ಧರ್ಮ ಸಂಸ್ಕೃತಿ ಪರಂಪರೆ ಉಳಿವಿಗೆ ಹಿಂದುಗಳು ಒಗ್ಗಟ್ಟಾಗಬೇಕು…ಶಾಸಕ ಎಲ್ ನಾಗೇಂದ್ರ ಅಭಿಪ್ರಾಯ…

ಧರ್ಮ ಸಂಸ್ಕೃತಿ ಪರಂಪರೆ ಉಳಿವಿಗೆ ಹಿಂದುಗಳು ಒಗ್ಗಟ್ಟಾಗಬೇಕು…ಶಾಸಕ ಎಲ್ ನಾಗೇಂದ್ರ ಅಭಿಪ್ರಾಯ…

  • Politics
  • December 7, 2022
  • No Comment
  • 221

ಧರ್ಮ ಸಂಸ್ಕೃತಿ ಪರಂಪರೆ ಉಳಿವಿಗೆ ಹಿಂದುಗಳು ಒಗ್ಗಟ್ಟಾಗಬೇಕು…ಶಾಸಕ ಎಲ್ ನಾಗೇಂದ್ರ ಅಭಿಪ್ರಾಯ…

ಮೈಸೂರು,ಡಿ7,Tv10 ಕನ್ನಡ
ಧರ್ಮ,ಸಂಸ್ಕೃತಿ,ಪರಂಪರೆ ಉಳಿವಿಗೆ ಹಿಂದೂಗಳು ಒಗ್ಗಟ್ಟಾಗಬೇಕು,ಶತ ಶತಮಾನಗಳ ಇತಿಹಾಸ, ಪರಂಪರೆ, ಶ್ರೀಮಂತಿಕೆ ಹೊಂದಿರುವ ಜಗತ್ತಿನ ಶ್ರೇಷ್ಠ ಧರ್ಮ ನಮ್ಮ ಹಿಂದೂ ಧರ್ಮ ಎಂದು ಶಾಸಕ ಎಲ್ ನಾಗೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಯಾದವಗಿರಿಯಲ್ಲಿರುವ  600 ವರ್ಷದ ಪುರಾತನದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಉತ್ತರಾದಿ ಮಠ ವತಿಯಿಂದ ಏರ್ಪಡಿಸಲಾಗಿದ್ದ ಹನುಮಾನ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂತಹ ಶ್ರೇಷ್ಠ ಧರ್ಮ, ಸಂಸ್ಕೃತಿ, ಪರಂಪರೆ ಉಳಿವಿಗಾಗಿ ಹಿಂದುಗಳಾದ ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ಶಾಸಕರು ಕರೆ ನೀಡಿದರು.
ಜಗತ್ತಿನ ಶಾಂತಿ, ಅಹಿಂಸ ಪಠಿಸಿದ ದೇಶ, ಸಂಸ್ಕೃತಿ ನಮ್ಮದು ಗ್ರೀಕರು, ರೋಮನರಿಗೆ ಸರಿಸಮನಾದ ಪ್ರಾಚೀನತ ಹೊಂದಿದೆ ಹಿಂದೂ ಧರ್ಮ ಜಗತ್ತಿಗೆ ತನ್ನದೇ ಆದ ಕೊಡುಗೆ ನೀಡಿದೆ ಎಂದು ಅವರು ಹೇಳಿದರು
 
ಹನುಮ ಜಯಂತಿ ಅಂಗವಾಗಿ ಶ್ರೀ ಹನುಮದ್ ವ್ರತ ಪ್ರಯುಕ್ತ ಪವಮಾನ ಹೋಮ, ನವಗ್ರಹ ಹೋಮ,
ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ, ಮಧು ಅಭಿಷೇಕ, ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ವಿದ್ವಾನ್ ಶ ಅನಂತ ಕುಲಕರ್ಣಿ, ಡಾ. ಸಂಜೀವ್ ರಾವ್ ಗಿರಿಮಾಜಿ ಎಸ್, ನಗರಪಾಲಿಕ ಸದಸ್ಯರಾದ ಪ್ರಮೀಳಾ ಭರತ್, ಕಾಂಗ್ರೆಸ್ ಮುಖಂಡ ಎನ್. ಎಂ.ನವೀನ್ ಕುಮಾರ್, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್ ರವರಿಗೆ ಸನ್ಮಾನಿಸಲಾಯಿತು.
3500 ಸಾವಿರಕ್ಕೂ ಹೆಚ್ಚು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು
ನಂತರ ಪ್ರಖ್ಯಾತ ಗಾಯಕರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತರಾದ ಬಾಗಲಕೋಟೆಯ ವಿದ್ವಾನ್ ಅನಂತ ಕುಲಕರ್ಣಿ ವತಿಯಿಂದ ಗಾಣ ಲಹರಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಯಿತು
ಇದೇ ಸಂದರ್ಭದಲ್ಲಿ ಶ್ರೀ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪಂಡಿತ್ ಶ್ರೀ  ಅನಿರುದಾಚಾರ್ಯ ಪಾಂಡುರಂಗಿ, ಮಹಾಪೌರರಾದ ಶಿವಕುಮಾರ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ನ ಅಧ್ಯಕ್ಷ ಎಸ್ ಬಿ ವಾಸುದೇವ್ ಮೂರ್ತಿ, ಹರಿದಾಸ ಸಂಗೀತ ಸಾಹಿತ್ಯೋತ್ಸವ ಸಮಿತಿಯ ಕಾರ್ಯದರ್ಶಿ ರವಿಕುಮಾರ್ ಎಸ್, ಪ್ರಧಾನ ಅರ್ಚಕರಯ  ನಾ ಗಭೂಷಣ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ.

ಚಿರತೆ ದಾಳಿಗೆ ಮಾದಪ್ಪನ ಭಕ್ತ ಬಲಿ. ಹನೂರು Tv10 ಕನ್ನಡ21/01/2026 ಹನೂರು :ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾದ…
ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು…

ಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ನೀರುಪಾಲು… ಮಂಡ್ಯ,ಜ21,Tv10 ಕನ್ನಡಕುರಿ ತೊಳೆಯಲು ಕಟ್ಟೆಗೆ ಇಳಿದ ರೈತ ಕಾಲುಜಾರಿ ನೀರುಪಾಲಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಅಂಚೆಬೀರನಹಳ್ಳಿಯಲ್ಲಿ ನಡೆದಿದೆ.ಆನೆಗೋಳ ಗ್ರಾಮದ ರೈತ…
ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ…

ಮೈಸೂರಿನಲ್ಲಿ ನಿಮ್ಹಾನ್ಸ್ ಮಾದರಿ ಸಂಸ್ಥೆ ಫಿಕ್ಸ್…ಜಮೀನು ವಶಕ್ಕೆ…ಮೈಸೂರು ಮೆಡಕಲ್ ಕಾಲೇಜಿಗೆ ಹಸ್ತಾಂತರ… ಮೈಸೂರು,ಜ19,Tv10 ಕನ್ನಡ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಮಹತ್ತರ ಯೋಜನೆಯ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಗ್ರೀನ್…

Leave a Reply

Your email address will not be published. Required fields are marked *