ಕಬ್ಬಿನ ದರ 50 ರೂ ಹೆಚ್ಚಳಕ್ಕೆ ರೈತರ ಅಸಮಾಧಾನ…ಸರ್ಕಾದ ಆದೇಶ ಸುಟ್ಟು ಆಕ್ರೋಷ…

ಕಬ್ಬಿನ ದರ 50 ರೂ ಹೆಚ್ಚಳಕ್ಕೆ ರೈತರ ಅಸಮಾಧಾನ…ಸರ್ಕಾದ ಆದೇಶ ಸುಟ್ಟು ಆಕ್ರೋಷ…

ಕಬ್ಬಿನ ದರ 50 ರೂ ಹೆಚ್ಚಳಕ್ಕೆ ರೈತರ ಅಸಮಾಧಾನ…ಸರ್ಕಾದ ಆದೇಶ ಸುಟ್ಟು ಆಕ್ರೋಷ…

ಬೆಂಗಳೂರು,ಡಿ8,Tv10 ಕನ್ನಡ
ಕಬ್ಬಿಗೆ ಹೆಚ್ಚುವರಿಯಾಗಿ 50 ರೂ ನಿಗದಿ ಪಡಿಸಿರುವ ಸರ್ಕಾರದ ಆದೇಶ ಸುಟ್ಟು ರೈತರು ಇಂದು ಆಕ್ರೋಷ ವ್ಯಕ್ತಪಡಿಸಿದರು.ಬೆಂಗಳೂರಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿ 17ನೇ ದಿನಕ್ಕೆ ತಲುಪಿದೆ.ಇಂದು ರೈತರು ತಲೆ ಮೇಲೆ ಕಬ್ಬಿನ ಪಿಂಡಿ ಹೂತ್ತು ಪ್ರತಿಭಟಿಸಿದರು.
ಕೇಂದ್ರ ಸರ್ಕಾರ ನಿಗದಿ ಮಾಡಿರುವ ಎಫ್ ಆರ್ ಪಿ ದರಕೆ ಹೆಚ್ಚುವರಿಯಾಗಿ ಟನ್ಗೆ 50 ರೂ ನೀಡಲು ಹೊರಡಿಸಿರುವ ಆದೇಶ ಧಿಕ್ಕರಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
ನಂತರ ಮಾತನಾಡಿದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಸಕ್ಕರೆ ಕಾರ್ಖಾನೆ ಮಾಲೀಕರಿಂದ ಹೆಚ್ಚುವರಿ ಹಣ ಕೊಡಿಸಲು ಸರ್ಕಾರಕ್ಕೆ ಧೈರ್ಯವಿಲ್ಲದಿದ್ದರೆ ಕಬ್ಬು ಬೆಳೆಗಾರರ ವಹಿವಾಟಿನಿಂದ ಸರ್ಕಾರಕ್ಕೆ ಬರುವ ತೆರಿಗೆ 5,000 ಕೋಟಿ ಹಣದಿಂದ
ಹೆಚ್ಚುವರಿ ಹಣ ನೀಡಲಿ, ಹಿಂದೆ ಬೆಳಗಾವಿ ಅಧಿವೇಶನದ ವೇಳೆ ರೈತನೊಬ್ಬ ಪ್ರಾಣ ಕಳೆದುಕೊಂಡಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಟನ್ ಗೆ 160 ಹೆಚ್ಚುವರಿ ಹಣ ಘೋಷಣೆ ಮಾಡಿ 1600 ಕೋಟಿ ರೈತರಿಗೆ ನೀಡಿದ್ದಾರೆ ಅದರಂತೆ ಪ್ರಸಕ್ತ ಸರ್ಕಾರವು ನೀಡಲಿ
ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು
ಕಬ್ಬಿನ ಕಟಾವು ಸಾಗಾಣಿಕೆ ವೆಚ್ಚವನ್ನು ಹಿಂದಿನ ವರ್ಷಕ್ಕಿಂತ ಈ ಬಾರಿ ಹೆಚ್ಚುವರಿಯಾಗಿ ಪ್ರತಿ ಟನ್ ಗೆ 200 ರಿಂದ 300 ರೈತರ ಹಣದಲ್ಲಿ ಮುರಿದು ಕೊಳ್ಳುತ್ತಿದ್ದಾರೆ, ಇದನ್ನು ಕಡಿಮೆ ಮಾಡಲು ಕ್ರಮ ಕೈಗೊಂಡು ರೈತರ ರಕ್ಷಣೆ ಮಾಡಲಿ ಎಂದು ಆಗ್ರಹಿಸಿದರು.
ಇಂದಿನ ಪ್ರತಿಭಟನೆಯಲ್ಲಿ ಉಳುವಪ್ಪ ಬಳಗೇರ, ರಮೇಶ್ ಹೂಗಾರ್, ಜಗದೀಶ್ ಪಾಟೀಲ್, ಸುರೇಶ್ ಮಾ ಪಾಟೀಲ್,
ಹತ್ತಳ್ಳಿ ದೇವರಾಜ್,
ಬರಡನ್ ಪುರ ನಾಗರಾಜ್,
ಶರಣು ಬಿಲ್ಲದ್, ಮುಂತಾದವರಿದ್ದರು…

Spread the love

Related post

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ,ಮಹಿಳೆ ಸೇರಿದಂತೆ 7 ಮಂದಿ ಬಂಧನ…

ಜಾನುವಾರು ಸಂರಕ್ಷಣೆ ಹೆಸರಲ್ಲಿ ರೋಲ್ ಕಾಲ್… ಹಿಂದೂ ರಾಷ್ಟ್ರ ರಕ್ಷಣಾ ಪಡೆ…

ಹುಣಸೂರು,ಜೂ26,Tv10 ಕನ್ನಡ ಜಾನುವಾರುಗಳ ರಕ್ಷಣೆ ನೆಪದಲ್ಲಿ ಹಣ ವಸೂಲಿಗೆ ಇಳಿದ ಹಿಂದೂ ರಾಷ್ಟ್ರ ರಕ್ಷಣಾ ಪಡೆ ರಾಷ್ಟ್ರೀಯ ಅಧ್ಯಕ್ಷ ರಾಮಕೃಷ್ಣ,ಬೆಂಗಳೂರು ಮೂಲದ ಮಹಿಳೆ ಸೇರಿದಂತೆ 7 ಮಂದಿಯನ್ನಹುಣಸೂರು ಪೊಲೀಸರು…
ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಹುಲಿ ಹಾಗೂ ಮರಿಗಳ ಸಾವು ಪ್ರಕರಣ…ಅರಣ್ಯ ಸಚಿವ ಕಳವಳ…

ಕೊಳ್ಳೇಗಾಲ,ಜೂ26,Tv10 ಕನ್ನಡ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ…
ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025 ಕಿರೀಟ…

ಪೀಡಿಯಾಟ್ರಿಕ್ ನ್ಯೂರೋಲಾಜಿಸ್ಟ್ ಡಾ. ಅನುಷಾ ರಾಜ್ ಗೆ ಮಿಸ್. ಮೆಡಿಕ್ವೀನ್ 2025…

ಮೈಸೂರು,ಜೂ26,Tv10 ಕನ್ನಡ ಮೈಸೂರಿನ ಪೀಡಿಯಾಟ್ರಿಕ್ ನ್ಯೂರಾಲಜಿಸ್ಟ್ ಡಾ.ಅನೂಷಾ ರಾಜ್ ರವರು ಮಿಸ್ ಮೆಡಿಕ್ವೀನ್ 2025 ಸ್ಪರ್ಧೆಯಲ್ಲಿ ವಿಜಯಿಯಾಗಿ ಹೊರಹೊಮ್ಮಿದ್ದಾರೆ. ಜೂನ್ 22 ರಂದು ಮಹಾರಾಷ್ಟ್ರದ ಪುಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ…

Leave a Reply

Your email address will not be published. Required fields are marked *