ಕೆ.ಎಸ್.ಆರ್.ಟಿ.ಸಿ.ಅಧಿಕಾರಿಗೆ ಮಾರಕಾಸ್ತ್ರ ತೋರಿಸಿ ಮಹಿಳೆಯರು ಆವಾಜ್…ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು….

ಕೆ.ಎಸ್.ಆರ್.ಟಿ.ಸಿ.ಅಧಿಕಾರಿಗೆ ಮಾರಕಾಸ್ತ್ರ ತೋರಿಸಿ ಮಹಿಳೆಯರು ಆವಾಜ್…ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು….

ಕೆ.ಎಸ್.ಆರ್.ಟಿ.ಸಿ.ಅಧಿಕಾರಿಗೆ ಮಾರಕಾಸ್ತ್ರ ತೋರಿಸಿ ಮಹಿಳೆಯರು ಆವಾಜ್…ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…

ಮೈಸೂರು,ಡಿ12,Tv10 ಕನ್ನಡ
ನ್ಯಾಯಾಲಯದ ಆದೇಶದಂತೆ ಕ್ರಮ ಕೈಗೊಳ್ಳಲು ಮುಂದಾದ ಸಾರಿಗೆ ಅಧಿಕಾರಿಗೆ ಮೂವರು ಮಹಿಳೆಯರು ಮಾರಕಾಸ್ತ್ರ ಪ್ರದರ್ಶಿಸಿ ಧಂಕಿ ಹಾಕಿದ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಹಿಳೆ ಹಾಗೂ ಆಕೆಯ ಪತಿ ಮೇಲೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೆ.ಎಸ್.ಅರ್.ಟಿ.ಸಿ.ವಿಭಾಗೀಯ ಅಧಿಕಾರಿ ಮರಿಗೌಡ ಎಂಬುವರು ಪ್ರಕರಣ ದಾಖಲಿಸಿದ್ದಾರೆ.ಷಫಿ ಹಾಗೂ ಸೈಯದ್ ಮುನಿಬುನ್ನೀಸಾ ಎಂಬುವರ ಮೇಲೆ ಪ್ರಕರಣ ದಾಖಲಾಗಿದ್ದು ಆರೋಪಿಗಳು ಪರಾರಿಯಾಗಿದ್ದಾರೆ.

ಸಾತಗಳ್ಳಿ ಬಸ್ ನಿಲ್ದಾಣಕ್ಕೆ ಸೇರಿದ್ದ ವಾಣಿಜ್ಯಮಳಿಗೆಯನ್ನ ಷಫಿ ಎಂಬುವರಿಗೆ 12 ವರ್ಷಗಳ ಅವಧಿಗೆ ಲೀಸ್ ನೀಡಲಾಗಿತ್ತು.ಕಾಲಕಾಲಕ್ಕೆ ಪಾವತಿಸಬೇಕಾದ ವಿದ್ಯುತ್,ಜಿಎಸ್ ಟಿ ಹಾಗೂ ಪರವಾನಗಿ ಶುಲ್ಕ ಪಾವತಿಸದೆ ಷಫಿ ನಿಯಮಗಳನ್ನ ಉಲ್ಲಂಘಿಸಿದ್ದ.ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗಿ ಮಧ್ಯಂತರ ತಡೆ ಪಡೆದಿದ್ದ.ನಂತರ ಘನ ನ್ಯಾಯಾಲಯ ಮಧ್ಯಂತರ ಆದೇಶ ರದ್ದುಪಡಿಸಿತ್ತು.ಒಟ್ಟು 1,89,18,712/- ರೂ ಪಾವತಿಸಬೇಕಿತ್ತು.ನ್ಯಾಯಾಲಯದ ಆದೇಶದಂತೆ ಸಾರಿಗೆ ಅಧಿಕಾರಿಯಾದ ಮರಿಗೌಡ ಹಾಗೂ ಇತರರು ಕ್ರಮ ಕೈಗೊಳ್ಳಲು ಡಿ.10 ರಂದು ಸ್ಥಳಕ್ಕೆ ಭೇಟಿ ನೀಡಿದಾಗ ಷಫಿ ಪತ್ನಿ ಸೈಯದ್ ಮುನಿಬುನ್ನೀಸಾ ಹಾಗೂ ಇನ್ನಿಬ್ಬರು ಮಹಿಳೆಯರು ಏಕಾ ಏಕಿ ಅವ್ಯಾಚ ಶಬ್ದಗಳಿಂದ ನಿಂದಿಸುತ್ತಾ ಮಾರಕಾಸ್ತ್ರಗಳನ್ನ ಪ್ರದರ್ಶಿಸಿ ಆವಾಜ್ ಹಾಕಿದ್ದಾರೆ.ಈ ಸಂಭಂಧ ಮರಿಗೌಡ ರವರು ಉದಯಗಿರಿ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ..

Spread the love

Related post

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…
ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ

ಚಿಕ್ಕಾಟಿ ಗ್ರಾಮದಲ್ಲಿ ಮಹಿಳೆಯರಿಗೆ ಮುಟ್ಟು ವೃತು ಚಕ್ರ ಜಾಗೃತಿ ಚಾಮರಾಜನಗರ ಜಿಲ್ಲೆಯ ಚಿಕ್ಕಾಟಿ ಗ್ರಾಮದಲ್ಲಿ ಗ್ರಾಮ ಪಂಚಾಯತ್, ಸಂಜೀವಿನಿ ಇಲಾಖೆ ಹಾಗೂ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಹಿಳೆಯರ ಆರೋಗ್ಯ…

Leave a Reply

Your email address will not be published. Required fields are marked *