ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಪಿರಿಯಾಪಟ್ಟಣ,ಡಿ6,Tv10 ಕನ್ನಡ
ರೈತರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವ ಯೂರಿಯಾವನ್ನ ಉತ್ತಮ ಗುಣಮಟ್ಟದ ಬ್ರಾಂಡ್ ಚೀಲಕ್ಕೆ ಬದಲಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಖದೀಮರನ್ನ ಬಂಧಿಸುವಲ್ಲಿ ಪಿರಿಯಾಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.ಕೃಷಿ ಇಲಾಖೆ ಅಧಿಕಾರಿಗಳ ಜೊತೆಗೆ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಉತ್ತಮ ಗುಣಮಟ್ಟದ ಚೀಲದಲ್ಲಿ ತುಂಬಲಾದ 290 ಮೂಟೆ ರಿಯಾಯಿತಿ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಯೂರಿಯಾ ಸಾಗಣಿಕೆ ಬಳಸಿದ ಲಾರಿ ಸಹ ವಶಪಡಿಸಿಕೊಳ್ಳಲಾಗಿದೆ.ಡ್ರೈವರ್ ಸೇರಿದಂತೆ ಐವರನ್ನ ಬಂಧಿಸಲಾಗಿದೆ.ನಿಖಿಲ್,ಮಹಮದ್ ಬಷೀರ್,ಜಸೀರ್,ರಜೀಬ್ ಹಾಗೂ ಸಚಿನ್ ಬಂಧಿತರು.ಪಿರಿಯಾಪಟ್ಟಣ ತಾಲೂಕು ತೆಲಗನಕುಪ್ಪೆ ಗ್ರಾಮದ ರಾಜಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ರಿಯಾಯಿತಿ ದರದಲ್ಲಿ ನೀಡಲಾಗುವ ಯೂರಿಯಾವನ್ನ ಸಂಗ್ರಹಿಸಿ TECHNICAL GRADE UREA ಎಂಬ ಬ್ರಾಂಡ್ ನಮೂದಿಸಿರುವ ಚೀಲಗಳಿಗೆ ಬದಲಾಯಿಸಿ ಕೇರಳಾ ರಾಜ್ಯಕ್ಕೆ ಸಾಗಿಸಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿ ಯೂರಿಯಾ ಮೂಟೆಗಳನ್ನ ವಶಪಡಿಸಿಕೊಂಡು ಆರೋಪಿಗಳನ್ನ ಬಂಧಿಸಲಾಗಿದೆ.ಅನಾಮಧೇಯ ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿ ಪ್ರಸಾದ್ ರವರು ಪಿರಿಯಾಪಟ್ಟಣ ಠಾಣೆ ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಪಿರಿಯಾಪಟ್ಟಣ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *