12 ವರ್ಷದಿಂದ ಮನೆಯಲ್ಲಿದ್ದೇನೆ…ಈಗ ಜನರ ಜೊತೆ ಸೇರಬೇಕಿದೆ…ಜನಾರ್ಧನ ರೆಡ್ಡಿ ಇಂಗಿತ…

12 ವರ್ಷದಿಂದ ಮನೆಯಲ್ಲಿದ್ದೇನೆ…ಈಗ ಜನರ ಜೊತೆ ಸೇರಬೇಕಿದೆ…ಜನಾರ್ಧನ ರೆಡ್ಡಿ ಇಂಗಿತ…

12 ವರ್ಷದಿಂದ ಮನೆಯಲ್ಲಿದ್ದೇನೆ…ಈಗ ಜನರ ಜೊತೆ ಸೇರಬೇಕಿದೆ…ಜನಾರ್ಧನ ರೆಡ್ಡಿ ಇಂಗಿತ…

ಗದಗ್,ಡಿ7,Tv10 ಕನ್ನಡ
12 ವರ್ಷಗಳಿಂದ ಮನೆಯಲ್ಲಿದ್ದೆ ಇದೀಗ ಜನರ ಜೊತೆ ಸೇರಬೇಕು ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಜನಾರ್ಧನ ರೆಡ್ಡಿ ಗದಗ್ ನಲ್ಲಿ ತಮ್ಮ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ. ತಮ್ಮ ರಾಜಕೀಯ ಭವಿಷ್ಯವನ್ನ ಬಿಜೆಪಿ ನಾಯಕರ ಕೋರ್ಟ್ ನ ಮೇಲೆ ಜವಾಬ್ದಾರಿ ಹಾಕಿದ ಜನಾರ್ಧನ ರೆಡ್ಡಿ ನಾಯಕರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದಾರೆ.
ಭಾರತೀಯ ಜನತಾ ಪಕ್ಷದಿಂದ ರಾಜಕೀಯ ಜೀವನ ಆರಂಭವಾಗಿದೆ.
ಆಡ್ವಾನಿಯವರ ರಾಮ ರಥಯಾತ್ರೆ ಮೂಲಕ ಕೆಲಸ ಆರಂಭ ಮಾಡಿದ್ದೆವು.
ಏನಿದ್ರೂ ಭಾರತೀಯ ಜನತಾ ಪಕ್ಷದ ಮೇಲೆ ಅಭಿಮಾನ ಇರುತ್ತೆ.
ಪಕ್ಷದ ವರಿಷ್ಠರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡುತ್ತೇನೆ.
ಬಳ್ಳಾರಿ ಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರ್ಬಂಧ ಹೇರಿದೆ.
ಬಳ್ಳಾರಿಯಿಂದ ಹೊರಗಿರಬೇಕಾದ ಪರಿಸ್ಥಿತಿ ಇದೆ. ಬೆಂಗಳೂರಲ್ಲಿ ಇರಲು ಇಷ್ಟ ಇಲ್ಲ.ಉತ್ತರ ಕರ್ನಾಟಕ.. ಬಳ್ಳಾರಿ.. ಬೀದರ್ ನಿಂದ ಬೆಳಗಾವಿ ವರೆಗೆ ಎಲ್ಲಾದ್ರೂ ಇರಬೇಕು.
ಮನಸ್ಸಿಗೆ, ಆರೋಗ್ಯಕ್ಕೆ ಈ ವಾತಾವರಣ ತೃಪ್ತಿ ತರುತ್ತದೆ‌.ನಮ್ಮ ಜನರ ನಡುವೆಯೇ ಇರಬೇಕು ಇನ್ನೋ ಕಾರಣಕ್ಕೆ ಗಂಗಾವತಿಯಲ್ಲಿ ಮನೆ ಮಾಡಿದ್ದೇನೆ ಎಂದರು.
ಹೊಸ ಪಕ್ಷದ ವಿಚಾರವಾಗಿ ಹೆಚ್ಚು ಮಾತಾಡಲ್ಲ ಈ ಬಗ್ಗೆ ಇನ್ನೂ ಸಮಯ ಇದೆ ಎಂದು ಜಾರಿಕೊಂಡರು.12 ವರ್ಷ ಮನೆಯಲ್ಲಿದ್ದೇನೆ.. ಈಗ ಜನರ ಜೊತೆ ಇರಬೇಕು.ಯಾವ ಕ್ಷೇತ್ರದಿಂದ ಚುನಾವಣೆ ಅನ್ನೋದನ್ನ ಬರುವ ದಿನಗಳಲ್ಲಿ ತಿಳಿಸುತ್ತೇನೆ‌.
ಬಿಜೆಪಿ ಬಗ್ಗೆ ಅಭಿಮಾನ ಇದೆ ಆದ್ರೆ ಹಿರಿಯರು, ನಾಯಕರು ಏನು ತೀರ್ಮಾನ ಮಾಡ್ತಾರೆ ಕಾದು ನೋಡುತ್ತಿದ್ದೇನೆ ಎಂದು ತಿಳಿಸಿದರು.

ಶ್ರೀರಾಮುಲು ಜೊತೆ ಭಿನ್ನಾಭಿಪ್ರಾಯ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಜನಾರ್ಧನ ರೆಡ್ಡಿ ಗದಗ್ ಗೆ ಬಂದು ಈಗ ರಾಮುಲು ಮನೆಯಲ್ಲೇ ರೆಡಿಯಾಗಿದ್ದೇನೆ.
ರಾಮುಲು ಮನೆ ಅಂದ್ರೆ ನಮ್ಮ ಮನೆ. ನಮ್ಮ ಮನೆ ಅಂದ್ರೆ ರಾಮುಲು ಮನೆ.
ಜಗತ್ತೇ ಬೇರೆಯಾದ್ರೆ. ನಾನು ಶ್ರೀರಾಮುಲು ನೇ ಬೇರೆ.ರಾಜಕೀಯಕ್ಕೂ ಮೀರಿ ನಮ್ಮ ಕುಟುಂಬ ಇದ್ದಂತೆ ಇದ್ದೇವೆ.ಈ ಕುರಿತಂತೆ ಮಾಧ್ಯಮದವರು ಅನಾವಶ್ಯಕವಾಗಿ ಸೃಷ್ಟಿಸುವುದು ಬೇಡ ಎಂದು ಮನವಿ ಮಾಡಿದರು…

Spread the love

Related post

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ…

ಟಿ.ನರಸೀಪುರ ವಿಧಾನಸಭಾ ಕ್ಷೇತ್ರ ಮತದಾರರ ನೊಂದಣಾಧಿಕಾರಿ ಹುದ್ದೆಗೆ ಕೆ.ಜಾನ್ಸನ್ ನೇಮಕ…ಎಂಡಿಎ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಹೆಚ್ಚಿನ ಜವಾಬ್ದಾರಿ… ಮೈಸೂರು,ಜು13,Tv10 ಕನ್ನಡ ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್…
ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು…

ಗಾನ ಕೋಗಿಲೆ ಎಸ್. ಜಾನಕಿ ಸ್ಮರಣಾರ್ಥ… KSOUನಲ್ಲಿ ಸಂಗೀತ ಅಧ್ಯಯನ ಮತ್ತು ಡಿಜಿಟಲ್ ಆರ್ಕೈವ್ ಕೇಂದ್ರ ಸ್ಥಾಪನೆಗೆ ಚಿಂತನೆ… ಮೈಸೂರು,ಜುಲೈ11,Tv10 ಕನ್ನಡ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ…
ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ…

ವ್ಯಕ್ತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ…ಕೆಆರ್ ಎಸ್ ನಲ್ಲಿ ಘಟನೆ… ಮಂಡ್ಯ,ಆ7,Tv10 ಕನ್ನಡ ಸಕ್ಕರೆನಾಡು ಮಂಡ್ಯದಲ್ಲಿ ಮತ್ತೊಂದು ಕೊಲೆಯಾಗಿದೆ.ಕೆ ಆರ್ ಎಸ್ ನಲ್ಲಿ ಮಲಗಿದ್ದ ವ್ಯಕ್ತಿ ತಲೆ…

Leave a Reply

Your email address will not be published. Required fields are marked *