ಹುಣಸೂರಿನಲ್ಲಿ ಇಂದು ಹನುಮ ಜಯಂತಿ…ಬಿಗಿ ಪೊಲೀಸ್ ಭದ್ರತೆ…

ಹುಣಸೂರಿನಲ್ಲಿ ಇಂದು ಹನುಮ ಜಯಂತಿ…ಬಿಗಿ ಪೊಲೀಸ್ ಭದ್ರತೆ…

  • Temples
  • December 7, 2022
  • No Comment
  • 227

ಹುಣಸೂರಿನಲ್ಲಿ ಇಂದು ಹನುಮ ಜಯಂತಿ…ಬಿಗಿ ಪೊಲೀಸ್ ಭದ್ರತೆ…

ಹುಣಸೂರು,ಡಿ7,Tv10 ಕನ್ನಡ
ಹುಣಸೂರಿನಲ್ಲಿ ಇಂದು ಹನುಮ ಜಯಂತಿ ಸಂಭ್ರಮ ಮನೆ ಮಾಡಿದೆ.ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿಪೊಲೀಸ್ ಭದ್ರತೆ ಒದಗಿಸಲಾಗಿದೆ.ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
ತಾಲೂಕಿನಾದ್ಯಂತ ಮೂರು ದಿನ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಇಂದು ಹುಣಸೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹನುಮ ಜಯಂತಿ ಶೋಭಾಯಾತ್ರೆಯ ಸಾಗಲಿರುವ ಮಾರ್ಗಗಳನ್ನ ಎಸ್ಪಿ ಆರ್‌. ಚೇತನ್‌ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ.
ಹನುಮ ಜಯಂತಿ ಶಾಂತಿಯುತವಾಗಿ ಆಚರಿಸಲು ಅಗತ್ಯಕ್ರಮ‌ ಕೈಗೊಳ್ಳಲಾಗಿದೆ.
ಕಲ್ಕುಣಿಕೆ ರಂಗನಾಥ ಬಡಾವಣೆಯಿಂದ ಶೋಭಾಯಾತ್ರೆ ಆರಂಭವಾಗಲಿದೆ.
ಕಾನೂನು ಸುವ್ಯವಸ್ಥೆಗಾಗಿ 1700 ಪೊಲೀಸರು,
9 ಡಿಎಆರ್‌, 8 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ.
ನಗರಸಭೆ ವತಿಯಿಂದ 70 ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ.
ಅನುಮತಿ ಪಡೆದ ವಾಹನಗಳಿಗೆ ಮಾತ್ರ ಮೆರವಣಿಗೆಯಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ.
ವಾಹನಗಳ ಮೇಲೆ ಹತ್ತುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ.
ಡಿ.ಜೆ. ಬಳಕೆಗೆ ಅವಕಾಶವಿಲ್ಲ. ಸಂಜೆ 5ರವರೆಗೆ ಮಾತ್ರ ಮೆರವಣಿಗೆಗೆ ಅವಕಾಶ.
ಮೆರವಣಿಗೆ ಸಾಗುವ ಎಲ್ಲಾ ಮಾರ್ಗಗಳ ಪರಿಶೀಲನೆ ನಡೆದಿದೆ.
ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 30 ಮಂದಿ ಆರೋಪಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅವರ ಚಲನವಲನದ ಮೇಲೆ ಒಬ್ಬರಿಗೆ ಒಬ್ಬ ಪೊಲೀಸರು ನಿಗಾವಹಿಸಲಾಗುತ್ತದೆ.
ನಗರ ಪ್ರವೇಶಿಸುವ 6 ಕಡೆ, ಜಿಲ್ಲೆಯ ಎರಡು ಕಡೆಯಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಲಾಗಿದೆ.
ಎಲ್ಲಾ ವಾಹನಗಳ ತಪಾಸಣೆ ನಡೆಯಲಿಧ.
ಏನೇ ದೂರುಗಳಿದ್ದರೂ ಸಹಾಯವಾಣಿ 112ಗೆ ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ನಗರಸಭೆಯ ಅನುಮತಿಯೊಂದಿಗೆ ನಿಗದಿತ ಸ್ಥಳದಲ್ಲಿ ಮಾತ್ರ ಬಾವುಟ, ಫ್ಲೆಕ್ಸ್‌ ಅಳವಡಿಕೆಗೆ ಅವಕಾಶ ಕಲ್ಪಿಸಲಾಗಿದೆ…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *