ಸಾರಿಗೆ ಅಧಿಕಾರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ಅಂದರ್…ಉದಯಗಿರಿ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಸಾರಿಗೆ ಅಧಿಕಾರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ಅಂದರ್…ಉದಯಗಿರಿ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಸಾರಿಗೆ ಅಧಿಕಾರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ಅಂದರ್…ಉದಯಗಿರಿ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಡಿ16,Tv10 ಕನ್ನಡ
ಕರ್ತವ್ಯ ನಿರ್ವಹಿಸಲು ಬಂದ ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗೆ ಮೊಚ್ಚು ತೋರಿಸಿ ಕೊಲೆ ಬೆದರಿಕೆ ಒಡ್ಡಿದ್ದ ಮಹಿಳೆ ಹಾಗೂ ಆಕೆಯ ಪತಿಯನ್ನ ಬಂಧಿಸುವಲ್ಲಿ ಉದಯಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬನ್ನಿಮಂಟಪದ ನಿವಾಸಿಗಳಾದ ಶಫೀಕ್ ಅಹಮದ್ ಹಾಗೂ ಪತ್ನಿ ಸೈಯದ್ ಮುನೀಬುನ್ನೀಸಾ ಬಂಧಿತ ಆರೋಪಿಗಳು.ಬಂಧಿತರಿಂದ ಕಾರು ಹಾಗೂ ಮೊಚ್ಚನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಡಿಸೆಂಬರ್ 12 ರಂದು ಸಾರಿಗೆ ಅಧಿಕಾರಿ ಮರಿಗೌಡ ರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ತಲೆ ಮರೆಸಿಕೊಂಡಿದ್ದರು.ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು.ಘಟನೆ ನಡೆದ ನಾಲ್ಕು ದಿನಗಳ ನಂತರ ಆರೋಪಿಗಳು ಸೆರೆಯಾಗಿದ್ದಾರೆ.

ಉದಯಗಿರಿಯಲ್ಲಿರು ಸಾತಗಳ್ಳಿ ಬಸ್ ಸ್ಟ್ಯಾಂಡ್ ಗೆ ಸೇರಿದ ವಾಣಿಜ್ಯ ಸಂಕೀರ್ಣವನ್ನ ಷಫೀಕ್ ಅಹಮದ್ ಗೆ 12 ವರ್ಷಗಳ ಅವಧಿಗೆ ಬಾಡಿಗೆಗೆ ನೀಡಲಾಗಿತ್ತು.ನಿಗದಿತ ಸಮಯಕ್ಕೆ ಬಾಡಿಗೆ ಪಾವತಿಸದೆ ನ್ಯಾಯಾಲಯದ ಮೊರೆ ಹೋಗಿದ್ದ ಶಫೀಕ್ ಮಧ್ಯಂತರ ತಡೆಯಾಜ್ಞೆ ಪಡೆದಿದ್ದ.ನಂತರದ ದಿನಗಳಲ್ಲಿ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆಯನ್ನ ರದ್ದುಪಡಿಸಿತ್ತು.ಈ ಹಿನ್ನಲೆ ವಾಣಿಜ್ಯ ಸಂಕೀರ್ಣವನ್ನ ವಶಕ್ಕೆ ಪಡೆಯಲು ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ಸಂಚಲನಾಧಿಕಾರಿ ಮರಿಗೌಡ ರವರ ಇತರ ಅಧಿಕಾರಿಗಳ ಜೊತೆ ತೆರಳಿದ್ದ ವೇಳೆ ಇಬ್ಬರು ಮಹಿಳೆಯರ ಜೊತೆ ಬಂದ ಸೈಯದ್ ಮುನಿಬುನ್ನೀಸಾ ಮೊಚ್ಚು ತೋರಿಸಿ ಧಂಕಿ ಹಾಕಿದ್ದರು.ಮರ್ಡರ್ ಮಾಡಿ ಜೈಲಿಗೆ ಹೋಗುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದರು.ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು.ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ರವರು ಪ್ರಕರಣವನ್ನ ಭೀರವಾಗಿ ಪರಿಗಣಿಸಿದ್ದರು.ಕಾನೂನು ಸುವ್ಯವಸ್ಥೆಯ ಡಿಸಿಪಿ ಪ್ರದೀಪ್ ಘುಂಟಿ ಮಾರ್ಗದರ್ಶನದಲ್ಲಿ,ದೇವರಾಜ ಉಪವಿಭಾಹದ ಎಸಿಪಿ ಶಶಿಧರ್ ಉಸ್ತುವಾರಿಯಲ್ಲಿ ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ.ಕೆ.ರಾಜು,ಎಸ್ಸೈಗಳಾದ ಸುನಿಲ್,ರಾಜು,ರೂಪೇಶ್ ಸಿಬ್ಬಂದಿಗಳಾದ ಸಿದ್ದೀಖ್ ಅಹಮದ್,ನಾಗೇಂದ್ರಮೂರ್ತಿ,ವಿನೋದ್ ರಾಥೋಡ್,ಮಲ್ಲಿಕಾರ್ಜುನ,ನಾಜಿಯಾಬಾನು,ಸಂತೋಷ್,ಸಮೀರ್,ಶಿವರಾಜಪ್ಪ,ರವಿಕುಮಾರ್ ಹಾಗೂ ಕುಮಾರ್ ರವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.ಇಡೀ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಸೆದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ…

