ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಡ್ರಿಲ್…ಚುನಾವಣೆ ಹಿನ್ನಲೆ ಖಡಕ್ ವಾರ್ನಿಂಗ್…

ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಡ್ರಿಲ್…ಚುನಾವಣೆ ಹಿನ್ನಲೆ ಖಡಕ್ ವಾರ್ನಿಂಗ್…

ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಡ್ರಿಲ್…ಚುನಾವಣೆ ಹಿನ್ನಲೆ ಖಡಕ್ ವಾರ್ನಿಂಗ್…

ಮೈಸೂರು,ಡಿ13,Tv10 ಕನ್ನಡ
ಚುನಾವಣೆ ಹಿನ್ನಲೆ ಮೈಸೂರು ಖಾಕಿ ಪಡೆ ಅಲರ್ಟ್ ಆಗುತ್ತಿದೆ.ಸಮಾಜಘಾತುಕ ಶಕ್ತಿಗಳನ್ನ ಸೆದೆಬಡಿಯಲು ಮುಂದಾಗಿದೆ.ಶಾಂತಿ ಕದಡುವ ಯತ್ನ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ.ಬೆಳ್ಳಂಬೆಳಗ್ಗೆ ಮೈಸೂರಿನ ರೌಡಿ ಶೀಟರ್ ಗಳಿಗೆ ಡ್ರಿಲ್ ಮಾಡಿಸಿದ್ದಾರೆ.ಸುಮಾರು 50 ಕ್ಕೂ ಹೆಚ್ಚು ರೌಡಿ ಶೀಟರ್ ಗಳನ್ನ ಹೆಬ್ಬಾಳ್ ಪೊಲೀಸ್ ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಾರೆ.ಚುನಾವಣೆ ಸಮಯದಲ್ಲಿ ಅಹಿತಕರ ಘಟನೆಗೆ ಆಸ್ಪದ ನೀಡಿದ್ರೆ ಹುಷಾರ್ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಇದೇ ವೇಳೆ ನಗರದ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಮಾರಕಾಸ್ತ್ರಗಳಮ್ನ ಸಂಗ್ರಹಿಸದಂತೆ ಎಚ್ಚರಿಕೆ ನೀಡಿದ್ದಾರೆ.ಸನ್ನಡತೆಯಿಂದ ನಡೆದುಕೊಳ್ಳುವಂತೆ ಹಲವು ರೌಡಿಗಳಿಂದ ಬಾಂಡ್ ಬರೆಸಿಕೊಂಡಿದ್ದಾರೆ.ಹಾಗಂದು ವೇಳೆ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ್ರೆ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್,ಕಾನೂನು ಮತ್ರು ಸುವ್ಯವಸ್ಥೆ ವಿಭಾಗದ ಡಿಸಿಪಿ ಪ್ರದೀಪ್ ಘುಂಟಿ,
ಎಸಿಪಿಗಳಾದ ಶಿವಕುಮಾರ್,ಅಶ್ವತ್ಥ್ ನಾರಾಯಣ್,
ಶಶಿಧರ್,ಗಂಗಾಧರ ಸ್ವಾಮಿ ನೇತೃತ್ವದಲ್ಲಿ ರೌಡಿಗಳ ಪೆರೇಡ್ ನಡೆದಿದೆ. ಮೈಸೂರು ನಗರ ಎಲ್ಲಾ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಗಳು ಈ ವೇಳೆ ಹಾಜರಿದ್ದರು…

Spread the love

Related post

ನಗರಾಭಿವೃದ್ಧಿ ಸಚಿವರ ಆಪ್ತ ಕಾರ್ಯದರ್ಶಿಯಾಗಿ ರಕ್ಷಿತ್ ಕೆ.ಆರ್ ನೇಮಕ

ನಗರಾಭಿವೃದ್ಧಿ ಸಚಿವರ ಆಪ್ತ ಕಾರ್ಯದರ್ಶಿಯಾಗಿ ರಕ್ಷಿತ್ ಕೆ.ಆರ್ ನೇಮಕ

ನಗರಾಭಿವೃದ್ಧಿ ಸಚಿವರ ಆಪ್ತ ಕಾರ್ಯದರ್ಶಿಯಾಗಿ ರಕ್ಷಿತ್ ಕೆ.ಆರ್ ನೇಮಕ ಬೆಂಗಳೂರು, ಜೂನ್ 9: ಕರ್ನಾಟಕ ಸರ್ಕಾರವು ಆಡಳಿತಾತ್ಮಕ ಮಹತ್ವದ ಆದೇಶ ಹೊರಡಿಸಿ, ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA)ದಲ್ಲಿ ವಿಶೇಷ…
ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…?

ಸಿಬ್ಬಂದಿಗಳಿಲ್ಲದೆ ಬಣಗುಡುತ್ತಿರುವ ಹಾಡ್ಯ ಗ್ರಾ.ಪಂ…ಶಾಪಗ್ರಸ್ತ ಕಚೇರಿಯೇ…? ನಂಜನಗೂಡು,ಜೂ7,Tv10 ಕನ್ನಡ ಸಾರ್ವಜನಿಕರಿಗೆ ಅನುಕೂಲವಾಗಿ ಪರಿಣಮಿಸಬೇಕಿದ್ದ ಗ್ರಾಮ ಪಂಚಾಯ್ತಿ ಕಾರ್ಯಾಲಯ ಸಿಬ್ಬಂದಿಗಳಿಲ್ಲದೆ ಬಣಗುಡುತ್ತಾ ಹಿಡಿಶಾಪಕ್ಕೆ ತುತ್ತಾಗಿದೆ.ಕೆಲಸ ಕಾರ್ಯಗಳಿಗೆ ಬರುವ ಜನ ಖಾಲಿ…
ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು…

ಶಾಲಾ ದಾಖಲಾತಿ ತಿದ್ದಿದ ಆರೋಪ…ಮುಖ್ಯ ಶಿಕ್ಷಕ ಅಮಾನತು… ಎಚ್.ಡಿ.ಕೋಟೆ,ಜೂ4,Tv10 ಕನ್ನಡ ಸರ್ಕಾರಿ ಶಾಲಾ ದಾಖಲಾತಿಯಲ್ಲಿ ಬೋವಿ ಎಂಬುದನ್ನು ಬೋಯಿ ಎಂದು ತಿದ್ದಿದ ಆರೋಪದ ಹಿನ್ನಲೆ ಶಾಲೆ ಮುಖ್ಯಶಿಕ್ಷಕ ಅಮಾನತುಪಡಿಸಲಾಗಿದೆ.ಹೆಚ್.ಡಿ.ಕೋಟೆ…

Leave a Reply

Your email address will not be published. Required fields are marked *