಸರ್ ಮಂಜುನಾಥ್ ನಿಧನ…ಹೃದಯಾಘಾತದಿಂದ ಸಾವು…

ಹುಣಸೂರು,ಅ13,Tv10 ಕನ್ನಡ ಶ್ರೀರಂಗಪಟ್ಟಣ ಕಂದಾಯ ಇಲಾಖೆ ಸರ್ವೆ ಸೂಪರ್ ವೈಸರ್ ಆಗಿದ್ದ ಹುಣಸೂರು ತಾಲೂಕು ಶ್ಯಾನುಬೋಗನಹಳ್ಳಿಯ ನಿವೃತ್ತ ಸಂಚಾರ ನಿಯಂತ್ರಕ ಗೋವಿಂದೇಗೌಡರ ಪುತ್ರ ಮಂಜುನಾಥ್(50) ಹೃದಯಾಘಾತದಿಂದ ಮೈಸೂರಿನ ಖಾಸಗಿ…
ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಆರ್.ಎಸ್.ಎಸ್.ಪಥಸಂಚಲನ ವೇಳೆ ಕುಸಿದು ಬಿದ್ದಿದ್ದ ಕಾರ್ಯಕರ್ತ ಸಾವು…

ಮೈಸೂರು,ಅ12,Tv10 ಕನ್ನಡ ಆರ್ ಎಸ್ ಎಸ್ ಪಥ ಸಂಚಲನದ ವೇಳೆ ಕುಸಿದ ಬಿದ್ದಿದ್ದ ಸ್ವಯಂಸೇವಕ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ.ಜಯನಗರ ನಿವಾಸಿ ಮಹೇಂದ್ರ ಜೋಯಲ್(37) ಸಾವನ್ನಪ್ಪಿದ ಸ್ವಯಂಸೇವಕ.ಇಂದು…
ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ ಸೇರಿ 7 ಮಂದಿ ವಿರುದ್ದ FIR…

ಶೇರು,ಲ್ಯಾಂಡ್ ಡೆವಲೆಪ್ ವಹಿವಾಟಿನಲ್ಲಿ ಹೆಚ್ಚಿನ ಲಾಭಾಂಶ ಆಮಿಷ…ವ್ಯಕ್ತಿಗೆ 2.5 ಕೋಟಿ ಪಂಗನಾಮ…ಪೇದೆ…

ಮೈಸೂರು,ಅ12,Tv10 ಕನ್ನಡ ಲ್ಯಾಂಡ್ ಡೆವಲೆಪ್ ಮೆಂಟ್ ಹಾಗೂ ಶೇರು ವಹಿವಾಟಿನಲ್ಲಿ ಲಕ್ಷ ಲಕ್ಷ ಸಂಪಾದಿಸಬಹುದೆಂಬ ಆಮಿಷ ಒಡ್ಡಿ ನಿವೃತ್ತ ಉದ್ಯೋಗಿಯೊಬ್ಬರಿಗೆ 2.5 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಮೈಸೂರಿನ…

Leave a Reply

Your email address will not be published. Required fields are marked *