ಗುಡ್ ಲಕ್ ಇಂಡಿಯಾ…ಬ್ಲಾಕ್ ಕ್ಯಾಪ್ಸ್ ಗೆ ಮಣಿಸಿ ಗೆದ್ದು ಬರಲಿ ಬ್ಲೂ ಬಾಯ್ಸ್…ಅಭಿಮಾನಿಗಳ ಮುಖದ ಮೇಲೆ ರಾರಾಜಿಸಿದ ತ್ರಿವಣ ಧ್ವಜ…ಮೈಸೂರಿನಲ್ಲಿ ಹರಿದುಬಂದ ವಿಶಸ್ ಮಹಾಪೂರ… ಮೈಸೂರು,ಮಾ8,Tv10 ಕನ್ನಡ ವಿಶ್ವಕಪ್…
ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ…

ನದಿಪಾತ್ರದ ಮರಗಳ ಮಾರಣ ಹೋಮ…ಎಸ್ಕೇಪ್ ಆದ ಖದೀಮರು…ಸಚಿವ ಹೆಚ್.ಸಿ.ಮಹದೇವಪ್ಪ ಸಂಬಂಧಿಕರಿಂದ ಕೃತ್ಯ ಆರೋಪ… ನಂಜನಗೂಡು,ಮಾ8,Tv10 ಕನ್ನಡ ನಂಜನಗೂಡು ಕಪಿಲಾ ನದಿ ಪಾತ್ರದ ಭಾರಿ ಮರಗಳ ಮಾರಣಹೋಮವಾಗಿದೆ.ಶ್ರೀಕಂಠೇಶ್ವರನ ದೇವಾಲಯ ಸಮೀಪ…
ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್ ವಾರ್ನಿಂಗ್…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು…

ಅಮಾನತಿನಲ್ಲಿರುವ ಎಂಡಿಎ ವಿಶೇಷ ತಹಸೀಲ್ದಾರ್ ರಾಜಶೇಖರ್ ಪರ ಭರ್ಜರಿ ಬ್ಯಾಂಟಿಂಗ್…ಶಿಸ್ತುಕ್ರಮ ವಹಿಸಲು ಮೀನಾಮೇಷ…ಸರ್ಕಾರದ ಪತ್ರಕ್ಕೂ ಡೋಂಟ್ ಕೇರ್…ಪ್ರಾಧಿಕಾರದ ಕಾನೂನು ಶಾಖೆ ಬಣ್ಣಬಯಲು…ಶಿಸ್ತುಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಪ್ರಾಧಿಕಾರಕ್ಕೆ ಖಡಕ್…

Leave a Reply

Your email address will not be published. Required fields are marked *