ಹುಣಸೂರಿನಲ್ಲಿ ಇಂದು ಹನುಮ ಜಯಂತಿ…ಬಿಗಿ ಪೊಲೀಸ್ ಭದ್ರತೆ…

ಹುಣಸೂರಿನಲ್ಲಿ ಇಂದು ಹನುಮ ಜಯಂತಿ…ಬಿಗಿ ಪೊಲೀಸ್ ಭದ್ರತೆ…

  • Temples
  • December 7, 2022
  • No Comment
  • 149

ಹುಣಸೂರಿನಲ್ಲಿ ಇಂದು ಹನುಮ ಜಯಂತಿ…ಬಿಗಿ ಪೊಲೀಸ್ ಭದ್ರತೆ…

ಹುಣಸೂರು,ಡಿ7,Tv10 ಕನ್ನಡ
ಹುಣಸೂರಿನಲ್ಲಿ ಇಂದು ಹನುಮ ಜಯಂತಿ ಸಂಭ್ರಮ ಮನೆ ಮಾಡಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿಪೊಲೀಸ್ ಭದ್ರತೆ ಒದಗಿಸಲಾಗಿದೆ.ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ತಾಲೂಕಿನಾದ್ಯಂತ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಇಂದು ಹುಣಸೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹನುಮ ಜಯಂತಿ ಶೋಭಾಯಾತ್ರೆಯ ಸಾಗಲಿರುವ ಮಾರ್ಗಗಳನ್ನ ಎಸ್ಪಿ ಆರ್‌. ಚೇತನ್‌ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ.
ಹನುಮ ಜಯಂತಿ ಶಾಂತಿಯುತವಾಗಿ ಆಚರಿಸಲು ಅಗತ್ಯಕ್ರಮ‌ ಕೈಗೊಳ್ಳಲಾಗಿದೆ.
ಕಲ್ಕುಣಿಕೆ ರಂಗನಾಥ ಬಡಾವಣೆಯಿಂದ ಶೋಭಾಯಾತ್ರೆ ಆರಂಭವಾಗಲಿದೆ.
ಕಾನೂನು ಸುವ್ಯವಸ್ಥೆಗಾಗಿ 1700 ಪೊಲೀಸರು,
9 ಡಿಎಆರ್‌, 8 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ನಗರಸಭೆ ವತಿಯಿಂದ 70 ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ.
ಅನುಮತಿ ಪಡೆದ ವಾಹನಗಳಿಗೆ ಮಾತ್ರ ಮೆರವಣಿಗೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ.
ವಾಹನಗಳ ಮೇಲೆ ಹತ್ತುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.
ಡಿ.ಜೆ. ಬಳಕೆಗೆ ಅವಕಾಶವಿಲ್ಲ. ಸಂಜೆ 5ರವರೆಗೆ ಮಾತ್ರ ಮೆರವಣಿಗೆಗೆ ಅವಕಾಶ.
ಮೆರವಣಿಗೆ ಸಾಗುವ ಎಲ್ಲಾ ಮಾರ್ಗಗಳ ಪರಿಶೀಲನೆ ನಡೆದಿದೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 30 ಮಂದಿ ಆರೋಪಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅವರ ಚಲನವಲನದ ಮೇಲೆ ಒಬ್ಬರಿಗೆ ಒಬ್ಬ ಪೊಲೀಸರು ನಿಗಾವಹಿಸಲಾಗುತ್ತದೆ.
ನಗರ ಪ್ರವೇಶಿಸುವ 6 ಕಡೆ, ಜಿಲ್ಲೆಯ ಎರಡು ಕಡೆಯಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದೆ.
ಎಲ್ಲಾ ವಾಹನಗಳ ತಪಾಸಣೆ ನಡೆಯಲಿಧ.
ಏನೇ ದೂರುಗಳಿದ್ದರೂ ಸಹಾಯವಾಣಿ 112ಗೆ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ನಗರಸಭೆಯ ಅನುಮತಿಯೊಂದಿಗೆ ನಿಗದಿತ ಸ್ಥಳದಲ್ಲಿ ಮಾತ್ರ ಬಾವುಟ, ಫ್ಲೆಕ್ಸ್‌ ಅಳವಡಿಕೆಗೆ ಅವಕಾಶ ಕಲ್ಪಿಸಲಾಗಿದೆ…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *