12 ವರ್ಷದಿಂದ ಮನೆಯಲ್ಲಿದ್ದೇನೆ…ಈಗ ಜನರ ಜೊತೆ ಸೇರಬೇಕಿದೆ…ಜನಾರ್ಧನ ರೆಡ್ಡಿ ಇಂಗಿತ…

12 ವರ್ಷದಿಂದ ಮನೆಯಲ್ಲಿದ್ದೇನೆ…ಈಗ ಜನರ ಜೊತೆ ಸೇರಬೇಕಿದೆ…ಜನಾರ್ಧನ ರೆಡ್ಡಿ ಇಂಗಿತ…

12 ವರ್ಷದಿಂದ ಮನೆಯಲ್ಲಿದ್ದೇನೆ…ಈಗ ಜನರ ಜೊತೆ ಸೇರಬೇಕಿದೆ…ಜನಾರ್ಧನ ರೆಡ್ಡಿ ಇಂಗಿತ…

ಗದಗ್,ಡಿ7,Tv10 ಕನ್ನಡ
12 ವರ್ಷಗಳಿಂದ ಮನೆಯಲ್ಲಿದ್ದೆ ಇದೀಗ ಜನರ ಜೊತೆ ಸೇರಬೇಕು ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಜನಾರ್ಧನ ರೆಡ್ಡಿ ಗದಗ್ ನಲ್ಲಿ ತಮ್ಮ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ. ತಮ್ಮ ರಾಜಕೀಯ ಭವಿಷ್ಯವನ್ನ ಬಿಜೆಪಿ ನಾಯಕರ ಕೋರ್ಟ್ ನ ಮೇಲೆ ಜವಾಬ್ದಾರಿ ಹಾಕಿದ ಜನಾರ್ಧನ ರೆಡ್ಡಿ ನಾಯಕರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾರೆ.
ಭಾರತೀಯ ಜನತಾ ಪಕ್ಷದಿಂದ ರಾಜಕೀಯ ಜೀವನ ಆರಂಭವಾಗಿದೆ.
ಆಡ್ವಾನಿಯವರ ರಾಮ ರಥಯಾತ್ರೆ ಮೂಲಕ ಕೆಲಸ ಆರಂಭ ಮಾಡಿದ್ದೆವು.
ಏನಿದ್ರೂ ಭಾರತೀಯ ಜನತಾ ಪಕ್ಷದ ಮೇಲೆ ಅಭಿಮಾನ ಇರುತ್ತೆ.
ಪಕ್ಷದ ವರಿಷ್ಠರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡುತ್ತೇನೆ.
ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿದೆ.
ಬಳ್ಳಾರಿಯಿಂದ ಹೊರಗಿರಬೇಕಾದ ಪರಿಸ್ಥಿತಿ ಇದೆ. ಬೆಂಗಳೂರಲ್ಲಿ ಇರಲು ಇಷ್ಟ ಇಲ್ಲ.ಉತ್ತರ ಕರ್ನಾಟಕ.. ಬಳ್ಳಾರಿ.. ಬೀದರ್ ನಿಂದ ಬೆಳಗಾವಿ ವರೆಗೆ ಎಲ್ಲಾದ್ರೂ ಇರಬೇಕು.
ಮನಸ್ಸಿಗೆ, ಆರೋಗ್ಯಕ್ಕೆ ಈ ವಾತಾವರಣ ತೃಪ್ತಿ ತರುತ್ತದೆ‌.ನಮ್ಮ ಜನರ ನಡುವೆಯೇ ಇರಬೇಕು ಇನ್ನೋ ಕಾರಣಕ್ಕೆ ಗಂಗಾವತಿಯಲ್ಲಿ ಮನೆ ಮಾಡಿದ್ದೇನೆ ಎಂದರು.
ಹೊಸ ಪಕ್ಷದ ವಿಚಾರವಾಗಿ ಹೆಚ್ಚು ಮಾತಾಡಲ್ಲ ಈ ಬಗ್ಗೆ ಇನ್ನೂ ಸಮಯ ಇದೆ ಎಂದು ಜಾರಿಕೊಂಡರು.12 ವರ್ಷ ಮನೆಯಲ್ಲಿದ್ದೇನೆ.. ಈಗ ಜನರ ಜೊತೆ ಇರಬೇಕು.ಯಾವ ಕ್ಷೇತ್ರದಿಂದ ಚುನಾವಣೆ ಅನ್ನೋದನ್ನ ಬರುವ ದಿನಗಳಲ್ಲಿ ತಿಳಿಸುತ್ತೇನೆ‌.
ಬಿಜೆಪಿ ಬಗ್ಗೆ ಅಭಿಮಾನ ಇದೆ ಆದ್ರೆ ಹಿರಿಯರು, ನಾಯಕರು ಏನು ತೀರ್ಮಾನ ಮಾಡ್ತಾರೆ ಕಾದು ನೋಡುತ್ತಿದ್ದೇನೆ ಎಂದು ತಿಳಿಸಿದರು.

ಶ್ರೀರಾಮುಲು ಜೊತೆ ಭಿನ್ನಾಭಿಪ್ರಾಯ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಜನಾರ್ಧನ ರೆಡ್ಡಿ ಗದಗ್ ಗೆ ಬಂದು ಈಗ ರಾಮುಲು ಮನೆಯಲ್ಲೇ ರೆಡಿಯಾಗಿದ್ದೇನೆ.
ರಾಮುಲು ಮನೆ ಅಂದ್ರೆ ನಮ್ಮ ಮನೆ. ನಮ್ಮ ಮನೆ ಅಂದ್ರೆ ರಾಮುಲು ಮನೆ.
ಜಗತ್ತೇ ಬೇರೆಯಾದ್ರೆ. ನಾನು ಶ್ರೀರಾಮುಲು ನೇ ಬೇರೆ.ರಾಜಕೀಯಕ್ಕೂ ಮೀರಿ ನಮ್ಮ ಕುಟುಂಬ ಇದ್ದಂತೆ ಇದ್ದೇವೆ.ಈ ಕುರಿತಂತೆ ಮಾಧ್ಯಮದವರು ಅನಾವಶ್ಯಕವಾಗಿ ಸೃಷ್ಟಿಸುವುದು ಬೇಡ ಎಂದು ಮನವಿ ಮಾಡಿದರು…

Spread the love

Related post

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ ಕೈವಾಡವೇ…ಅಕ್ರಮದ ಹಿಂದಿರುವ ಕಾಣದ ಕೈಗಳು ಯಾವುದು…?

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ…

ಸ್ಥಗಿತಗೊಂಡಿರುವ ಮೈನಿಂಗ್ ನಲ್ಲಿ ಕೊಳ್ಳೆ…ಕೋಟ್ಯಾಂತರ ಮೌಲ್ಯದ ಸರ್ಕಾರಿ ಜಾಗಕ್ಕಿಲ್ಲ ರಕ್ಷಣೆ…ನಿವೇಶನಗಳಾಗಿ ಪರಿವರ್ತಿಸಿ ಮಾರಾಟ…ಬೆಲೆಬಾಳುವ ಖನಿಜಗಳು ಖದೀಮರ ಪಾಲು…ರಕ್ಷಣೆ ಮಾಡುವಂತೆ ದೂರು ಕೊಟ್ರೂ ಡೋಂಟ್ ಕೇರ್…ಕ್ರಮ ಕೈಗೊಳ್ಳಲು ಮೀನಾ ಮೇಷ…ಪ್ರಭಾವಿಗಳ…
ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್…

ಮದ್ದೂರಿನಲ್ಲಿ ರೌಡಿ ಶೀಟರ್ ಯಶ್ವಂತ್ ಹತ್ಯೆ ಪ್ರಕರಣ…ಆರೋಪಿಗಳು ಅರೆಸ್ಟ್…ಎಸ್ಪಿ ಶೋಭಾರಾಣಿ ಪ್ರಸ್ ಮೀಟ್… ಮಂಡ್ಯ,ಏ18,Tv10 ಕನ್ನಡ ಮದ್ದೂರಿನಲ್ಲಿ ರೌಡಿಶೀಟರ್ ಯಶ್ವಂತ್ ಕೊಲೆ ಪ್ರಕರಣ ಸಂಬಂಧಿಸಿದಂತೆ ಪೊಲೀಸರು ಹಂತಕರನ್ನ ಬಂಧಿಸುವಲ್ಲಿ…
ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ…

ಮಂಗಳಮುಖಿ ಕಿಡ್ನಾಪ್…ಲೈಂಗಿಕ ಕಿರುಕುಳ…ನಾಲ್ವರು ದುಷ್ಕರ್ಮಿಗಳಿಂದ ಕೃತ್ಯ…ಮೂವರು ಅಂದರ್…24 ಗಂಟೆಯಲ್ಲಿ ಮೇಟಗಳ್ಳಿ ಪೊಲೀಸರ ಯಶಸ್ವಿ ಕಾರ್ಯಾಚರಣೆ… ಮೈಸೂರು,ಏ18,Tv10 ಕನ್ನಡ ತಡರಾತ್ರಿಯಲ್ಲಿ ಒಂಟಿಯಾಗಿ ಬರುತ್ತಿದ್ದ ಮಂಗಳಮುಖಿಯನ್ನ ನಾಲ್ವರು ದುಷ್ಕರ್ಮಿಗಳು ಬಲವಂತವಾಗಿ ಆಟೋದಲ್ಲಿ…

Leave a Reply

Your email address will not be published. Required fields are marked *